ದಾವಣಗೆರೆ: ಮಕ್ಕಳ ಯೋಗಕ್ಷೇಮ, ಭವಿಷ್ಯ ಎರಡನ್ನೂ ಮನಸ್ಸಲ್ಲಿ ಇಟ್ಟುಕೊಂಡು ಶಾಲೆ ಆರಂಭಿಸಬೇಕೇ ಬೇಡವೇ ಎಂಬುದರ ಬಗ್ಗೆ ಶೀಘ್ರದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಗುರುವಾರ ಹೇಳಿದರು.
ಸುದ್ದಿಗಾರರ ಜತೆಗೆ ಮಾತನಾಡಿ, ‘ಎಲ್ಲ ಶಾಲಾಭಿವೃದ್ಧಿ ಸಮಿತಿಯವರು, ಮುಖ್ಯಶಿಕ್ಷಕರು ಹಾಗೂ ಪೋಷಕರ ಅಭಿ ಪ್ರಾಯ ಸಂಗ್ರಹಿಸಿದ್ದೇವೆ. ಮುಖ್ಯಮಂತ್ರಿ ಜತೆಗೆ ಚರ್ಚಿಸಿ ಮಕ್ಕಳ ಹಿತ ಮತ್ತು ಆರೋಗ್ಯವನ್ನೂ ದೃಷ್ಟಿಯಲ್ಲಿಟ್ಟುಕೊಂಡು ಕ್ರಮ ಕೈಗೊಳ್ಳುತ್ತೇವೆ’ಎಂದರು.