ದಾವಣಗೆರೆ: ಕೊರೊನಾದಿಂದ ಗುಣಮುಖರಾಗಿ ಬಿಡುಗಡೆಗೊಂಡಿರುವ ನರ್ಸ್ ವಿರುದ್ಧ ಅವಹೇಳನಕಾರಿ ಬರಹ ಬರೆದ ಆರೋಪದ ಮೇರೆಗೆ ‘ವಂದು ವಾಣಿ’ (Vandu vani) ಫೇಸ್ಬುಕ್ ಖಾತೆದಾರರಾದ ಮಂಜುಳಾ ಅವರನ್ನು ಸಿಇಎನ್ ಅಪರಾಧ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ನಿಟುವಳ್ಳಿಯವರಾದ ಮಂಜುಳಾ ಅವರು ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಮಾಹಿತಿ ಆಧರಿಸಿ ಅವರನ್ನು ಬಂಧಿಸಲಾಗಿದೆ ಎಂದು ಎಸ್.ಪಿ.ಹನುಮಂತರಾಯ ತಿಳಿಸಿದ್ದಾರೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವೇಳೆ ಅವಹೇಳನಕಾರಿಯಾಗಿ ಬರಹ ಬರೆದು ಅವಾಚ್ಯ ಶಬ್ಧಗಳಿಂದ ನಿಂದಿಸಲಾಗಿತ್ತು. ಈ ಕುರಿತು ಕ್ರಮ ಕೈಗೊಳ್ಳುವಂತೆ ನರ್ಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರನ್ನು ಆಧರಿಸಿ ಪೊಲೀಸರು ಬಂಧಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.