‘ಕಾರ್ಯಾಗಾರದ ದಿನಾಂಕವನ್ನು ಶೀಘ್ರ ನಿಗದಿಪಡಿಸಲಾಗುವುದು. ಕಾರ್ಯಾಗಾರದಲ್ಲಿ ದೇಶದ ಎಲ್ಲಾ ರಾಜ್ಯಗಳಿಂದ 200 ಪ್ರತಿನಿಧಿಗಳು ಬರಲಿದ್ದು, ಕಾನೂನು ತಜ್ಞರು, ನೌಕರರು ಭಾಗವಹಿಸಲಿದ್ದಾರೆ.ಕಾರ್ಯಾಗಾರದ ನಂತರ ಜನವರಿ 2022ರ ಒಳಗೆ ಎನ್ಪಿಎಸ್ ರದ್ದತಿ, ವೇತನ ಪರಿಷ್ಕರಣೆ, ಖಾಲಿ ಹುದ್ದೆಗಳ ಭರ್ತಿ ಸೇರಿ ಹಲವು ಬೇಡಿಕೆಗಳ ಕುರಿತು ರಾಜ್ಯವ್ಯಾಪಿ ವಾಹನ ಜಾಥಾ ನಡೆಸಲಾಗುವುದು’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.