ಆಸ್ಪತ್ರೆಗಳಲ್ಲಿ ಬೆಡ್ಗಳಿಗಾಗಿ ಸರತಿ ಕಾಯಬೇಕು, ಕಾಯಿಲೆ ಉಲ್ಬಣವಾದರೆ ಆಮ್ಲಜನಕ್ಕಾಗಿ ಸರತಿಯಲ್ಲಿರಬೇಕು. ಚಿಕಿತ್ಸೆ ಫಲಕಾರಿಯಾಗದೆ ಸತ್ತರೆ ಅಂತ್ಯಕ್ರಿಯೆ ನೇರವೇರಿಸಲು ಕೂಡ 20 ಗಂಟೆಗಳಕಾಲ ಸರತಿಯಲ್ಲಿ ಕಾಯಬೇಕು. ಕೆಲವು ಚಿತಾಗಾರದಲ್ಲಿ ಹೌಸ್ಪುಲ್ ಎಂದು ಫಲಕಗಳನ್ನು ಹಾಕಿರುವುದೂ ಕಂಡಿವೆ. ಇಂಥ ಮನ ಕುಲಕುವ ವಿಷಯಗಳಿಂದ ಜನಸಾಮಾನ್ಯರು ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ. ಇದನ್ನು ಗಮನಿಸಿದರೆ ಸರ್ಕಾರ ಸಂವಿಧಾನ ಬದ್ಧವಾಗಿ ಕಾರ್ಯನಿರ್ವಹಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.