<p><strong>ಶೆಟ್ಟಿಹಳ್ಳಿ (ಚನ್ನಗಿರಿ):</strong> ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಸಂಘವು ಯಾವುದೇ ಫಲಾಪೇಕ್ಷೆ ಇಲ್ಲದೇ ಸಾಮಾಜಿಕ ಕಳಕಳಿಯಿಂದ ರೈತರ ಬದುಕು ಹಸನು ಮಾಡುವ ಸಲುವಾಗಿ ಕೆರೆಗಳ ಅಭಿವೃದ್ಧಿಗೆ ಮುಂದಾಗಿರುವುದು ಶ್ಲಾಘನೀಯ ಎಂದು ಸಾಸಕ ಬಸವರಾಜು ಶಿವಗಂಗಾ ತಿಳಿಸಿದರು.</p>.<p>ತಾಲ್ಲೂಕಿನ ಶೆಟ್ಟಿಹಳ್ಳಿ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂತೇಬೆನ್ನೂರು ವಲಯ ವ್ಯಾಪ್ತಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ನಮ್ಮೂರು ನಮ್ಮ ಕೆರೆ’ ಹಸ್ತಾಂತರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಮಹಿಳೆಯರ ಆರ್ಥಿಕ ಸ್ವಾವಲಂಬನೆಗಾಗಿ ಅನೇಕ ಯೋಜನೆಗಳನ್ನು ರೂಪಿಸಿ ಆರ್ಥಿಕ ನೆರವು ನೀಡುತ್ತಾ ಬಂದಿದೆ. ವಿಧವೆಯರಿಗೆ ಮಾಸಾಶನ, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಅಂಗವಿಕಲರಿಗೆ ಸಾಧನ ಸಾಮಗ್ರಿಗಳ ವಿತರಣೆ, ಕೆರೆಗಳ ಅಭಿವೃದ್ಧಿಯಂತಹ ನೂರಾರು ಕಾರ್ಯಗಳನ್ನು ಮಾಡುತ್ತಾ ಇಡೀ ರಾಜ್ಯದಲ್ಲಿಯೇ ಹೆಸರಾಗಿದೆ’ ಎಂದರು.</p>.<p>ಸಂಘವು ಈಗಾಗಲೇ ರಾಜ್ಯದಲ್ಲಿ 911 ಕೆರೆಗಳನ್ನು ಅಭಿವೃದ್ಧಿಪಡಿಸಿದೆ. ಈ ಗ್ರಾಮದ್ದು 912ನೇ ಕೆರೆಯಾಗಿದೆ. 200 ವರ್ಷಗಳ ಇತಿಹಾಸವನ್ನು ಹೊಂದಿರುವ ಇಲ್ಲಿನ ಕೆರೆ 6.26 ಎಕರೆ ವಿಸ್ತೀರ್ಣವಿದ್ದು, ₹11.89 ಲಕ್ಷ ವೆಚ್ಚದಲ್ಲಿ ಹೂಳು ತೆಗೆಯಿಸಿ ಅಭಿವೃದ್ಧಿಗೊಳಿಸಿದೆ. ಕೆರೆಯ ಹೂಳನ್ನು ರೈತರು ತಮ್ಮ ತೋಟಗಳಿಗೆ ಹಾಕಿಕೊಂಡಿದ್ದಾರೆ. ಗ್ರಾಮದ 350 ಕುಟುಂಬಗಳು ಇದರಿಂದ ಪ್ರಯೋಜನ ಪಡೆದುಕೊಂಡಿವೆ’ ಎಂದು ನಾಮಫಲಕ ಅನಾವರಣ ಮಾಡಿದ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಹೇಳಿದರು.</p>.<p>ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕರಾದ ಬಿ. ಗೀತಾ, ಕಮಲಾಕ್ಷ, ತಹಶೀಲ್ದಾರ್ ಎನ್.ಜೆ. ನಾಗರಾಜ್, ಸಂತೇಬೆನ್ನೂರು ವಲಯದ ಯೋಜನಾಧಿಕಾರಿ ಕೆ. ಸಂತೋಷ್, ಕೆರೆ ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಈಶ್ವರ್, ಅಧ್ಯಕ್ಷ ರಾಜಪ್ಪ, ಹರೀಶ್ ನಾಯ್ಕ, ಯೋಗರಾಜ್, ಬಲ್ಲೂರು ರವಿಕುಮಾರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶೆಟ್ಟಿಹಳ್ಳಿ (ಚನ್ನಗಿರಿ):</strong> ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಸಂಘವು ಯಾವುದೇ ಫಲಾಪೇಕ್ಷೆ ಇಲ್ಲದೇ ಸಾಮಾಜಿಕ ಕಳಕಳಿಯಿಂದ ರೈತರ ಬದುಕು ಹಸನು ಮಾಡುವ ಸಲುವಾಗಿ ಕೆರೆಗಳ ಅಭಿವೃದ್ಧಿಗೆ ಮುಂದಾಗಿರುವುದು ಶ್ಲಾಘನೀಯ ಎಂದು ಸಾಸಕ ಬಸವರಾಜು ಶಿವಗಂಗಾ ತಿಳಿಸಿದರು.</p>.<p>ತಾಲ್ಲೂಕಿನ ಶೆಟ್ಟಿಹಳ್ಳಿ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂತೇಬೆನ್ನೂರು ವಲಯ ವ್ಯಾಪ್ತಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ನಮ್ಮೂರು ನಮ್ಮ ಕೆರೆ’ ಹಸ್ತಾಂತರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಮಹಿಳೆಯರ ಆರ್ಥಿಕ ಸ್ವಾವಲಂಬನೆಗಾಗಿ ಅನೇಕ ಯೋಜನೆಗಳನ್ನು ರೂಪಿಸಿ ಆರ್ಥಿಕ ನೆರವು ನೀಡುತ್ತಾ ಬಂದಿದೆ. ವಿಧವೆಯರಿಗೆ ಮಾಸಾಶನ, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಅಂಗವಿಕಲರಿಗೆ ಸಾಧನ ಸಾಮಗ್ರಿಗಳ ವಿತರಣೆ, ಕೆರೆಗಳ ಅಭಿವೃದ್ಧಿಯಂತಹ ನೂರಾರು ಕಾರ್ಯಗಳನ್ನು ಮಾಡುತ್ತಾ ಇಡೀ ರಾಜ್ಯದಲ್ಲಿಯೇ ಹೆಸರಾಗಿದೆ’ ಎಂದರು.</p>.<p>ಸಂಘವು ಈಗಾಗಲೇ ರಾಜ್ಯದಲ್ಲಿ 911 ಕೆರೆಗಳನ್ನು ಅಭಿವೃದ್ಧಿಪಡಿಸಿದೆ. ಈ ಗ್ರಾಮದ್ದು 912ನೇ ಕೆರೆಯಾಗಿದೆ. 200 ವರ್ಷಗಳ ಇತಿಹಾಸವನ್ನು ಹೊಂದಿರುವ ಇಲ್ಲಿನ ಕೆರೆ 6.26 ಎಕರೆ ವಿಸ್ತೀರ್ಣವಿದ್ದು, ₹11.89 ಲಕ್ಷ ವೆಚ್ಚದಲ್ಲಿ ಹೂಳು ತೆಗೆಯಿಸಿ ಅಭಿವೃದ್ಧಿಗೊಳಿಸಿದೆ. ಕೆರೆಯ ಹೂಳನ್ನು ರೈತರು ತಮ್ಮ ತೋಟಗಳಿಗೆ ಹಾಕಿಕೊಂಡಿದ್ದಾರೆ. ಗ್ರಾಮದ 350 ಕುಟುಂಬಗಳು ಇದರಿಂದ ಪ್ರಯೋಜನ ಪಡೆದುಕೊಂಡಿವೆ’ ಎಂದು ನಾಮಫಲಕ ಅನಾವರಣ ಮಾಡಿದ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಹೇಳಿದರು.</p>.<p>ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕರಾದ ಬಿ. ಗೀತಾ, ಕಮಲಾಕ್ಷ, ತಹಶೀಲ್ದಾರ್ ಎನ್.ಜೆ. ನಾಗರಾಜ್, ಸಂತೇಬೆನ್ನೂರು ವಲಯದ ಯೋಜನಾಧಿಕಾರಿ ಕೆ. ಸಂತೋಷ್, ಕೆರೆ ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಈಶ್ವರ್, ಅಧ್ಯಕ್ಷ ರಾಜಪ್ಪ, ಹರೀಶ್ ನಾಯ್ಕ, ಯೋಗರಾಜ್, ಬಲ್ಲೂರು ರವಿಕುಮಾರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>