ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಗೋವರ್ಧನ್, ‘ಕೇಂದ್ರದಲ್ಲಿ ಸಬ್ಸಿಡಿ ದರದಲ್ಲಿ ಮೆಕ್ಕೆಜೋಳ, ತೊಗರಿ, ಹಲಸಂದೆ ಬೀಜಗಳನ್ನು ವಿತರಿಸಲಾಗುತ್ತಿದೆ. ಪ್ರಸ್ತುತ 4,500 ಟನ್ ಯೂರಿಯಾ ಗೊಬ್ಬರ ದಾಸ್ತಾನು ಸಂಗ್ರಹಿಸಲಾಗಿದೆ. ಮೆಕ್ಕೆಜೋಳ ಬೀಜಕ್ಕೆ ಸಾಮಾನ್ಯ ವರ್ಗದ ರೈತರಿಗೆ ಪ್ರತಿ ಕೆ.ಜಿಗೆ ₹ 20 ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಸಬ್ಸಿಡಿ ಹಾಗೂ 4 ಕೆ.ಜಿ. ತೊಗರಿ ಬೀಜಗಳನ್ನು ವಿತರಿಸಲಾಗುತ್ತಿದೆ. ಪ್ರಸ್ತುತ ತಾಲ್ಲೂಕಿನಲ್ಲಿ ಬೇಡಿಕೆಯ ಎನ್.ಕೆ. ಸಿ.ಪಿ. ಪ್ರೋಲೈನ್ ಹಾಗೂ ಕಾವೇರಿ ಬೀಜಗಳನ್ನು ವಿತರಿಸಲಾಗುತ್ತಿದೆ’ ಎಂದು ತಿಳಿಸಿದರು.