<p><strong>ದಾವಣಗೆರೆ:</strong> ಶ್ರಾವಣ ಮಾಸದ ಮೊದಲ ಹಬ್ಬ ನಾಗರ ಪಂಚಮಿಯನ್ನು ಭಾನುವಾರ ನಗರದಲ್ಲಿ ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಕೆಲವು ಭಾಗಗಳಲ್ಲಿ ಸೋಮವಾರ ನಾಗರ ಪಂಚಮಿ ನಡೆಯಲಿದೆ.</p>.<p>ಮಹಿಳೆಯರು–ಮಕ್ಕಳು ಮರಕ್ಕೆ ಜೋಕಾಲಿ ಕಟ್ಟಿ ಆಡಿದರೆ, ಯುವಕರು ದೈಹಿಕ ಕಸರತ್ತಿನ ಕ್ರೀಡೆಗಳಲ್ಲಿ ಪಾಲ್ಗೊಂಡು ಮನೋರಂಜನೆ ಪಡೆದರು. ಬೆಳಿಗ್ಗೆ ಮಹಿಳೆಯರು ಮನೆಯ ಮುಂದೆ ರಂಗೋಲಿಯಲ್ಲಿ ಬಣ್ಣ ಬಣ್ಣದ ನಾಗನ ಚಿತ್ರ ಬಿಡಿಸಿದರು. ಹೊಸ ಬಟ್ಟೆ ತೊಟ್ಟು ದೇವಸ್ಥಾನ, ನಾಗಪ್ಪನ ಕಟ್ಟೆಗಳಿಗೆ ತೆರಳಿ ಹಾಲೆರೆದರು.</p>.<p>ನಾಗರ ಪಂಚಮಿಯ ಪ್ರಯುಕ್ತ ಹೂವು ಹಣ್ಣುಗಳ ದರ ಏರಿಕೆಯಾಗಿವೆ. ಅದರಲ್ಲೂ ಬಾಳೆಹಣ್ಣಿನ ದರ ದುಪ್ಪಟ್ಟಾಗಿದೆ. ಎರಡು ದಿನಗಳ ಹಿಂದೆ ಏಲಕ್ಕಿ ಬಾಳೆಹಣ್ಣು ಕೆ.ಜಿ.ಗೆ ₹ 50– ₹ 60 ಇದ್ದಿದ್ದು, ಭಾನುವಾರ ₹ 100ಕ್ಕೆ ತಲುಪಿತ್ತು. ತೆಂಗಿನಕಾಯಿ ದರ ₹ 5 ಹೆಚ್ಚಳವಾಗಿತ್ತು.</p>.<p><strong>ಕೆಲವೆಡೆ ಜಾಗೃತಿ:</strong> ನಾಗರ ಪಂಚಮಿ ದಿನ ಪೂಜಿಸಿದ ಬಳಿಕ ಹಾಲನ್ನು ಎರೆಯಬೇಡಿ ಕುಡಿಯಿರಿ ಎಂದು ವಿವಿಧ ಮಠಗಳಿಂದ ಜಾಗೃತಿ ಮೂಡಿಸುವ ಕಾರ್ಯಗಳೂ ಕೆಲವೆಡೆ ನಡೆದವು. ವಿರಕ್ತಮಠದಿಂದ ಬಸವಪ್ರಭು ಸ್ವಾಮೀಜಿ ನೇತೃತ್ವದಲ್ಲಿ ಹಾಲು ಕುಡಿಸುವ ಜಾಗೃತಿ ಅಭಿಯಾನವನ್ನು ಸೋಮವಾರ ಹಮ್ಮಿಕೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಶ್ರಾವಣ ಮಾಸದ ಮೊದಲ ಹಬ್ಬ ನಾಗರ ಪಂಚಮಿಯನ್ನು ಭಾನುವಾರ ನಗರದಲ್ಲಿ ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಕೆಲವು ಭಾಗಗಳಲ್ಲಿ ಸೋಮವಾರ ನಾಗರ ಪಂಚಮಿ ನಡೆಯಲಿದೆ.</p>.<p>ಮಹಿಳೆಯರು–ಮಕ್ಕಳು ಮರಕ್ಕೆ ಜೋಕಾಲಿ ಕಟ್ಟಿ ಆಡಿದರೆ, ಯುವಕರು ದೈಹಿಕ ಕಸರತ್ತಿನ ಕ್ರೀಡೆಗಳಲ್ಲಿ ಪಾಲ್ಗೊಂಡು ಮನೋರಂಜನೆ ಪಡೆದರು. ಬೆಳಿಗ್ಗೆ ಮಹಿಳೆಯರು ಮನೆಯ ಮುಂದೆ ರಂಗೋಲಿಯಲ್ಲಿ ಬಣ್ಣ ಬಣ್ಣದ ನಾಗನ ಚಿತ್ರ ಬಿಡಿಸಿದರು. ಹೊಸ ಬಟ್ಟೆ ತೊಟ್ಟು ದೇವಸ್ಥಾನ, ನಾಗಪ್ಪನ ಕಟ್ಟೆಗಳಿಗೆ ತೆರಳಿ ಹಾಲೆರೆದರು.</p>.<p>ನಾಗರ ಪಂಚಮಿಯ ಪ್ರಯುಕ್ತ ಹೂವು ಹಣ್ಣುಗಳ ದರ ಏರಿಕೆಯಾಗಿವೆ. ಅದರಲ್ಲೂ ಬಾಳೆಹಣ್ಣಿನ ದರ ದುಪ್ಪಟ್ಟಾಗಿದೆ. ಎರಡು ದಿನಗಳ ಹಿಂದೆ ಏಲಕ್ಕಿ ಬಾಳೆಹಣ್ಣು ಕೆ.ಜಿ.ಗೆ ₹ 50– ₹ 60 ಇದ್ದಿದ್ದು, ಭಾನುವಾರ ₹ 100ಕ್ಕೆ ತಲುಪಿತ್ತು. ತೆಂಗಿನಕಾಯಿ ದರ ₹ 5 ಹೆಚ್ಚಳವಾಗಿತ್ತು.</p>.<p><strong>ಕೆಲವೆಡೆ ಜಾಗೃತಿ:</strong> ನಾಗರ ಪಂಚಮಿ ದಿನ ಪೂಜಿಸಿದ ಬಳಿಕ ಹಾಲನ್ನು ಎರೆಯಬೇಡಿ ಕುಡಿಯಿರಿ ಎಂದು ವಿವಿಧ ಮಠಗಳಿಂದ ಜಾಗೃತಿ ಮೂಡಿಸುವ ಕಾರ್ಯಗಳೂ ಕೆಲವೆಡೆ ನಡೆದವು. ವಿರಕ್ತಮಠದಿಂದ ಬಸವಪ್ರಭು ಸ್ವಾಮೀಜಿ ನೇತೃತ್ವದಲ್ಲಿ ಹಾಲು ಕುಡಿಸುವ ಜಾಗೃತಿ ಅಭಿಯಾನವನ್ನು ಸೋಮವಾರ ಹಮ್ಮಿಕೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>