‘ಬಿತ್ತನೆ ಮಾಡಿ ಮೂರು ತಿಂಗಳು ಆಗಿತ್ತು, ಗಿಡಗಳು ಹುಲುಸಾಗಿ ಬೆಳೆದು ಉತ್ತಮವಾಗಿದ್ದವು. ಎರಡೂವರೆ ತಿಂಗಳಲ್ಲಿ ಇಳುವರಿ ಬರುವ ನಿರೀಕ್ಷೆಯಿತ್ತು. ಆದರೆ, ವಿಚಿತ್ರವಾಗಿ ಬಂದಿರುವ ರೋಗಕ್ಕೆ ತುತ್ತಾದ ಗಿಡಗಳು ಒಣಗಿ, ಈರುಳ್ಳಿ ಗಡ್ಡೆ ಕೊಳೆಯಲು ಶುರುವಾಯಿತು. ಇದು ಗಿಡದಿಂದ ಗಿಡಕ್ಕೆ ಬಂದು ಈರುಳ್ಳಿ ಹೊಲವನ್ನೇ ಆವರಿಸಿದೆ. ಇದರ ಜೊತೆಗೆ ಬಿತ್ತನೆ ಮಾಡಿರುವ ಇತರೆ ಬೆಳೆಗಳಿಗೆ ಹಾನಿಯಾಗಬಾರದು. ನಾಶಕ್ಕೆ ಮುಂದಾಗಿದ್ದೇನೆ’ ಎಂದುರೈತ ಹಾಲೇಶಪ್ಪ ನೊಂದು ನುಡಿದರು.