ಜಗಳೂರು: ತಾಲ್ಲೂಕಿನ ಕಾನನಕಟ್ಟೆ ಗ್ರಾಮದ ಸಮೀಪ ಚಿತ್ರದುರ್ಗ-ಹೊಸಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ರಾತ್ರಿ ಲಾರಿ ಡಿಕ್ಕಿಯಾಗಿ ಕರಡಿಯೊಂದು ಮೃತಪಟ್ಟಿದೆ.
ಸಮೀಪದ ಅಣಬೂರು ಗುಡ್ಡದಿಂದ ಹೆದ್ದಾರಿ ದಾಟಿ ತೋಟಗಳಿಗೆ ತೆರಳುತ್ತಿದ್ದ ಸಮಯದಲ್ಲಿ ಲಾರಿ ಡಿಕ್ಕಿಯಾಗಿ ಮೃತಪಟ್ಟಿದೆ. ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.