ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಮಾತನಾಡಿದ ಸಂಘದ ಉತ್ತರ ಕರ್ನಾಟಕ ಘಟಕದ ಅಧ್ಯಕ್ಷ ಶಶಿಕಾಂತ ಪಡಸಲಗಿ, ‘ಎಲ್ಲ ಸರ್ಕಾರಗಳು ರೈತರಿಗೆ ಅನುಕೂಲಕರವಾದ ಯೋಜನೆಗಳನ್ನು ಜಾರಿಗೆ ತರುವಲ್ಲಿ ವಿಫಲವಾಗಿವೆ. ಹಳ್ಳಿಯ ರೈತರ ಮಕ್ಕಳ ಬೇಕು, ಬೇಡಗಳನ್ನು ಕೇಳಿಸಿಕೊಳ್ಳುತ್ತಿಲ್ಲ, ರೈತರ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ಕೊಡುವ ಬಗ್ಗೆ ಗಂಭೀರವಾಗಿ ಚಿಂತಿಸುತ್ತಿಲ್ಲ’ ಎಂದು ಆರೋಪಿಸಿದರು.