<p><strong>ದಾವಣಗೆರೆ:</strong> ವಿಧಾನಸಭಾ ಕಲಾಪದ ವೇಳೆ ಬಿಜೆಪಿ, ಜೆಡಿಎಸ್ ಶಾಸಕರು ಮಸೂದೆಯ ಪ್ರತಿಗಳನ್ನು ಹರಿದು ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರ ಮೇಲೆ ಎಸೆದಿರುವುದನ್ನು ದಾವಣಗೆರೆ ಜಿಲ್ಲಾ ಬಂಜಾರ ಸಂಘ ಖಂಡಿಸಿದೆ. </p>.<p>‘ಸಭಾಧ್ಯಕ್ಷರ ಪೀಠಕ್ಕೆ ಮತ್ತು ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿಯವರ ಮೇಲೆ ನಡೆದ ಕೃತ್ಯ ಪ್ರಜಾಪ್ರಭುತ್ವಕ್ಕೆ, ಸಂವಿಧಾನಕ್ಕೆ ಮಾಡಿದ ಅಕ್ಷಮ್ಯ ಅಪರಾಧ. ಈ ಘಟನೆಗೆ ಕಾರಣರಾದ ಎಲ್ಲಾ ಶಾಸಕರಾದ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು’ ಎಂದು ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಎಸ್. ನಂಜಾನಾಯ್ಕ ಹಾಗೂ ಕಾರ್ಯದರ್ಶಿ ಕೆ.ಆರ್. ಮಲ್ಲೇಶ್ ನಾಯ್ಕ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.</p>.<p>‘ಮುಗ್ಧ, ಸರಳ, ಸಜ್ಜನಿಕೆಯ ಲಂಬಾಣಿ ಜನಾಂಗದ ರಾಜಕಾರಣಿ ರುದ್ರಪ್ಪ ಲಮಾಣಿಯವರು ಸಭಾಪತಿ ಪೀಠದಲ್ಲಿರುವಾಗಲೇ ನಡೆದಿರುವ ಈ ಕೃತ್ಯ ಖಂಡನೀಯ, ಎಲ್ಲರೂ ಕ್ಷಮೆ ಕೇಳಬೇಕು. ಅವರ ಶಾಸಕ ಸ್ಥಾನವನ್ನು ಈ ತಕ್ಷಣ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.</p>.<p>‘ಬಿಜೆಪಿಯವರಿಗೆ ದಮನಿತರು, ದಲಿತರು, ಅಲೆಮಾರಿಗಳು ಮತ್ತು ತುಳಿತಕ್ಕೆ ಒಳಗಾದ ಸಮಾಜದವರು, ಮೇಲ್ಮಟ್ಟದ ರಾಜಕಾರಣದ ಅಧಿಕಾರದಲ್ಲಿ ಇರುವುದನ್ನು ಸಹಿಸುವುದಿಲ್ಲ ಎಂಬುದು ಈ ವರ್ತನೆಯಿಂದ ಮೇಲ್ನೋಟಕ್ಕೆ ಕಂಡು ಬರುತ್ತದೆ. ಇದನ್ನು ಸಹಿಸಲಾಗದ ಇವರು ಹೇಗೆ ತಾನೆ ಪ್ರಜಾಪ್ರಭುತ್ವಕ್ಕೆ, ಸಂವಿಧಾನದ ಆಶಯಗಳಿಗೆ ಗೌರವಿಸಲು ಸಾಧ್ಯ. ಸಂಸ್ಕಾರ, ಸಂಸ್ಕೃತಿ ಇಲ್ಲದ ಇಂತಹವರು ಶಾಸಕರಾಗಿ ಇರಲು ಅನರ್ಹರು. ಈ ಕುರಿತು ರಾಜ್ಯದ ಎಲ್ಲಾ ತುಳಿತ, ದಮನಿತ ಸಮಾಜದ ಮುಖಂಡರೊಂದಿಗೆ ಚರ್ಚಿಸಿ, ಮುಂದಿನ ಹೋರಾಟದ ರೂಪುರೇಷೆಗಳನ್ನು ನಿರ್ಧರಿಸಲಾಗುವುದು’ ಎಂದು ತಿಳಿಸಿದರು.</p>.<p>ಎಸ್. ಬಸವರಾಜಯ್ಯ, ಲಕ್ಷ್ಮಣ್ ರಮಾವತ್, ಸಂದೇಶ್ ನಾಯ್ಕ, ಗುರುಮೂರ್ತಿ ಮಿಯಾಪುರ, ಲಿಂಗರಾಜ, ರವಿನಾಯ್ಕ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ವಿಧಾನಸಭಾ ಕಲಾಪದ ವೇಳೆ ಬಿಜೆಪಿ, ಜೆಡಿಎಸ್ ಶಾಸಕರು ಮಸೂದೆಯ ಪ್ರತಿಗಳನ್ನು ಹರಿದು ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರ ಮೇಲೆ ಎಸೆದಿರುವುದನ್ನು ದಾವಣಗೆರೆ ಜಿಲ್ಲಾ ಬಂಜಾರ ಸಂಘ ಖಂಡಿಸಿದೆ. </p>.<p>‘ಸಭಾಧ್ಯಕ್ಷರ ಪೀಠಕ್ಕೆ ಮತ್ತು ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿಯವರ ಮೇಲೆ ನಡೆದ ಕೃತ್ಯ ಪ್ರಜಾಪ್ರಭುತ್ವಕ್ಕೆ, ಸಂವಿಧಾನಕ್ಕೆ ಮಾಡಿದ ಅಕ್ಷಮ್ಯ ಅಪರಾಧ. ಈ ಘಟನೆಗೆ ಕಾರಣರಾದ ಎಲ್ಲಾ ಶಾಸಕರಾದ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು’ ಎಂದು ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಎಸ್. ನಂಜಾನಾಯ್ಕ ಹಾಗೂ ಕಾರ್ಯದರ್ಶಿ ಕೆ.ಆರ್. ಮಲ್ಲೇಶ್ ನಾಯ್ಕ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.</p>.<p>‘ಮುಗ್ಧ, ಸರಳ, ಸಜ್ಜನಿಕೆಯ ಲಂಬಾಣಿ ಜನಾಂಗದ ರಾಜಕಾರಣಿ ರುದ್ರಪ್ಪ ಲಮಾಣಿಯವರು ಸಭಾಪತಿ ಪೀಠದಲ್ಲಿರುವಾಗಲೇ ನಡೆದಿರುವ ಈ ಕೃತ್ಯ ಖಂಡನೀಯ, ಎಲ್ಲರೂ ಕ್ಷಮೆ ಕೇಳಬೇಕು. ಅವರ ಶಾಸಕ ಸ್ಥಾನವನ್ನು ಈ ತಕ್ಷಣ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.</p>.<p>‘ಬಿಜೆಪಿಯವರಿಗೆ ದಮನಿತರು, ದಲಿತರು, ಅಲೆಮಾರಿಗಳು ಮತ್ತು ತುಳಿತಕ್ಕೆ ಒಳಗಾದ ಸಮಾಜದವರು, ಮೇಲ್ಮಟ್ಟದ ರಾಜಕಾರಣದ ಅಧಿಕಾರದಲ್ಲಿ ಇರುವುದನ್ನು ಸಹಿಸುವುದಿಲ್ಲ ಎಂಬುದು ಈ ವರ್ತನೆಯಿಂದ ಮೇಲ್ನೋಟಕ್ಕೆ ಕಂಡು ಬರುತ್ತದೆ. ಇದನ್ನು ಸಹಿಸಲಾಗದ ಇವರು ಹೇಗೆ ತಾನೆ ಪ್ರಜಾಪ್ರಭುತ್ವಕ್ಕೆ, ಸಂವಿಧಾನದ ಆಶಯಗಳಿಗೆ ಗೌರವಿಸಲು ಸಾಧ್ಯ. ಸಂಸ್ಕಾರ, ಸಂಸ್ಕೃತಿ ಇಲ್ಲದ ಇಂತಹವರು ಶಾಸಕರಾಗಿ ಇರಲು ಅನರ್ಹರು. ಈ ಕುರಿತು ರಾಜ್ಯದ ಎಲ್ಲಾ ತುಳಿತ, ದಮನಿತ ಸಮಾಜದ ಮುಖಂಡರೊಂದಿಗೆ ಚರ್ಚಿಸಿ, ಮುಂದಿನ ಹೋರಾಟದ ರೂಪುರೇಷೆಗಳನ್ನು ನಿರ್ಧರಿಸಲಾಗುವುದು’ ಎಂದು ತಿಳಿಸಿದರು.</p>.<p>ಎಸ್. ಬಸವರಾಜಯ್ಯ, ಲಕ್ಷ್ಮಣ್ ರಮಾವತ್, ಸಂದೇಶ್ ನಾಯ್ಕ, ಗುರುಮೂರ್ತಿ ಮಿಯಾಪುರ, ಲಿಂಗರಾಜ, ರವಿನಾಯ್ಕ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>