<p><strong>ಹರಪನಹಳ್ಳಿ: </strong>ತಾಲ್ಲೂಕಿನ ಶೃಂಗಾರತೋಟ ಗ್ರಾಮದಲ್ಲಿ ಶೇಂಗಾ ಬೆಳೆಗೆ ಎಲೆ ತಿನ್ನುವ ದೊಮ್ಮಿ ಹುಳ ಕಾಟ ಹೆಚ್ಚಿದ್ದು,ರೈತರು ಆತಂಕಕ್ಕೆ ಒಳಗಾಗಿದ್ದಾರೆ.</p>.<p>ತಾಲ್ಲೂಕಿನ ಕೆಲವೆಡೆ ಈರುಳ್ಳಿಗೆ ಕೊಳೆ ರೋಗ ಕಾಣಿಸಿಕೊಂಡು ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಶೃಂಗಾರತೋಟ, ಅಲರಸೀಕೆರೆ, ಬಾಗಳಿ, ದಡಗಾರನಹಳ್ಳಿ, ಕಾಯಕದಹಳ್ಳಿ ಸುತ್ತಮುತ್ತ ಜಮೀನುಗಳಲ್ಲಿ ದೊಮ್ಮಿ ಹುಳು ಬಾಧೆ ಹೆಚ್ಚಾಗಿದೆ. ಇದರಿಂದ ಶೇಂಗಾ, ಸೇವಂತಿ, ಈರುಳ್ಳಿ ಬೆಳೆ ನಷ್ಟವಾಗಿದೆ.</p>.<p>ರೈತರು ಯಾವುದೇ ಔಷಧ ತಂದು ಸಿಂಪಡಿಸಿದರೂ ಪ್ರಯೋಜನವಾಗುತ್ತಿಲ್ಲ. ದಿನದಿಂದ ದಿನಕ್ಕೆ ಹೊಲವನ್ನೇ ಹುಳಗಳು ತಿಂದು ಹಾಕುತ್ತಿವೆ. ಶೃಂಗಾರತೋಟದ ಕುರಿ ರಾಮಪ್ಪ ಅವರ 2 ಎಕರೆ, ಹನುಮಂತ ಅವರ ಒಂದೂವರೆ ಎಕರೆ ಶೇಂಗಾ ಬೆಳೆ ನಾಶವಾಗಿದೆ. ಸುತ್ತಮುತ್ತಲ ಗ್ರಾಮಗಳಲ್ಲೂ ಹುಳಗಳ ಹಾವಳಿ ಹೆಚ್ಚಾಗುತ್ತಿದೆ. ಈರುಳ್ಳಿ, ಶೇಂಗಾ, ಸೇವಂತಿ ಬೆಳೆ ನಾಶವಾಗಿರುವ ರೈತರಿಗೆ ಸರ್ಕಾರ ಎಕರೆಗೆ ₹ 50 ಸಾವಿರ ಪರಿಹಾರ ನೀಡಬೇಕು ಎಂದು ರೈತ ಉಪ್ಪಾರ ಬಸವರಾಜ್<br />ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಪನಹಳ್ಳಿ: </strong>ತಾಲ್ಲೂಕಿನ ಶೃಂಗಾರತೋಟ ಗ್ರಾಮದಲ್ಲಿ ಶೇಂಗಾ ಬೆಳೆಗೆ ಎಲೆ ತಿನ್ನುವ ದೊಮ್ಮಿ ಹುಳ ಕಾಟ ಹೆಚ್ಚಿದ್ದು,ರೈತರು ಆತಂಕಕ್ಕೆ ಒಳಗಾಗಿದ್ದಾರೆ.</p>.<p>ತಾಲ್ಲೂಕಿನ ಕೆಲವೆಡೆ ಈರುಳ್ಳಿಗೆ ಕೊಳೆ ರೋಗ ಕಾಣಿಸಿಕೊಂಡು ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಶೃಂಗಾರತೋಟ, ಅಲರಸೀಕೆರೆ, ಬಾಗಳಿ, ದಡಗಾರನಹಳ್ಳಿ, ಕಾಯಕದಹಳ್ಳಿ ಸುತ್ತಮುತ್ತ ಜಮೀನುಗಳಲ್ಲಿ ದೊಮ್ಮಿ ಹುಳು ಬಾಧೆ ಹೆಚ್ಚಾಗಿದೆ. ಇದರಿಂದ ಶೇಂಗಾ, ಸೇವಂತಿ, ಈರುಳ್ಳಿ ಬೆಳೆ ನಷ್ಟವಾಗಿದೆ.</p>.<p>ರೈತರು ಯಾವುದೇ ಔಷಧ ತಂದು ಸಿಂಪಡಿಸಿದರೂ ಪ್ರಯೋಜನವಾಗುತ್ತಿಲ್ಲ. ದಿನದಿಂದ ದಿನಕ್ಕೆ ಹೊಲವನ್ನೇ ಹುಳಗಳು ತಿಂದು ಹಾಕುತ್ತಿವೆ. ಶೃಂಗಾರತೋಟದ ಕುರಿ ರಾಮಪ್ಪ ಅವರ 2 ಎಕರೆ, ಹನುಮಂತ ಅವರ ಒಂದೂವರೆ ಎಕರೆ ಶೇಂಗಾ ಬೆಳೆ ನಾಶವಾಗಿದೆ. ಸುತ್ತಮುತ್ತಲ ಗ್ರಾಮಗಳಲ್ಲೂ ಹುಳಗಳ ಹಾವಳಿ ಹೆಚ್ಚಾಗುತ್ತಿದೆ. ಈರುಳ್ಳಿ, ಶೇಂಗಾ, ಸೇವಂತಿ ಬೆಳೆ ನಾಶವಾಗಿರುವ ರೈತರಿಗೆ ಸರ್ಕಾರ ಎಕರೆಗೆ ₹ 50 ಸಾವಿರ ಪರಿಹಾರ ನೀಡಬೇಕು ಎಂದು ರೈತ ಉಪ್ಪಾರ ಬಸವರಾಜ್<br />ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>