<p><strong>ದಾವಣಗೆರೆ:</strong>ದಾವಣಗೆರೆ ವಿಶ್ವವಿದ್ಯಾಲಯ ಜುಲೈ 22ರಂದು ಸ್ನಾತಕೋತ್ತರ ಪದವಿ ಪರೀಕ್ಷೆ ಘೋಷಣೆ ಮಾಡಿರುವುದನ್ನು ಖಂಡಿಸಿ ವಿಶ್ವವಿದ್ಯಾಲಯದ ಎದುರು ಶುಕ್ರವಾರ ಎಐಡಿಎಸ್ಒ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಯಿತು.</p>.<p>ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿರುವ ವಿಶ್ವವಿದ್ಯಾಲಯದ ಕ್ರಮ ಖಂಡಿಸಿದ ವಿದ್ಯಾರ್ಥಿಗಳು, ‘ಎಲ್ಲ ವಿದ್ಯಾರ್ಥಿಗಳಿಗೂ ಸರಿಯಾಗಿ ಕೋವಿಡ್ ಲಸಿಕೆ ಸಿಕ್ಕಿಲ್ಲ. ಹಾಸ್ಟೆಲ್ ಮತ್ತು ಬಸ್ ಸಂಪರ್ಕ ಇಲ್ಲ. ಇಂತಹ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ಸರಿಯಲ್ಲ. ಕೂಡಲೇ ಪರೀಕ್ಷೆಯನ್ನು ಮುಂದೂಡಬೇಕು’ ಎಂದು ಒತ್ತಾಯಿಸಿದರು.</p>.<p>ಎಲ್ಲಾ ವಿದ್ಯಾರ್ಥಿಗಳಿಗೆ ಎರಡು ಡೋಸ್ ಕೋವಿಡ್ ಲಸಿಕೆ ನೀಡುವವರೆಗೆ ಆಫ್ಲೈನ್ ತರಗತಿ ಮತ್ತು ಪರೀಕ್ಷೆಗಳನ್ನು ನಡೆಸಬಾರದು ಎಂದು ಒತ್ತಾಯಿಸಿ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರಾದ ಡಾ. ಅನಿತಾ ಎಚ್.ಎಸ್. ಅವರಿಗೆ ಮನವಿ ಸಲ್ಲಿಸಿದರು.</p>.<p>ವಿದ್ಯಾರ್ಥಿಗಳ ಮನವಿ ಆಲಿಸಿದ ಡಾ. ಅನಿತಾ, ‘ಸರ್ಕಾರದ ಆದೇಶದಂತೆ ವಿಶ್ವವಿದ್ಯಾಲಯ ಪರೀಕ್ಷೆ ನಡೆಸಲು ಮುಂದಾಗಿದೆ. ಸರ್ಕಾರ ಸೂಚಿಸಿದರೆ ಪರೀಕ್ಷೆ ಮುಂದೂಡಲಾಗುವುದು’ ಎಂದು ಹೇಳಿದರು.</p>.<p>ಪ್ರತಿಭಟನೆಯಲ್ಲಿ ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ಪೂಜಾ, ಪುಷ್ಪ, ಕಾವ್ಯ, ಕಿರಣ್, ಸೌಮ್ಯ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong>ದಾವಣಗೆರೆ ವಿಶ್ವವಿದ್ಯಾಲಯ ಜುಲೈ 22ರಂದು ಸ್ನಾತಕೋತ್ತರ ಪದವಿ ಪರೀಕ್ಷೆ ಘೋಷಣೆ ಮಾಡಿರುವುದನ್ನು ಖಂಡಿಸಿ ವಿಶ್ವವಿದ್ಯಾಲಯದ ಎದುರು ಶುಕ್ರವಾರ ಎಐಡಿಎಸ್ಒ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಯಿತು.</p>.<p>ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿರುವ ವಿಶ್ವವಿದ್ಯಾಲಯದ ಕ್ರಮ ಖಂಡಿಸಿದ ವಿದ್ಯಾರ್ಥಿಗಳು, ‘ಎಲ್ಲ ವಿದ್ಯಾರ್ಥಿಗಳಿಗೂ ಸರಿಯಾಗಿ ಕೋವಿಡ್ ಲಸಿಕೆ ಸಿಕ್ಕಿಲ್ಲ. ಹಾಸ್ಟೆಲ್ ಮತ್ತು ಬಸ್ ಸಂಪರ್ಕ ಇಲ್ಲ. ಇಂತಹ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ಸರಿಯಲ್ಲ. ಕೂಡಲೇ ಪರೀಕ್ಷೆಯನ್ನು ಮುಂದೂಡಬೇಕು’ ಎಂದು ಒತ್ತಾಯಿಸಿದರು.</p>.<p>ಎಲ್ಲಾ ವಿದ್ಯಾರ್ಥಿಗಳಿಗೆ ಎರಡು ಡೋಸ್ ಕೋವಿಡ್ ಲಸಿಕೆ ನೀಡುವವರೆಗೆ ಆಫ್ಲೈನ್ ತರಗತಿ ಮತ್ತು ಪರೀಕ್ಷೆಗಳನ್ನು ನಡೆಸಬಾರದು ಎಂದು ಒತ್ತಾಯಿಸಿ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರಾದ ಡಾ. ಅನಿತಾ ಎಚ್.ಎಸ್. ಅವರಿಗೆ ಮನವಿ ಸಲ್ಲಿಸಿದರು.</p>.<p>ವಿದ್ಯಾರ್ಥಿಗಳ ಮನವಿ ಆಲಿಸಿದ ಡಾ. ಅನಿತಾ, ‘ಸರ್ಕಾರದ ಆದೇಶದಂತೆ ವಿಶ್ವವಿದ್ಯಾಲಯ ಪರೀಕ್ಷೆ ನಡೆಸಲು ಮುಂದಾಗಿದೆ. ಸರ್ಕಾರ ಸೂಚಿಸಿದರೆ ಪರೀಕ್ಷೆ ಮುಂದೂಡಲಾಗುವುದು’ ಎಂದು ಹೇಳಿದರು.</p>.<p>ಪ್ರತಿಭಟನೆಯಲ್ಲಿ ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ಪೂಜಾ, ಪುಷ್ಪ, ಕಾವ್ಯ, ಕಿರಣ್, ಸೌಮ್ಯ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>