ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನೇತೃತ್ವದಲ್ಲಿ ಪಟ್ಟಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ 75 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಹಶೀಲ್ದಾರ್ ಡಾ.ನಾಗವೇಣಿ ಧ್ವಜಾರೋಹಣ ನೆರವೇರಿಸಿದರು. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು. ಪಟ್ಟಣ ಪಂಚಾಯಿತಿ ಅಧ್ಯಕ್ಷ ಆರ್. ತಿಪ್ಪೇಸ್ವಾಮಿ, ಉಪಾಧ್ಯಕ್ಷೆ ಲಲಿತಾ ಶಿವಣ್ಣ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಸಿದ್ದೇಶ್, ಎಪಿಎಂಸಿ ಅಧ್ಯಕ್ಷ ರೇಣುಕಾನಂದ, ತಾಲ್ಲೂಕು ಪಂಚಾಯಿತಿ ಇಒ ಲಕ್ಷ್ಮೀಪತಿ ಇದ್ದರು.