<p><strong>ದಾವಣಗೆರೆ:</strong> ಪ್ರತಿಯೊಬ್ಬರೂ ಕೊರೊನಾ ಲಸಿಕೆ ಹಾಕಿಸಿಕೊಳ್ಳಬೇಕು. ಅಂಗವಿಕಲರು ಒಂದು ವೇಳೆ ಲಸಿಕೆ ಹಾಕಿಸಿಕೊಳ್ಳದಿದ್ದಲ್ಲಿ ಮಹಾನಗರ ಪಾಲಿಕೆಗೆ ಮಾಹಿತಿ ಕೊಡಿ. ನಿಮ್ಮ ಮನೆ ಬಾಗಿಲಿಗೆ ಬಂದು ಲಸಿಕೆ ಹಾಕಲಾಗುವುದು ಎಂದು ಮೇಯರ್ ಎಸ್.ಟಿ. ವೀರೇಶ್ ತಿಳಿಸಿದರು.</p>.<p>ಇಲ್ಲಿನ ರೋಟರಿ ಬಾಲಭವನದಲ್ಲಿ ಮಂಗಳವಾರ ಬೆಂಗಳೂರಿನ ಸಮರ್ಥನಂ ಸಂಸ್ಥೆ, ಕರ್ನಾಟಕ ರಾಜ್ಯ ಅಂಗವಿಕಲರ ಆರ್ಪಿಡಿ ಟಾಸ್ಕ್ಫೋರ್ಸ್ ಸಂಘ-ಸಂಸ್ಥೆಗಳ ಒಕ್ಕೂಟದ ಸಹಯೋಗದಲ್ಲಿ 250 ಜನ ವಿಕಲಚೇತನರಿಗೆ ಫುಡ್ಕಿಟ್ ವಿತರಿಸಿ ಮಾತನಾಡಿದರು.</p>.<p>ಕೋವಿಡ್ ಲಸಿಕೆ ವಿಚಾರವಾಗಿ ತಾತ್ಸರ ಮನೋಭಾವನೆ ತಾಳಬೇಡಿ. ಲಸಿಕೆ ಬಂದಾಗ ಅನೇಕ ಜನರು ಅದನ್ನು ವಿರೋಧಿಸಿದ್ದರು. ಈಗ ಎಲ್ಲರೂ ಹಾಕಿಸಿಕೊಳ್ಳುತ್ತಿದ್ದಾರೆ. ಕೆಲವರು ಇನ್ನೂ ಲಸಿಕೆಗೆ ಪಡೆಯಲು ಮುಂದಾಗಿಲ್ಲ, ಅಂಥ ಜನರು ಲಸಿಕಾ ಕೇಂದ್ರಕ್ಕೆ ಬಂದು, ಲಸಿಕೆ ಪಡೆಯಬೇಕು ಎಂದು ಮನವಿ ಮಾಡಿದರು.</p>.<p>ಅಂಗವಿಕಲ ಮತ್ತು ಹಿರಿಯ ನಾಗರಿಕರ ಇಲಾಖೆಯ ಕಲ್ಯಾಣಾಧಿಕಾರಿ ಕೆ.ಕೆ.ಪ್ರಕಾಶ ಮಾತನಾಡಿ, ವಿಕಲಚೇತನರ ಬಳಿ ಅಂಗವಿಕಲರ ಪ್ರಮಾಣಪತ್ರವಿದ್ದರೂ ಯುಡಿಐಡಿ ಕಾರ್ಡ್ ಇಲ್ಲದಿದ್ದರೆ, ಸರ್ಕಾರ ನಿಮ್ಮನ್ನು ಅಂಗವಿಕಲರು ಎಂದು ಪರಿಗಣಿಸುವುದಿಲ್ಲ. ಎಲ್ಲರೂ ಕಡ್ಡಾಯವಾಗಿ ಯುಡಿಐಡಿ ಕಾರ್ಡ್ ಮಾಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಕರ್ನಾಟಕ ರಾಜ್ಯ ಅಂಗವಿಕಲರ ಆರ್ಪಿಡಿ ಟಾಸ್ಕ್ಫೋರ್ಸ್ ಸಂಘ-ಸಂಸ್ಥೆಗಳ ಒಕ್ಕೂಟದ ಕೆ.ಎಂ. ನಟರಾಜ್, ರಾಜ್ಯ ಉಪಾಧ್ಯಕ್ಷೆ ಎಂ. ವಿಜಯಲಕ್ಷ್ಮಿ, ಸಮರ್ಥನಂ ಸಂಸ್ಥೆಯ ದೇವರಾಜ್, ಗೋಪಾಲಪ್ಪ, ಡಿ. ರಂಗನಾಥ ರಾವ್ ಗಾಯಕ್ವಾಡ್ ಅವರೂ ಇದ್ದರು. ಸಹನಾ ಪ್ರಾರ್ಥಿಸಿದರು. ರಾಘವೇಂದ್ರ ಎಸ್.ಆರ್. ಸ್ವಾಗತಿಸಿದರು. ಮಂಜುಳಾ ಹಿರೇಮಠ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಪ್ರತಿಯೊಬ್ಬರೂ ಕೊರೊನಾ ಲಸಿಕೆ ಹಾಕಿಸಿಕೊಳ್ಳಬೇಕು. ಅಂಗವಿಕಲರು ಒಂದು ವೇಳೆ ಲಸಿಕೆ ಹಾಕಿಸಿಕೊಳ್ಳದಿದ್ದಲ್ಲಿ ಮಹಾನಗರ ಪಾಲಿಕೆಗೆ ಮಾಹಿತಿ ಕೊಡಿ. ನಿಮ್ಮ ಮನೆ ಬಾಗಿಲಿಗೆ ಬಂದು ಲಸಿಕೆ ಹಾಕಲಾಗುವುದು ಎಂದು ಮೇಯರ್ ಎಸ್.ಟಿ. ವೀರೇಶ್ ತಿಳಿಸಿದರು.</p>.<p>ಇಲ್ಲಿನ ರೋಟರಿ ಬಾಲಭವನದಲ್ಲಿ ಮಂಗಳವಾರ ಬೆಂಗಳೂರಿನ ಸಮರ್ಥನಂ ಸಂಸ್ಥೆ, ಕರ್ನಾಟಕ ರಾಜ್ಯ ಅಂಗವಿಕಲರ ಆರ್ಪಿಡಿ ಟಾಸ್ಕ್ಫೋರ್ಸ್ ಸಂಘ-ಸಂಸ್ಥೆಗಳ ಒಕ್ಕೂಟದ ಸಹಯೋಗದಲ್ಲಿ 250 ಜನ ವಿಕಲಚೇತನರಿಗೆ ಫುಡ್ಕಿಟ್ ವಿತರಿಸಿ ಮಾತನಾಡಿದರು.</p>.<p>ಕೋವಿಡ್ ಲಸಿಕೆ ವಿಚಾರವಾಗಿ ತಾತ್ಸರ ಮನೋಭಾವನೆ ತಾಳಬೇಡಿ. ಲಸಿಕೆ ಬಂದಾಗ ಅನೇಕ ಜನರು ಅದನ್ನು ವಿರೋಧಿಸಿದ್ದರು. ಈಗ ಎಲ್ಲರೂ ಹಾಕಿಸಿಕೊಳ್ಳುತ್ತಿದ್ದಾರೆ. ಕೆಲವರು ಇನ್ನೂ ಲಸಿಕೆಗೆ ಪಡೆಯಲು ಮುಂದಾಗಿಲ್ಲ, ಅಂಥ ಜನರು ಲಸಿಕಾ ಕೇಂದ್ರಕ್ಕೆ ಬಂದು, ಲಸಿಕೆ ಪಡೆಯಬೇಕು ಎಂದು ಮನವಿ ಮಾಡಿದರು.</p>.<p>ಅಂಗವಿಕಲ ಮತ್ತು ಹಿರಿಯ ನಾಗರಿಕರ ಇಲಾಖೆಯ ಕಲ್ಯಾಣಾಧಿಕಾರಿ ಕೆ.ಕೆ.ಪ್ರಕಾಶ ಮಾತನಾಡಿ, ವಿಕಲಚೇತನರ ಬಳಿ ಅಂಗವಿಕಲರ ಪ್ರಮಾಣಪತ್ರವಿದ್ದರೂ ಯುಡಿಐಡಿ ಕಾರ್ಡ್ ಇಲ್ಲದಿದ್ದರೆ, ಸರ್ಕಾರ ನಿಮ್ಮನ್ನು ಅಂಗವಿಕಲರು ಎಂದು ಪರಿಗಣಿಸುವುದಿಲ್ಲ. ಎಲ್ಲರೂ ಕಡ್ಡಾಯವಾಗಿ ಯುಡಿಐಡಿ ಕಾರ್ಡ್ ಮಾಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಕರ್ನಾಟಕ ರಾಜ್ಯ ಅಂಗವಿಕಲರ ಆರ್ಪಿಡಿ ಟಾಸ್ಕ್ಫೋರ್ಸ್ ಸಂಘ-ಸಂಸ್ಥೆಗಳ ಒಕ್ಕೂಟದ ಕೆ.ಎಂ. ನಟರಾಜ್, ರಾಜ್ಯ ಉಪಾಧ್ಯಕ್ಷೆ ಎಂ. ವಿಜಯಲಕ್ಷ್ಮಿ, ಸಮರ್ಥನಂ ಸಂಸ್ಥೆಯ ದೇವರಾಜ್, ಗೋಪಾಲಪ್ಪ, ಡಿ. ರಂಗನಾಥ ರಾವ್ ಗಾಯಕ್ವಾಡ್ ಅವರೂ ಇದ್ದರು. ಸಹನಾ ಪ್ರಾರ್ಥಿಸಿದರು. ರಾಘವೇಂದ್ರ ಎಸ್.ಆರ್. ಸ್ವಾಗತಿಸಿದರು. ಮಂಜುಳಾ ಹಿರೇಮಠ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>