<p><strong>ದಾವಣಗೆರೆ</strong>: ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ರಾಷ್ಟ್ರೀಯ ಬಸವ ಸೇನೆ ರಾಜ್ಯ ಘಟಕದ ಅಧ್ಯಕ್ಷ ಶಿವನಗೌಡ ಪಾಟೀಲ್ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು.</p>.<p>‘ಸಣ್ಣ ಸಣ್ಣ ಸಮುದಾಯಗಳ ಅಭಿವೃದ್ಧಿಗೆ ಸರ್ಕಾರ ಈ ಹಿಂದೆಯೇ ಹಲವು ನಿಗಮಗಳನ್ನು ಸ್ಥಾಪಿಸಿ, ಆ ಸಮುದಾಯಗಳನ್ನು ಮೇಲೆತ್ತುವ ಕೆಲಸ ಮಾಡುತ್ತಿದೆ. ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಬೇಡಿಕೆ ಹಲವು ವರ್ಷಗಳ ಬೇಡಿಯಾಗಿದ್ದು, ಇದೇ ಸಮಾಜದ ಅನೇಕರು ಶಾಸಕ, ಸಚಿವರಾಗಿದ್ದರೂ ಬಹುದಿನಗಳ ಬೇಡಿಕೆ ಈಡೇರದೇ ಇರುವುದು ಬೇಸರದ ಸಂಗತಿ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ವೀರಶೈವ ಲಿಂಗಾಯತರಲ್ಲಿ ಅನೇಕರಿಗೆ ಇಂದಿಗೂ ವಸತಿ, ಭೂಮಿ ಇಲ್ಲ. ಲಕ್ಷಾಂತರ ಕುಟುಂಬಗಳು ಕೂಲಿ ಮಾಡಿ ಬದುಕುತ್ತಿವೆ. ರಾಜ್ಯದ ಬಹುದೊಡ್ಡ ಸಮುದಾಯವಾಗಿದ್ದರೂ ಆಳಿರುವ ಸರ್ಕಾರಗಳಿಂದ ತುಳಿತಕ್ಕೆ ಒಳಗಾಗುತ್ತಲೇ ಬಂದಿದೆ. ಆದ್ದರಿಂದ ಅಭಿವೃದ್ಧಿ ನಿಗಮ ಸ್ಥಾಪಿಸಿ ಸಮುದಾಯವನ್ನು ಮೇಲೆತ್ತುವ ಕೆಲಸ ಮಾಡಬೇಕು’ ಎಂದು ಆಗ್ರಹಿಸಿದರು.</p>.<p>‘ಬಸವಜಯಂತಿಯನ್ನು ರಾಷ್ಟ್ರೀಯ ಉತ್ಸವವಾಗಿ ಆಚರಿಸಬೇಕು. ಬಸವಣ್ಣನವರ ಐಕ್ಯ ಸ್ಥಳ ಕೂಡಲ ಸಂಗಮವನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಬೇಕು’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸುವುದಾಗಿ ತಿಳಿಸಿದರು.</p>.<p>ಸಂಘದ ಪದಾಧಿಕಾರಿಗಳಾದ ಟಿಂಕರ್ ಮಂಜಣ್ಣ, ನಿತೀಶ್, ಶ್ರೀಕಾಂತ್ ನೀಲಗುಂದ, ಅಭಿಷೇಕ್ ಟಿ. ಹಳೇಹೊಳೆ, ಮಂಜುಳಾ ಮಹೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ರಾಷ್ಟ್ರೀಯ ಬಸವ ಸೇನೆ ರಾಜ್ಯ ಘಟಕದ ಅಧ್ಯಕ್ಷ ಶಿವನಗೌಡ ಪಾಟೀಲ್ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು.</p>.<p>‘ಸಣ್ಣ ಸಣ್ಣ ಸಮುದಾಯಗಳ ಅಭಿವೃದ್ಧಿಗೆ ಸರ್ಕಾರ ಈ ಹಿಂದೆಯೇ ಹಲವು ನಿಗಮಗಳನ್ನು ಸ್ಥಾಪಿಸಿ, ಆ ಸಮುದಾಯಗಳನ್ನು ಮೇಲೆತ್ತುವ ಕೆಲಸ ಮಾಡುತ್ತಿದೆ. ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಬೇಡಿಕೆ ಹಲವು ವರ್ಷಗಳ ಬೇಡಿಯಾಗಿದ್ದು, ಇದೇ ಸಮಾಜದ ಅನೇಕರು ಶಾಸಕ, ಸಚಿವರಾಗಿದ್ದರೂ ಬಹುದಿನಗಳ ಬೇಡಿಕೆ ಈಡೇರದೇ ಇರುವುದು ಬೇಸರದ ಸಂಗತಿ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ವೀರಶೈವ ಲಿಂಗಾಯತರಲ್ಲಿ ಅನೇಕರಿಗೆ ಇಂದಿಗೂ ವಸತಿ, ಭೂಮಿ ಇಲ್ಲ. ಲಕ್ಷಾಂತರ ಕುಟುಂಬಗಳು ಕೂಲಿ ಮಾಡಿ ಬದುಕುತ್ತಿವೆ. ರಾಜ್ಯದ ಬಹುದೊಡ್ಡ ಸಮುದಾಯವಾಗಿದ್ದರೂ ಆಳಿರುವ ಸರ್ಕಾರಗಳಿಂದ ತುಳಿತಕ್ಕೆ ಒಳಗಾಗುತ್ತಲೇ ಬಂದಿದೆ. ಆದ್ದರಿಂದ ಅಭಿವೃದ್ಧಿ ನಿಗಮ ಸ್ಥಾಪಿಸಿ ಸಮುದಾಯವನ್ನು ಮೇಲೆತ್ತುವ ಕೆಲಸ ಮಾಡಬೇಕು’ ಎಂದು ಆಗ್ರಹಿಸಿದರು.</p>.<p>‘ಬಸವಜಯಂತಿಯನ್ನು ರಾಷ್ಟ್ರೀಯ ಉತ್ಸವವಾಗಿ ಆಚರಿಸಬೇಕು. ಬಸವಣ್ಣನವರ ಐಕ್ಯ ಸ್ಥಳ ಕೂಡಲ ಸಂಗಮವನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಬೇಕು’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸುವುದಾಗಿ ತಿಳಿಸಿದರು.</p>.<p>ಸಂಘದ ಪದಾಧಿಕಾರಿಗಳಾದ ಟಿಂಕರ್ ಮಂಜಣ್ಣ, ನಿತೀಶ್, ಶ್ರೀಕಾಂತ್ ನೀಲಗುಂದ, ಅಭಿಷೇಕ್ ಟಿ. ಹಳೇಹೊಳೆ, ಮಂಜುಳಾ ಮಹೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>