<p><strong>ದಾವಣಗೆರೆ:</strong> ಅಂಗವಿಕಲರಲ್ಲಿ ಪ್ರೀತಿ, ವಿಶ್ವಾಸ ತುಂಬಿ ಸ್ವಾವಲಂಬಿ ಜೀವನ ಕಟ್ಟಿಕೊಳ್ಳುವಂತೆ ಅವಕಾಶ ಕಲ್ಪಿಸುವ ಹೊಣೆಗಾರಿಕೆ ಸರ್ಕಾರ ಮತ್ತು ಸಮಾಜದ ಮೇಲಿದೆ ಎಂದು ಶಾಸಕ ಕೆ.ಎಸ್. ಬಸವಂತಪ್ಪ ಅಭಿಪ್ರಾಯಪಟ್ಟರು.</p>.<p>ನಗರದ ಹೊರವಲಯದ ವಡ್ಡಿನಹಳ್ಳಿಯ ಅಂಗವಿಕಲರ ಕೌಶಲಾಭಿವೃದ್ಧಿ, ಪುನರ್ವಸತಿ ಮತ್ತು ಸಬಲೀಕರಣ ಸಂಯುಕ್ತ ಪ್ರಾದೇಶಿಕ ಕೇಂದ್ರದಲ್ಲಿ (ಸಿಆರ್ಸಿ) ಬುಧವಾರ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಅಂಗವಿಕಲರ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>‘ಅಂಗವಿಕಲರ ಶ್ರೇಯಸ್ಸು ಹಾಗೂ ಮಾನವ ಹಕ್ಕುಗಳಿಗೆ ಚ್ಯುತಿ ಉಂಟಾಗದ ರೀತಿಯಲ್ಲಿ ನೋಡಿಕೊಳ್ಳಬೇಕು. ಸಮುದಾಯದ ಏಳಿಗೆಗೆ ಕುಟುಂಬದ ಸದಸ್ಯರು ಮಾತ್ರವಲ್ಲದೇ ಪ್ರತಿಯೊಬ್ಬ ನಾಗರಿಕರೂ ಕೈಜೋಡಿಸಬೇಕು. ಸರ್ಕಾರ ಅಂಗವಿಕಲರ ಅಧಿನಿಯಮ ರೂಪಿಸಿದ್ದು, ಅನೇಕ ಹಕ್ಕುಗಳನ್ನು ನೀಡಿದೆ. ಈ ಹಕ್ಕುಗಳು ಮೊಟಕುಗೊಳ್ಳಬಾರದು’ ಎಂದು ಸಲಹೆ ನೀಡಿದರು.</p>.<p>‘ಅಂಗವಿಕಲರಲ್ಲಿ ಧೈರ್ಯ ತುಂಬಿದಾಗ ಸಮಾಜದ ಮುಖ್ಯವಾಹಿನಿಗೆ ಬರಲು ಅನುಕೂಲವಾಗುತ್ತದೆ. ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ. ಅಂಗವಿಕಲರಿಗೆ ಸರ್ಕಾರ ಕಲ್ಪಿಸಿದ ಸೌಲಭ್ಯಗಳು ಸರಿಯಾಗಿ ತಲುಪಬೇಕು. ಈ ನಿಟ್ಟಿನಲ್ಲಿ ಸಿಆರ್ಸಿ ಮಾದರಿಯ ಕಾರ್ಯಗಳನ್ನು ಮಾಡುತ್ತಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>‘ಅಂಗವಿಕಲರ ಏಳಿಗೆಗೆ ಹಲವು ಸಂಸ್ಥೆಗಳು ಸೇವೆ ಸಲ್ಲಿಸುತ್ತಿವೆ. ಶಿಕ್ಷಣ, ಜೀವನ ಕೌಶಲಗಳನ್ನು ನೀಡುತ್ತಿವೆ. ಇಂತಹ ಕೌಶಲ ಪಡೆದವರಿಗೆ ಅಂಗವೈಕಲ್ಯ ಅಡ್ಡಿಯಾಗದು. ಅವರಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಮನೋಭಾವವನ್ನು ಪ್ರತಿಯೊಬ್ಬರೂ ಬಳಸಿಕೊಳ್ಳಬೇಕು. ಅವರ ಅದಮ್ಯ ಶಕ್ತಿಯನ್ನು ಗೌರವದಿಂದ ಕಾಣಬೇಕು’ ಎಂದು ಕಿವಿಮಾತು ಹೇಳಿದರು.</p>.<p>ಅಂಗವಿಕಲರಿಗೆ ಸೈಕಲ್, ಕೃತಕ ಕಾಲು ಸೇರಿ ಇತರ ಸೌಲಭ್ಯಗಳನ್ನು ವಿತರಿಸಲಾಯಿತು. ಕೇಂದ್ರದ ನಿರ್ದೇಶಕ ಕೆ. ಮಾರುತಿಗೌಡ, ಪುನರ್ವಸತಿ ಅಧಿಕಾರಿ ವಿ. ಕನಗ ಸಭಾಪತಿ, ಆಡಳಿತಾಧಿಕಾರಿ ವೈ. ಶ್ರೀನಾಥ್, ಉದ್ಯಮಿಗಳಾದ ರವಿರಾಜ್, ವಾಸುದೇವ ರಾಯ್ಕರ್, ಎಪಿಎಂಸಿ ಮಾಜಿ ಅಧ್ಯಕ್ಷ ಎಸ್.ಕೆ. ಚಂದ್ರಣ್ಣ ಹಾಜರಿದ್ದರು.</p>.<p> <strong>‘ಬಾಳಲ್ಲಿ ಬೆಳಕು ಮೂಡಿಸುತ್ತೇವೆ’</strong> </p><p>‘ಅಂಗವಿಕಲರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಅವರ ಬಾಳಲ್ಲಿ ಬೆಳಕು ಮೂಡಿಸುವ ನಿಟ್ಟಿನಲ್ಲಿ ಸರ್ಕಾರ ಶ್ರಮಿಸುತ್ತಿದೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಶಿವಕುಮಾರ್ ಹೇಳಿದರು. ಇಲ್ಲಿನ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಅಂತರರಾಷ್ಟ್ರೀಯ ಅಂಗವಿಕಲರ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p><p>‘ಅಂಗವೈಕಲ್ಯ ಶಾಪವೆಂದು ಚಿಂತಿಸಿದರೆ ಜೀವನ ಕಟ್ಟಿಕೊಳ್ಳಲು ಸಾಧ್ಯವಿಲ್ಲ. ಇದನ್ನು ಮೆಟ್ಟಿ ಸಾಧನೆ ಮಾಡಿದ ಅನೇಕರು ಸಮಾಜದಲ್ಲಿದ್ದಾರೆ. ಇವರ ಬದುಕು ಪ್ರತಿಯೊಬ್ಬರಿಗೂ ಸ್ಫೂರ್ತಿ ಆಗಬೇಕು. ಅವರಲ್ಲಿರುವ ವಿಶೇಷ ಶಕ್ತಿಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು’ ಎಂದು ಕಿವಿಮಾತು ಹೇಳಿದರು. </p><p>ದಾವಣಗೆರೆ–ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ (ಧೂಡಾ) ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕಿ ರೇಷ್ಮಾ ಕೌಸರ್ ಅಂಗವಿಕಲ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆಯ ಅಧಿಕಾರಿ ಕೆ.ಕೆ. ಪ್ರಕಾಶ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಾನಾಯ್ಕ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಅಂಗವಿಕಲರಲ್ಲಿ ಪ್ರೀತಿ, ವಿಶ್ವಾಸ ತುಂಬಿ ಸ್ವಾವಲಂಬಿ ಜೀವನ ಕಟ್ಟಿಕೊಳ್ಳುವಂತೆ ಅವಕಾಶ ಕಲ್ಪಿಸುವ ಹೊಣೆಗಾರಿಕೆ ಸರ್ಕಾರ ಮತ್ತು ಸಮಾಜದ ಮೇಲಿದೆ ಎಂದು ಶಾಸಕ ಕೆ.ಎಸ್. ಬಸವಂತಪ್ಪ ಅಭಿಪ್ರಾಯಪಟ್ಟರು.</p>.<p>ನಗರದ ಹೊರವಲಯದ ವಡ್ಡಿನಹಳ್ಳಿಯ ಅಂಗವಿಕಲರ ಕೌಶಲಾಭಿವೃದ್ಧಿ, ಪುನರ್ವಸತಿ ಮತ್ತು ಸಬಲೀಕರಣ ಸಂಯುಕ್ತ ಪ್ರಾದೇಶಿಕ ಕೇಂದ್ರದಲ್ಲಿ (ಸಿಆರ್ಸಿ) ಬುಧವಾರ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಅಂಗವಿಕಲರ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>‘ಅಂಗವಿಕಲರ ಶ್ರೇಯಸ್ಸು ಹಾಗೂ ಮಾನವ ಹಕ್ಕುಗಳಿಗೆ ಚ್ಯುತಿ ಉಂಟಾಗದ ರೀತಿಯಲ್ಲಿ ನೋಡಿಕೊಳ್ಳಬೇಕು. ಸಮುದಾಯದ ಏಳಿಗೆಗೆ ಕುಟುಂಬದ ಸದಸ್ಯರು ಮಾತ್ರವಲ್ಲದೇ ಪ್ರತಿಯೊಬ್ಬ ನಾಗರಿಕರೂ ಕೈಜೋಡಿಸಬೇಕು. ಸರ್ಕಾರ ಅಂಗವಿಕಲರ ಅಧಿನಿಯಮ ರೂಪಿಸಿದ್ದು, ಅನೇಕ ಹಕ್ಕುಗಳನ್ನು ನೀಡಿದೆ. ಈ ಹಕ್ಕುಗಳು ಮೊಟಕುಗೊಳ್ಳಬಾರದು’ ಎಂದು ಸಲಹೆ ನೀಡಿದರು.</p>.<p>‘ಅಂಗವಿಕಲರಲ್ಲಿ ಧೈರ್ಯ ತುಂಬಿದಾಗ ಸಮಾಜದ ಮುಖ್ಯವಾಹಿನಿಗೆ ಬರಲು ಅನುಕೂಲವಾಗುತ್ತದೆ. ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ. ಅಂಗವಿಕಲರಿಗೆ ಸರ್ಕಾರ ಕಲ್ಪಿಸಿದ ಸೌಲಭ್ಯಗಳು ಸರಿಯಾಗಿ ತಲುಪಬೇಕು. ಈ ನಿಟ್ಟಿನಲ್ಲಿ ಸಿಆರ್ಸಿ ಮಾದರಿಯ ಕಾರ್ಯಗಳನ್ನು ಮಾಡುತ್ತಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>‘ಅಂಗವಿಕಲರ ಏಳಿಗೆಗೆ ಹಲವು ಸಂಸ್ಥೆಗಳು ಸೇವೆ ಸಲ್ಲಿಸುತ್ತಿವೆ. ಶಿಕ್ಷಣ, ಜೀವನ ಕೌಶಲಗಳನ್ನು ನೀಡುತ್ತಿವೆ. ಇಂತಹ ಕೌಶಲ ಪಡೆದವರಿಗೆ ಅಂಗವೈಕಲ್ಯ ಅಡ್ಡಿಯಾಗದು. ಅವರಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಮನೋಭಾವವನ್ನು ಪ್ರತಿಯೊಬ್ಬರೂ ಬಳಸಿಕೊಳ್ಳಬೇಕು. ಅವರ ಅದಮ್ಯ ಶಕ್ತಿಯನ್ನು ಗೌರವದಿಂದ ಕಾಣಬೇಕು’ ಎಂದು ಕಿವಿಮಾತು ಹೇಳಿದರು.</p>.<p>ಅಂಗವಿಕಲರಿಗೆ ಸೈಕಲ್, ಕೃತಕ ಕಾಲು ಸೇರಿ ಇತರ ಸೌಲಭ್ಯಗಳನ್ನು ವಿತರಿಸಲಾಯಿತು. ಕೇಂದ್ರದ ನಿರ್ದೇಶಕ ಕೆ. ಮಾರುತಿಗೌಡ, ಪುನರ್ವಸತಿ ಅಧಿಕಾರಿ ವಿ. ಕನಗ ಸಭಾಪತಿ, ಆಡಳಿತಾಧಿಕಾರಿ ವೈ. ಶ್ರೀನಾಥ್, ಉದ್ಯಮಿಗಳಾದ ರವಿರಾಜ್, ವಾಸುದೇವ ರಾಯ್ಕರ್, ಎಪಿಎಂಸಿ ಮಾಜಿ ಅಧ್ಯಕ್ಷ ಎಸ್.ಕೆ. ಚಂದ್ರಣ್ಣ ಹಾಜರಿದ್ದರು.</p>.<p> <strong>‘ಬಾಳಲ್ಲಿ ಬೆಳಕು ಮೂಡಿಸುತ್ತೇವೆ’</strong> </p><p>‘ಅಂಗವಿಕಲರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಅವರ ಬಾಳಲ್ಲಿ ಬೆಳಕು ಮೂಡಿಸುವ ನಿಟ್ಟಿನಲ್ಲಿ ಸರ್ಕಾರ ಶ್ರಮಿಸುತ್ತಿದೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಶಿವಕುಮಾರ್ ಹೇಳಿದರು. ಇಲ್ಲಿನ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಅಂತರರಾಷ್ಟ್ರೀಯ ಅಂಗವಿಕಲರ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p><p>‘ಅಂಗವೈಕಲ್ಯ ಶಾಪವೆಂದು ಚಿಂತಿಸಿದರೆ ಜೀವನ ಕಟ್ಟಿಕೊಳ್ಳಲು ಸಾಧ್ಯವಿಲ್ಲ. ಇದನ್ನು ಮೆಟ್ಟಿ ಸಾಧನೆ ಮಾಡಿದ ಅನೇಕರು ಸಮಾಜದಲ್ಲಿದ್ದಾರೆ. ಇವರ ಬದುಕು ಪ್ರತಿಯೊಬ್ಬರಿಗೂ ಸ್ಫೂರ್ತಿ ಆಗಬೇಕು. ಅವರಲ್ಲಿರುವ ವಿಶೇಷ ಶಕ್ತಿಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು’ ಎಂದು ಕಿವಿಮಾತು ಹೇಳಿದರು. </p><p>ದಾವಣಗೆರೆ–ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ (ಧೂಡಾ) ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕಿ ರೇಷ್ಮಾ ಕೌಸರ್ ಅಂಗವಿಕಲ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆಯ ಅಧಿಕಾರಿ ಕೆ.ಕೆ. ಪ್ರಕಾಶ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಾನಾಯ್ಕ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>