‘ಹಳೆ ಭಾಗಕ್ಕೆ ದಾವಣಗೆರೆ ಒನ್ ಕೇಂದ್ರವನ್ನು ಮಂಜೂರು ಮಾಡಬೇಕು ಎಂದು ಪಾಲಿಕೆಗೆ ಮನವಿ ಸಲ್ಲಿಸಿದ್ದೆವು. ಆದರೂ ಇದುವರೆಗೆ ಕೇಂದ್ರ ಸ್ಥಾಪಿಸಿಲ್ಲ. ರಿಂಗ್ ರಸ್ತೆ ಅಭಿವೃದ್ಧಿಪಡಿಸುವಂತೆ ಹಲವು ಹೋರಾಟ ಮಾಡಿದರೂ ಪಾಲಿಕೆ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಗಮನ ಹರಿಸಿಲ್ಲ. ಹಳೆ ಭಾಗದಲ್ಲಿ ಸಮರ್ಪಕ ರಸ್ತೆ, ಚರಂಡಿ, ನೀರಿನ ಸೌಲಭ್ಯ ಇಲ್ಲ’ ಎಂದು ಅವರು ಆರೋಪಿಸಿದರು.