<p><strong>ದಾವಣಗೆರೆ: ‘</strong>ಶಾಮನೂರು ಗ್ರಾಮದ ಏಕನಿವೇಶನಕ್ಕೆ ‘ದಾವಣಗೆರೆ–ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ’ (ಧೂಡ) ಅನುಮೋದನೆ ನೀಡಿರುವ ತೀರ್ಮಾನದ ಹಿಂದೆ ನನ್ನ ಪಾತ್ರವಿಲ್ಲ. ದಾಖಲೆಗಳನ್ನು ಪರಿಶೀಲಿಸಿ ಅಧಿಕಾರಿಗಳು ಪಾರದರ್ಶಕ ಕ್ರಮ ಕೈಗೊಂಡಿದ್ದಾರೆ’ ಎಂದು ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ ತಿಳಿಸಿದರು.</p>.<p>‘ಉದ್ಯಾನಕ್ಕೆ ಮೀಸಲಿಟ್ಟ ಸ್ಥಳವನ್ನು ‘ಧೂಡಾ’ ಅಧ್ಯಕ್ಷರು ವ್ಯಕ್ತಿಯೊಬ್ಬರ ಸುಪರ್ದಿಗೆ ನೀಡಿದ್ದಾರೆ’ ಎಂಬ ಬಿಜೆಪಿ ಮುಖಂಡ ರಾಜನಹಳ್ಳಿ ಶಿವಕುಮಾರ್ ಆರೋಪಕ್ಕೆ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದರು.</p>.<p>‘ದಾಖಲೆಗಳನ್ನು ಪರಿಶೀಲಿಸಿ ಅಧಿಕಾರಿಗಳು ಏಕನಿವೇಶನಕ್ಕೆ ಅನುಮೋದನೆ ನೀಡಿದ್ದಾರೆ. ಆದರೆ, ಇದು ತನ್ನ ಆಸ್ತಿ ಎಂಬುದಾಗಿ ಮಹಾನಗರ ಪಾಲಿಕೆ ಹೇಳುತ್ತಿದೆ. ಈ ವಿಚಾರ ಈಗಾಗಲೇ ನ್ಯಾಯಾಲಯದ ಮೆಟ್ಟಿಲೇರಿದೆ. ಈ ಕುರಿತು ಹೆಚ್ಚು ಮಾತನಾಡಲು ಇಷ್ಟಪಡುವುದಿಲ್ಲ’ ಎಂದರು.</p>.<p>‘ನ್ಯಾಯಾಲಯ ನೀಡುವ ಆದೇಶಕ್ಕೆ ‘ಧೂಡಾ’ ಬದ್ಧವಾಗಿರುತ್ತದೆ. ಮಹಾನಗರ ಪಾಲಿಕೆಯ ಆಸ್ತಿಯಾಗಿದ್ದರೆ ಏಕನಿವೇಶನಕ್ಕೆ ನೀಡಿದ ಅನುಮೋದನೆ ಅನುರ್ಜಿತಗೊಳ್ಳುತ್ತದೆ. ಇದನ್ನೇ ರಾಜಕೀಯ ವಿಚಾರಕ್ಕೆ ಬಳಸಿಕೊಳ್ಳಲು ಬಿಜೆಪಿ ಹವಣಿಸುತ್ತಿದೆ. ಬಿಜೆಪಿ ನಾಯಕರು ಉಪವಾಸ ಸತ್ಯಾಗ್ರಹ ಮಾಡುವುದಾದರೆ ಸ್ವಾಗತಿಸುತ್ತೇನೆ’ ಎಂದು ವ್ಯಂಗ್ಯವಾಡಿದರು.</p>.<p>‘ಧೂಡಾ’ ಸದಸ್ಯೆ ವಾಣಿ ಬಕ್ಕೇಶ್, ಕಾಂಗ್ರೆಸ್ ಮುಖಂಡರಾದ ಎ. ನಾಗರಾಜ್, ಅಯೂಬ್ ಪೈಲ್ವಾನ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: ‘</strong>ಶಾಮನೂರು ಗ್ರಾಮದ ಏಕನಿವೇಶನಕ್ಕೆ ‘ದಾವಣಗೆರೆ–ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ’ (ಧೂಡ) ಅನುಮೋದನೆ ನೀಡಿರುವ ತೀರ್ಮಾನದ ಹಿಂದೆ ನನ್ನ ಪಾತ್ರವಿಲ್ಲ. ದಾಖಲೆಗಳನ್ನು ಪರಿಶೀಲಿಸಿ ಅಧಿಕಾರಿಗಳು ಪಾರದರ್ಶಕ ಕ್ರಮ ಕೈಗೊಂಡಿದ್ದಾರೆ’ ಎಂದು ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ ತಿಳಿಸಿದರು.</p>.<p>‘ಉದ್ಯಾನಕ್ಕೆ ಮೀಸಲಿಟ್ಟ ಸ್ಥಳವನ್ನು ‘ಧೂಡಾ’ ಅಧ್ಯಕ್ಷರು ವ್ಯಕ್ತಿಯೊಬ್ಬರ ಸುಪರ್ದಿಗೆ ನೀಡಿದ್ದಾರೆ’ ಎಂಬ ಬಿಜೆಪಿ ಮುಖಂಡ ರಾಜನಹಳ್ಳಿ ಶಿವಕುಮಾರ್ ಆರೋಪಕ್ಕೆ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದರು.</p>.<p>‘ದಾಖಲೆಗಳನ್ನು ಪರಿಶೀಲಿಸಿ ಅಧಿಕಾರಿಗಳು ಏಕನಿವೇಶನಕ್ಕೆ ಅನುಮೋದನೆ ನೀಡಿದ್ದಾರೆ. ಆದರೆ, ಇದು ತನ್ನ ಆಸ್ತಿ ಎಂಬುದಾಗಿ ಮಹಾನಗರ ಪಾಲಿಕೆ ಹೇಳುತ್ತಿದೆ. ಈ ವಿಚಾರ ಈಗಾಗಲೇ ನ್ಯಾಯಾಲಯದ ಮೆಟ್ಟಿಲೇರಿದೆ. ಈ ಕುರಿತು ಹೆಚ್ಚು ಮಾತನಾಡಲು ಇಷ್ಟಪಡುವುದಿಲ್ಲ’ ಎಂದರು.</p>.<p>‘ನ್ಯಾಯಾಲಯ ನೀಡುವ ಆದೇಶಕ್ಕೆ ‘ಧೂಡಾ’ ಬದ್ಧವಾಗಿರುತ್ತದೆ. ಮಹಾನಗರ ಪಾಲಿಕೆಯ ಆಸ್ತಿಯಾಗಿದ್ದರೆ ಏಕನಿವೇಶನಕ್ಕೆ ನೀಡಿದ ಅನುಮೋದನೆ ಅನುರ್ಜಿತಗೊಳ್ಳುತ್ತದೆ. ಇದನ್ನೇ ರಾಜಕೀಯ ವಿಚಾರಕ್ಕೆ ಬಳಸಿಕೊಳ್ಳಲು ಬಿಜೆಪಿ ಹವಣಿಸುತ್ತಿದೆ. ಬಿಜೆಪಿ ನಾಯಕರು ಉಪವಾಸ ಸತ್ಯಾಗ್ರಹ ಮಾಡುವುದಾದರೆ ಸ್ವಾಗತಿಸುತ್ತೇನೆ’ ಎಂದು ವ್ಯಂಗ್ಯವಾಡಿದರು.</p>.<p>‘ಧೂಡಾ’ ಸದಸ್ಯೆ ವಾಣಿ ಬಕ್ಕೇಶ್, ಕಾಂಗ್ರೆಸ್ ಮುಖಂಡರಾದ ಎ. ನಾಗರಾಜ್, ಅಯೂಬ್ ಪೈಲ್ವಾನ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>