‘ಜಿಲ್ಲೆಯಲ್ಲಿ ಬೀಡಿ ಕಾರ್ಮಿಕರಿಗೆ ಕನಿಷ್ಠ ವೇತನ, ಪಿಎಫ್, ಬೋನಸ್, ಗ್ರ್ಯಾಜ್ಯುಟಿ ಹಾಗೂ ಗುರುತಿನ ಚೀಟಿಗೆ ಆಗ್ರಹಿಸಿ ಹಲವು ಹೋರಾಟಗಳನ್ನು ಮಾಡಿದರೂ ಪ್ರಯೋಜನವಾಗಿಲ್ಲ. ದಾವಣಗೆರೆ ಸಹಾಯಕ ಕಾರ್ಮಿಕರ ಆಯುಕ್ತರ ನೇತೃತ್ವದಲ್ಲಿ ಗುತ್ತಿಗೆದಾರರು ಮತ್ತು ಬೀಡಿ ಕಂಪನಿಗಳ ಮಾಲೀಕರೊಂದಿಗೆ ಹಲವು ಬಾರಿ ‘ಸಂಧಾನ ಸಭೆ’ಗಳನ್ನು ನಡೆಸಿದ್ದರೂ ಬೀಡಿ ಕಾರ್ಮಿಕರ ಸಮಸ್ಯೆಗಳು ಪರಿಹಾರವಾಗಿಲ್ಲ’ ಎಂದು ಯೂನಿಯನ್ ಅಧ್ಯಕ್ಷೆ ಜಬೀನಾಖಾನಂ ಮನವಿಯಲ್ಲಿ ತಿಳಿಸಿದ್ದಾರೆ.