<p><strong>ದಾವಣಗೆರೆ:</strong> ಕ್ಷತ್ರಿಯ ಸಮಾಜದ ಶಾಸಕರಿಗೆಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಯಶವಂತರಾವ್ ಜಾಧವ್ ಅವರನ್ನು ವಿಧಾನ ಪರಿಷತ್ತಿನ ಸದಸ್ಯರನ್ನಾಗಿ ಮಾಡಿ ಸಚಿವ ಸ್ಥಾನ ನೀಡಬೇಕು ಎಂದು ಕರ್ನಾಟಕ ಕ್ಷತ್ರಿಯ ಒಕ್ಕೂಟದ ರಾಜ್ಯಾಧ್ಯಕ್ಷ ಉದಯ್ ಸಿಂಗ್ ಒತ್ತಾಯಿಸಿದರು.</p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕ್ಷತ್ರಿಯ ಸಮಾಜದವರು ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಸಹಕರಿಸಿದ್ದಾರೆ. ಜಿಲ್ಲೆಯಲ್ಲಿ 6 ಬಿಜೆಪಿ ಶಾಸಕರ ಗೆಲುವಿಗೆ ಕಾರಣರಾಗಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬರಲು ಪ್ರಥಮ ಹೆಜ್ಜೆ ಇಟ್ಟವರು ಸಮುದಾಯದ ಶಾಸಕರು. ಹೀಗಾಗಿ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>ಜಿಲ್ಲೆಯಲ್ಲಿ ಬಿಜೆಪಿ ಅಸ್ತಿತ್ವಕ್ಕೆ ಯಶವಂತರಾವ್ ಜಾಧವ್ ಕಾರಣರಾಗಿದ್ದಾರೆ. ಅವರನ್ನುವಿಧಾನ ಪರಿಷತ್ತಿನ ಸದಸ್ಯರನ್ನಾಗಿ ಮಾಡಬೇಕು. ಅಲ್ಲದೇ ಸಮುದಾಯದ ಶಾಸಕರನ್ನು ನಿಗಮ ಮಂಡಳಿಗೆ ನೇಮಕ ಮಾಡಬೇಕು ಎಂದು ಮನವಿ ಮಾಡಿದರು.</p>.<p>ಒಕ್ಕೂಟದ ಅಡಿಯಲ್ಲಿ ಕ್ಷತ್ರಿಯ ಸಮುದಾಯಗಳನ್ನು ಒಂದುಗೂಡಿಸುವ ಕೆಲಸ ನಡೆಯುತ್ತಿದೆ. ರಾಜ್ಯದ ಎಲ್ಲ ಹಳ್ಳಿಗಳಲ್ಲಿ ಒಕ್ಕೂಟ ರಚಿಸಲಾಗುವುದು ಎಂದು ಹೇಳಿದರು.</p>.<p>ಮುಖಂಡರಾದ ಬಾಡದ ಆನಂದರಾಜ್, ಪರಶುರಾಂ, ನರಸಿಂಗ್ ಗೋಸಾಯಿ, ಚಂದ್ರನಾಯ್ಕ, ಪ್ರವೀಣ್ಕುಮಾರ್, ಜ್ಞಾನೇಶ್, ಗೋಪಿನಾಥ್, ಮಹಾಂತೇಶ್ ಕಲಾಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಕ್ಷತ್ರಿಯ ಸಮಾಜದ ಶಾಸಕರಿಗೆಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಯಶವಂತರಾವ್ ಜಾಧವ್ ಅವರನ್ನು ವಿಧಾನ ಪರಿಷತ್ತಿನ ಸದಸ್ಯರನ್ನಾಗಿ ಮಾಡಿ ಸಚಿವ ಸ್ಥಾನ ನೀಡಬೇಕು ಎಂದು ಕರ್ನಾಟಕ ಕ್ಷತ್ರಿಯ ಒಕ್ಕೂಟದ ರಾಜ್ಯಾಧ್ಯಕ್ಷ ಉದಯ್ ಸಿಂಗ್ ಒತ್ತಾಯಿಸಿದರು.</p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕ್ಷತ್ರಿಯ ಸಮಾಜದವರು ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಸಹಕರಿಸಿದ್ದಾರೆ. ಜಿಲ್ಲೆಯಲ್ಲಿ 6 ಬಿಜೆಪಿ ಶಾಸಕರ ಗೆಲುವಿಗೆ ಕಾರಣರಾಗಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬರಲು ಪ್ರಥಮ ಹೆಜ್ಜೆ ಇಟ್ಟವರು ಸಮುದಾಯದ ಶಾಸಕರು. ಹೀಗಾಗಿ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>ಜಿಲ್ಲೆಯಲ್ಲಿ ಬಿಜೆಪಿ ಅಸ್ತಿತ್ವಕ್ಕೆ ಯಶವಂತರಾವ್ ಜಾಧವ್ ಕಾರಣರಾಗಿದ್ದಾರೆ. ಅವರನ್ನುವಿಧಾನ ಪರಿಷತ್ತಿನ ಸದಸ್ಯರನ್ನಾಗಿ ಮಾಡಬೇಕು. ಅಲ್ಲದೇ ಸಮುದಾಯದ ಶಾಸಕರನ್ನು ನಿಗಮ ಮಂಡಳಿಗೆ ನೇಮಕ ಮಾಡಬೇಕು ಎಂದು ಮನವಿ ಮಾಡಿದರು.</p>.<p>ಒಕ್ಕೂಟದ ಅಡಿಯಲ್ಲಿ ಕ್ಷತ್ರಿಯ ಸಮುದಾಯಗಳನ್ನು ಒಂದುಗೂಡಿಸುವ ಕೆಲಸ ನಡೆಯುತ್ತಿದೆ. ರಾಜ್ಯದ ಎಲ್ಲ ಹಳ್ಳಿಗಳಲ್ಲಿ ಒಕ್ಕೂಟ ರಚಿಸಲಾಗುವುದು ಎಂದು ಹೇಳಿದರು.</p>.<p>ಮುಖಂಡರಾದ ಬಾಡದ ಆನಂದರಾಜ್, ಪರಶುರಾಂ, ನರಸಿಂಗ್ ಗೋಸಾಯಿ, ಚಂದ್ರನಾಯ್ಕ, ಪ್ರವೀಣ್ಕುಮಾರ್, ಜ್ಞಾನೇಶ್, ಗೋಪಿನಾಥ್, ಮಹಾಂತೇಶ್ ಕಲಾಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>