<p><strong>ಬಸವಾಪಟ್ಟಣ:</strong> ಕೇಂದ್ರ ಸರ್ಕಾರವು 2047ರ ವಿಕಸಿತ ಭಾರತದ ಗುರಿ ಇಟ್ಟುಕೊಂಡು ಗ್ರಾಮೀಣ ಉದ್ಯೋಗ ಸೃಷ್ಟಿ ಮಾಡಿದೆ ಎಂದು ಮಾಜಿ ಶಾಸಕ ಎಂ.ಬಸವರಾಜ ನಾಯ್ಕ್ ಹೇಳಿದರು. </p>.<p>ಗ್ರಾಮದ ಸಮೀಪ ಕೂಲಿ ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ವಿಬಿ–ಜಿರಾಮ್ಜಿ ಯೋಜನೆಯ ಬಗ್ಗೆ ವಿವರಿಸಿದರು. </p>.<p>ಯೋಜನೆಯು ಏಪ್ರಿಲ್ ಒಂದರಿಂದ ಜಾರಿಗೆ ಬರಲಿದ್ದು, ವರ್ಷದಲ್ಲಿ 125 ದಿನಗಳ ಕೂಲಿ ನೀಡಲಾಗುತ್ತದೆ. ದಿನಕ್ಕೆ ₹370 ಕೂಲಿಯನ್ನು ಖಾತೆಗೆ ಜಮೆ ಮಾಡಲಾಗುತ್ತದೆ. ಯಾವ ಮಧ್ಯವರ್ತಿಗಳ ಪಾತ್ರವೂ ಇರುವುದಿಲ್ಲ. ಗ್ರಾಮ ಸಭೆಗಳ ಮೂಲಕ ಕಾಮಗಾರಿ ಯೋಜನೆ ಸಿದ್ಧಪಡಿಸಿ ಅನುಷ್ಠಾನಗೊಳಿಸಲಾಗುತ್ತದೆ. ಬಯೋಮೆಟ್ರಿಕ್ ಹಾಜರಾತಿ ಇರುವುದರಿಂದ ಕಾರ್ಮಿಕನಿಗೆ ಅನ್ಯಾಯವಾಗುವುದಿಲ್ಲ. ಈ ಬಗ್ಗೆ ಯಾವ ಆತಂಕವೂ ಬೇಡ’ ಎಂದು ತಿಳಿಸಿದರು.</p>.<p>ಐದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯೋಜನೆಯ ಮಾಹಿತಿ ನೀಡಲಾಗಿದೆ ಎಂದು ಮಾಯಕೊಂಡ ಬಿಜೆಪಿ ಮಂಡಲ ಪ್ರಧಾನ ಬಿ.ಜಿ.ಸಚಿನ್ ಹೇಳಿದರು.</p>.<p>ಮಂಡಲದ ಪ್ರಧಾನ ಕಾರ್ಯದರ್ಶಿ ಕೆ.ಮಲ್ಲಿಕಾರ್ಜುನ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಡಿ.ಆರ್.ಹಾಲೇಶ್, ಎಸ್.ಎಂ.ರುದ್ರೇಶ್, ವಿ.ಎಸ್.ಎಸ್.ಎನ್. ಅಧ್ಯಕ್ಷ ಎಂ.ಎಸ್. ರೇವಣಸಿದ್ಧಪ್ಪ, ನಿರ್ದೇಶಕ ಡಿ.ನಾಗರಾಜ್, ಹಾಲುಮತ ಸಮೂಹದ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಹೊನ್ನಪ್ಪ, ಬಿಜೆಪಿ ಮುಖಂಡರಾದ ಬಿ.ಜಿ.ಷಣ್ಮುಖಪ್ಪ, ಕೆ.ಎಂ.ಮಲ್ಲಿಕಾರ್ಜುನ, ಎಂ.ಜಿ.ಬಸವನಗೌಡ, ಎಂ.ವಿ.ಬಸವರಾಜಪ್ಪ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಾಪಟ್ಟಣ:</strong> ಕೇಂದ್ರ ಸರ್ಕಾರವು 2047ರ ವಿಕಸಿತ ಭಾರತದ ಗುರಿ ಇಟ್ಟುಕೊಂಡು ಗ್ರಾಮೀಣ ಉದ್ಯೋಗ ಸೃಷ್ಟಿ ಮಾಡಿದೆ ಎಂದು ಮಾಜಿ ಶಾಸಕ ಎಂ.ಬಸವರಾಜ ನಾಯ್ಕ್ ಹೇಳಿದರು. </p>.<p>ಗ್ರಾಮದ ಸಮೀಪ ಕೂಲಿ ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ವಿಬಿ–ಜಿರಾಮ್ಜಿ ಯೋಜನೆಯ ಬಗ್ಗೆ ವಿವರಿಸಿದರು. </p>.<p>ಯೋಜನೆಯು ಏಪ್ರಿಲ್ ಒಂದರಿಂದ ಜಾರಿಗೆ ಬರಲಿದ್ದು, ವರ್ಷದಲ್ಲಿ 125 ದಿನಗಳ ಕೂಲಿ ನೀಡಲಾಗುತ್ತದೆ. ದಿನಕ್ಕೆ ₹370 ಕೂಲಿಯನ್ನು ಖಾತೆಗೆ ಜಮೆ ಮಾಡಲಾಗುತ್ತದೆ. ಯಾವ ಮಧ್ಯವರ್ತಿಗಳ ಪಾತ್ರವೂ ಇರುವುದಿಲ್ಲ. ಗ್ರಾಮ ಸಭೆಗಳ ಮೂಲಕ ಕಾಮಗಾರಿ ಯೋಜನೆ ಸಿದ್ಧಪಡಿಸಿ ಅನುಷ್ಠಾನಗೊಳಿಸಲಾಗುತ್ತದೆ. ಬಯೋಮೆಟ್ರಿಕ್ ಹಾಜರಾತಿ ಇರುವುದರಿಂದ ಕಾರ್ಮಿಕನಿಗೆ ಅನ್ಯಾಯವಾಗುವುದಿಲ್ಲ. ಈ ಬಗ್ಗೆ ಯಾವ ಆತಂಕವೂ ಬೇಡ’ ಎಂದು ತಿಳಿಸಿದರು.</p>.<p>ಐದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯೋಜನೆಯ ಮಾಹಿತಿ ನೀಡಲಾಗಿದೆ ಎಂದು ಮಾಯಕೊಂಡ ಬಿಜೆಪಿ ಮಂಡಲ ಪ್ರಧಾನ ಬಿ.ಜಿ.ಸಚಿನ್ ಹೇಳಿದರು.</p>.<p>ಮಂಡಲದ ಪ್ರಧಾನ ಕಾರ್ಯದರ್ಶಿ ಕೆ.ಮಲ್ಲಿಕಾರ್ಜುನ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಡಿ.ಆರ್.ಹಾಲೇಶ್, ಎಸ್.ಎಂ.ರುದ್ರೇಶ್, ವಿ.ಎಸ್.ಎಸ್.ಎನ್. ಅಧ್ಯಕ್ಷ ಎಂ.ಎಸ್. ರೇವಣಸಿದ್ಧಪ್ಪ, ನಿರ್ದೇಶಕ ಡಿ.ನಾಗರಾಜ್, ಹಾಲುಮತ ಸಮೂಹದ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಹೊನ್ನಪ್ಪ, ಬಿಜೆಪಿ ಮುಖಂಡರಾದ ಬಿ.ಜಿ.ಷಣ್ಮುಖಪ್ಪ, ಕೆ.ಎಂ.ಮಲ್ಲಿಕಾರ್ಜುನ, ಎಂ.ಜಿ.ಬಸವನಗೌಡ, ಎಂ.ವಿ.ಬಸವರಾಜಪ್ಪ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>