ದಾವಣಗೆರೆ: ಅನಾರೋಗ್ಯ ದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಚಾರಣಾಧೀನ ಕೈದಿಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೇ ಸೋಮವಾರ ಮೃತಪಟ್ಟಿದ್ದಾರೆ.
ಚನ್ನಗಿರಿ ತಾಲ್ಲೂಕಿನ ಚಂದ್ರಪ್ಪ (60) ಮೃತಪಟ್ಟವರು. ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಇವರನ್ನು ಇಲ್ಲಿನ ಉಪಕಾರಾಗೃಹದಲ್ಲಿ ಇರಿಸಲಾಗಿತ್ತು. ಪ್ಯಾರಾಲಿಸೀಸ್ನಿಂದ ಬಳಲುತ್ತಿದ್ದ ಅವರನ್ನು ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.