<p><strong>ನ್ಯಾಮತಿ (ದಾವಣಗೆರೆ):</strong> ತಾಲ್ಲೂಕಿನ ಭಾಯಗಡದಲ್ಲಿ ಸಂತ ಸೇವಾಲಾಲರ ಜಯಂತ್ಯುತ್ಸವದ ಅಂಗವಾಗಿ ಆಯೋಜಿಸಿದ್ದ ಕಬಡ್ಡಿ ಪಂದ್ಯಕ್ಕೆ ಚಾಲನೆ ನೀಡಲು ರೈಡರ್ ಆಗಿ ಮೈದಾನಕ್ಕೆ ಇಳಿದಿದ್ದ ವಿಧಾನಸಭೆಯ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಆಯತಪ್ಪಿ ಬಿದ್ದಿದ್ದಾರೆ.</p><p>ಮುಗ್ಗರಿಸಿ ಬಿದ್ದ ಅವರನ್ನು ಆಟಗಾರರು ತಕ್ಷಣ ಮೇಲೆತ್ತಿದ್ದಾರೆ. ಕೊಂಚ ಹೊತ್ತು ಸುಧಾರಿಸಿಕೊಂಡು ಮೈದಾನದಿಂದ ಹೊರನಡೆದಿದ್ದಾರೆ. ಅವರು ಆಯತಪ್ಪಿ ಬಿದ್ದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.</p>.ದಾವಣಗೆರೆ: ಸೇವಾಲಾಲ್ ಜಾತ್ರೆ ಸಿದ್ಧತೆಗೆ ರುದ್ರಪ್ಪ ಲಮಾಣಿ ಸೂಚನೆ.<p>ಸಂತ ಸೇವಾಲಾಲ್ ಜಯಂತ್ಯುತ್ಸವದ ಪ್ರಯುಕ್ತ ಶುಕ್ರವಾರ ರಾತ್ರಿ ಕ್ರೀಡಾಕೂಟ ಆಯೋಜಿಸಲಾಗಿತ್ತು. ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ ಅಧ್ಯಕ್ಷರೂ ಆಗಿರುವ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಕಬಡ್ಡಿ ರೇಡಿಂಗ್ಗೆ ಮೈದಾನಕ್ಕೆ ಇಳಿದಿದ್ದರು. ಕ್ರೀಡಾಸ್ಫೂರ್ತಿಯಲ್ಲಿ ಆಟವಾಡುತ್ತಿದ್ದ ಅವರು ಆಯತಪ್ಪಿ ಬಿದ್ದಿದ್ದರು.</p><p>‘ಉಪಸಭಾಧ್ಯಕ್ಷರು ಆರೋಗ್ಯವಾಗಿದ್ದಾರೆ. ಶನಿವಾರ ನಡೆದ ಭೋಗ್ ಕಾರ್ಯಕ್ರಮದಲ್ಲಿ ಕೂಡ ಪಾಲ್ಗೊಂಡಿದ್ದರು. ಮಧ್ಯಾಹ್ನದ ಬಳಿಕ ಭಾಯಗಡದಿಂದ ತೆರಳಿದರು’ ಎಂದು ಮಠದ ಮೂಲಗಳು ಮಾಹಿತಿ ನೀಡಿವೆ.</p> .ಲಕ್ಷ್ಮೇಶ್ವರ | ಶಾಸಕ ಡಾ.ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನ್ಯಾಮತಿ (ದಾವಣಗೆರೆ):</strong> ತಾಲ್ಲೂಕಿನ ಭಾಯಗಡದಲ್ಲಿ ಸಂತ ಸೇವಾಲಾಲರ ಜಯಂತ್ಯುತ್ಸವದ ಅಂಗವಾಗಿ ಆಯೋಜಿಸಿದ್ದ ಕಬಡ್ಡಿ ಪಂದ್ಯಕ್ಕೆ ಚಾಲನೆ ನೀಡಲು ರೈಡರ್ ಆಗಿ ಮೈದಾನಕ್ಕೆ ಇಳಿದಿದ್ದ ವಿಧಾನಸಭೆಯ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಆಯತಪ್ಪಿ ಬಿದ್ದಿದ್ದಾರೆ.</p><p>ಮುಗ್ಗರಿಸಿ ಬಿದ್ದ ಅವರನ್ನು ಆಟಗಾರರು ತಕ್ಷಣ ಮೇಲೆತ್ತಿದ್ದಾರೆ. ಕೊಂಚ ಹೊತ್ತು ಸುಧಾರಿಸಿಕೊಂಡು ಮೈದಾನದಿಂದ ಹೊರನಡೆದಿದ್ದಾರೆ. ಅವರು ಆಯತಪ್ಪಿ ಬಿದ್ದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.</p>.ದಾವಣಗೆರೆ: ಸೇವಾಲಾಲ್ ಜಾತ್ರೆ ಸಿದ್ಧತೆಗೆ ರುದ್ರಪ್ಪ ಲಮಾಣಿ ಸೂಚನೆ.<p>ಸಂತ ಸೇವಾಲಾಲ್ ಜಯಂತ್ಯುತ್ಸವದ ಪ್ರಯುಕ್ತ ಶುಕ್ರವಾರ ರಾತ್ರಿ ಕ್ರೀಡಾಕೂಟ ಆಯೋಜಿಸಲಾಗಿತ್ತು. ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ ಅಧ್ಯಕ್ಷರೂ ಆಗಿರುವ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಕಬಡ್ಡಿ ರೇಡಿಂಗ್ಗೆ ಮೈದಾನಕ್ಕೆ ಇಳಿದಿದ್ದರು. ಕ್ರೀಡಾಸ್ಫೂರ್ತಿಯಲ್ಲಿ ಆಟವಾಡುತ್ತಿದ್ದ ಅವರು ಆಯತಪ್ಪಿ ಬಿದ್ದಿದ್ದರು.</p><p>‘ಉಪಸಭಾಧ್ಯಕ್ಷರು ಆರೋಗ್ಯವಾಗಿದ್ದಾರೆ. ಶನಿವಾರ ನಡೆದ ಭೋಗ್ ಕಾರ್ಯಕ್ರಮದಲ್ಲಿ ಕೂಡ ಪಾಲ್ಗೊಂಡಿದ್ದರು. ಮಧ್ಯಾಹ್ನದ ಬಳಿಕ ಭಾಯಗಡದಿಂದ ತೆರಳಿದರು’ ಎಂದು ಮಠದ ಮೂಲಗಳು ಮಾಹಿತಿ ನೀಡಿವೆ.</p> .ಲಕ್ಷ್ಮೇಶ್ವರ | ಶಾಸಕ ಡಾ.ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>