<p><strong>ದಾವಣಗೆರೆ: </strong>ಜಿಲ್ಲೆಯಲ್ಲಿ ಭತ್ತದ ಬೆಳೆಯು ವಿವಿಧ ಹಂತಗಳಲ್ಲಿದ್ದು, ಅಲ್ಲಲ್ಲಿ ಎಲೆ ಕವಚ ಒಣಗುವ ರೋಗ ಕಾಣಿಸಿಕೊಂಡಿದೆ. ಹೀಗಾಗಿ ರೈತರು ತಕ್ಷಣವೇ ಸಂರಕ್ಷಣಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್ ತಿಳಿಸಿದ್ದಾರೆ.</p>.<p class="Subhead"><strong>ಹಾನಿಯ ಲಕ್ಷಣ</strong></p>.<p class="Subhead">ಎಲೆಯ ಕವಚದ ಮೇಲೆ ಕಂದು ಅಂಚುಳ್ಳ ಹುಲ್ಲಿನ ಬಣ್ಣದ ಉದ್ದ ಮಚ್ಚೆಗಳು ಕಾಣಿಸಿಕೊಂಡು ಎಲೆಗಳು ಒಣಗುತ್ತವೆ. ಕೆರೆ ಕೆಳಗಿನ ಅಥವಾ ನೀರಿನ ಒತ್ತಡ ಇರುವ ತಗ್ಗು ಪ್ರದೇಶದ ಗದ್ದೆಗಳಲ್ಲಿ ರೋಗದ ಬಾಧೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ.</p>.<p class="Subhead"><strong>ನಿರ್ವಹಣಾ ಕ್ರಮಗಳು</strong></p>.<p class="Subhead">ನೀರು ಹರಿಸುವಾಗ ಜೊತೆಯಲ್ಲಿ ಸಗಣಿ ರಾಡಿ ಬಿಡುವುದು ಸೂಕ್ತ. ಸಗಣಿ ರಾಡಿ ಜೊತೆಯಲ್ಲಿ ಟ್ರೈಕೋಡರ್ಮಾವನ್ನು ಬೆರೆಸಿ ಬಿಡುವುದು ತುಂಬಾ ಉಪಯುಕ್ತ. ಸಗಣಿ ರಾಡಿಯ ಉಪಚಾರ ರೋಗ ಹರಡುವುದನ್ನು ತಡೆಗಟ್ಟುವಲ್ಲಿ ಮುಖ್ಯ ಪಾತ್ರ ವಹಿಸುತ್ತದೆ.</p>.<p>1 ಗ್ರಾಂ. ಕಾರ್ಬನ್ಡೈಜಿಂ 50 ಡಬ್ಲ್ಯುಪಿ ಅಥವಾ 1 ಮಿ.ಲೀ. ಪ್ರೊಪಿಕೊನೊಜೋಲ್ 25 ಇ.ಸಿ. ಅಥವಾ 2 ಮಿ.ಲೀ. ಹೆಕ್ಸಾಕೋನಜೋಲ್ 5 ಇ.ಸಿ. ಅನ್ನು ಒಂದು ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು. ಇಲ್ಲವೇ 0.4 ಗ್ರಾಂ. ಟ್ರೈಶ್ಲಾಕ್ಸಿಸ್ಟ್ರೋಬಿನ್–25 ಮತ್ತು 0.4 ಗ್ರಾಂ. ಟೆಬುಕೊನಜೋಲ್–50 ಅನ್ನು ಒಂದು ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು ಅಥವಾ ಇವೆರಡರ ಸಂಯುಕ್ತ ರಾಸಾಯನಿಕ ಲಭ್ಯವಿದ್ದರೆ ಸಿಂಪರಣೆ ಮಾಡಬೇಕು.</p>.<p class="Subhead"><strong>ವಿಶೇಷ ಸೂಚನೆ</strong></p>.<p class="Subhead">ಗದ್ದೆಯಲ್ಲಿರುವ ನೀರನ್ನು ಬಸಿದು ದ್ರಾವಣವನ್ನು ಬುಡಭಾಗ ನೆನೆಯುವಂತೆ ಸಿಂಪಡಿಸಬೇಕು. ರೋಗದ ಲಕ್ಷಣಗಳು ಕಾಣಿಸಿಕೊಂಡ ತಕ್ಷಣ ಸಿಂಪರಣೆ ಕೈಗೊಳ್ಳುವುದು ಉತ್ತಮ. ಅಗತ್ಯವಿದ್ದರೆ 15 ದಿನಗಳ ನಂತರ ಪುನಃ ಸಿಂಪರಣೆ ಮಾಡಬೇಕು ಎಂದು ಅವರು ಸಲಹೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಜಿಲ್ಲೆಯಲ್ಲಿ ಭತ್ತದ ಬೆಳೆಯು ವಿವಿಧ ಹಂತಗಳಲ್ಲಿದ್ದು, ಅಲ್ಲಲ್ಲಿ ಎಲೆ ಕವಚ ಒಣಗುವ ರೋಗ ಕಾಣಿಸಿಕೊಂಡಿದೆ. ಹೀಗಾಗಿ ರೈತರು ತಕ್ಷಣವೇ ಸಂರಕ್ಷಣಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್ ತಿಳಿಸಿದ್ದಾರೆ.</p>.<p class="Subhead"><strong>ಹಾನಿಯ ಲಕ್ಷಣ</strong></p>.<p class="Subhead">ಎಲೆಯ ಕವಚದ ಮೇಲೆ ಕಂದು ಅಂಚುಳ್ಳ ಹುಲ್ಲಿನ ಬಣ್ಣದ ಉದ್ದ ಮಚ್ಚೆಗಳು ಕಾಣಿಸಿಕೊಂಡು ಎಲೆಗಳು ಒಣಗುತ್ತವೆ. ಕೆರೆ ಕೆಳಗಿನ ಅಥವಾ ನೀರಿನ ಒತ್ತಡ ಇರುವ ತಗ್ಗು ಪ್ರದೇಶದ ಗದ್ದೆಗಳಲ್ಲಿ ರೋಗದ ಬಾಧೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ.</p>.<p class="Subhead"><strong>ನಿರ್ವಹಣಾ ಕ್ರಮಗಳು</strong></p>.<p class="Subhead">ನೀರು ಹರಿಸುವಾಗ ಜೊತೆಯಲ್ಲಿ ಸಗಣಿ ರಾಡಿ ಬಿಡುವುದು ಸೂಕ್ತ. ಸಗಣಿ ರಾಡಿ ಜೊತೆಯಲ್ಲಿ ಟ್ರೈಕೋಡರ್ಮಾವನ್ನು ಬೆರೆಸಿ ಬಿಡುವುದು ತುಂಬಾ ಉಪಯುಕ್ತ. ಸಗಣಿ ರಾಡಿಯ ಉಪಚಾರ ರೋಗ ಹರಡುವುದನ್ನು ತಡೆಗಟ್ಟುವಲ್ಲಿ ಮುಖ್ಯ ಪಾತ್ರ ವಹಿಸುತ್ತದೆ.</p>.<p>1 ಗ್ರಾಂ. ಕಾರ್ಬನ್ಡೈಜಿಂ 50 ಡಬ್ಲ್ಯುಪಿ ಅಥವಾ 1 ಮಿ.ಲೀ. ಪ್ರೊಪಿಕೊನೊಜೋಲ್ 25 ಇ.ಸಿ. ಅಥವಾ 2 ಮಿ.ಲೀ. ಹೆಕ್ಸಾಕೋನಜೋಲ್ 5 ಇ.ಸಿ. ಅನ್ನು ಒಂದು ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು. ಇಲ್ಲವೇ 0.4 ಗ್ರಾಂ. ಟ್ರೈಶ್ಲಾಕ್ಸಿಸ್ಟ್ರೋಬಿನ್–25 ಮತ್ತು 0.4 ಗ್ರಾಂ. ಟೆಬುಕೊನಜೋಲ್–50 ಅನ್ನು ಒಂದು ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು ಅಥವಾ ಇವೆರಡರ ಸಂಯುಕ್ತ ರಾಸಾಯನಿಕ ಲಭ್ಯವಿದ್ದರೆ ಸಿಂಪರಣೆ ಮಾಡಬೇಕು.</p>.<p class="Subhead"><strong>ವಿಶೇಷ ಸೂಚನೆ</strong></p>.<p class="Subhead">ಗದ್ದೆಯಲ್ಲಿರುವ ನೀರನ್ನು ಬಸಿದು ದ್ರಾವಣವನ್ನು ಬುಡಭಾಗ ನೆನೆಯುವಂತೆ ಸಿಂಪಡಿಸಬೇಕು. ರೋಗದ ಲಕ್ಷಣಗಳು ಕಾಣಿಸಿಕೊಂಡ ತಕ್ಷಣ ಸಿಂಪರಣೆ ಕೈಗೊಳ್ಳುವುದು ಉತ್ತಮ. ಅಗತ್ಯವಿದ್ದರೆ 15 ದಿನಗಳ ನಂತರ ಪುನಃ ಸಿಂಪರಣೆ ಮಾಡಬೇಕು ಎಂದು ಅವರು ಸಲಹೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>