ತುಮಕೂರು ಜಿಲ್ಲೆ ತಿಪಟೂರಿನ ದೇವರಾಜ್ (49) ಮೃತಪಟ್ಟವರು. ಒಂದು ವರ್ಷದಿಂದ ಅವರು ಜಿಲ್ಲಾ ಕಾರಾಗೃಹದಲ್ಲಿದ್ದರು. ಜ್ವರದಿಂದ ಬಳಲುತ್ತಿದ್ದ ಅವರನ್ನು ಜಿಲ್ಲಾ ಚಿಗಟೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರ ರಾತ್ರಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಬಸವಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮ್ಯಾಜಿಸ್ಟೇಟ್ ತನಿಖೆ ಮುಗಿಸಿ ಮೃತದೇಹವನ್ನು ಕುಟುಂಬದವರು ಒಯ್ದಿದ್ದಾರೆ.