<p><strong>ದಾವಣಗೆರೆ:</strong> ಜಿಲ್ಲಾಡಳಿತದ ನೇತೃತ್ವದಲ್ಲಿ ಶುಕ್ರವಾರ ನಡೆದ ನಾಗರಿಕರಿಗೆ ಕೋಳಿ ಮೊಟ್ಟೆ ವಿತರಣೆ ಕಾರ್ಯಕ್ರಮಕ್ಕೆಶಾಸಕ ಶಾಮನೂರು ಶಿವಶಂಕರಪ್ಪ ಮತ್ತು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಚಾಲನೆ ನೀಡಿದರು.</p>.<p>ಎಸ್ಪಿಎಸ್ ನಗರ ಮತ್ತು ಜಾಲಿನಗರ, ಬೂದಾಳ್ ರಸ್ತೆಗಳಲ್ಲಿ ಸಾಂಕೇತಿಕವಾಗಿ ಕೋಳಿ ಮೊಟ್ಟೆಗಳನ್ನು ವಿತರಿಸಲಾಯಿತು.</p>.<p>ಕೊರೊನಾ ವೈರಸ್ ಭೀತಿಯಿಂದ ಜನರಿಗೆ ಪೌಷ್ಟಿಕಾಂಶದ ಕೊರತೆ ಆಗಬಾರದು ಎಂಬ ಸದುದ್ದೇಶದಿಂದ ಕೋಳಿ ಮೊಟ್ಟೆಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಜನರು ಇದರ ಸದುಪಯೋಗ ಪಡೆಯಬೇಕು ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು.</p>.<p>ಜಿಲ್ಲಾಡಳಿತದ ನೇತೃತ್ವದಲ್ಲಿ ಮಹಾನಗರ ಪಾಲಿಕೆ, ಪಶುಪಾಲನಾ ಮತ್ತು ವೈದ್ಯಕೀಯ ಇಲಾಖೆ ಹಾಗೂ ದಾವಣಗೆರೆ ಜಿಲ್ಲಾ ಕೋಳಿ ಸಾಕಾಣಿಕೆದಾರರ ಸಂಘದ ಸಹಕಾರದೊಂದಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.</p>.<p>ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಪಾಲಿಕೆ ವಿರೋಧ ಪಕ್ಷದ ನಾಯಕ ಎ.ನಾಗರಾಜ್, ಸದಸ್ಯರಾದ ಸುಧಾ ಇಟ್ಟಿಗುಡಿ, ವಿನಾಯಕ ಪೈಲ್ವಾನ್, ನಗರಸಭೆ ಮಾಜಿ ಉಪಾಧ್ಯಕ್ಷ ಎಸ್.ಎನ್. ಚಂದ್ರಪ್ಪ ಇದ್ದರು.</p>.<p class="Subhead"><strong>ಸಾಮಾಜಿಕ ಅಂತರ ಕಾಯ್ದುಕೊಳ್ಳದ ಜನ:</strong>ಮೊಟ್ಟೆ ವಿತರಣೆ ವೇಳೆ ಸಾಮಾಜಿಕ ಅಂತರ ಕಾಯದೆ ಜನರು ಮುಗಿಬಿದ್ದರು. ಬಳಿಕ ಸಾಂಕೇತಿಕವಾಗಿ ಮೊಟ್ಟೆ ವಿತರಿಸಿ, ಬೂದಾಳ್ ರಸ್ತೆಯ ಮನೆ, ಮನೆಗೆ ಹೋಗಿ ಮೊಟ್ಟೆ ಹಂಚಲಾಯಿತು.</p>.<p class="Subhead">ಹೋಟೆಲ್ ಉದ್ದಿಮೆದಾರರ ಸಂಘದಿಂದ ಆಹಾರದ ಕಿಟ್ ವಿತರಣೆ:</p>.<p>ದಾವಣಗೆರೆ ಹೋಟೆಲ್ ಉದ್ದಿಮೆದಾರರ ಸಂಘದಿಂದ ಇಲ್ಲಿನ ಪಿ.ಬಿ. ರಸ್ತೆಯ ಅಪೂರ್ವ ಹೋಟೆಲ್ ಬಳಿ ಆಹಾರದ ಕಿಟ್ ವಿತರಿಸಲಾಯಿತು. ಅಂತರ ಕಾಯ್ದುಕೊಳ್ಳದೆ ಜನರು ಸರತಿಯಲ್ಲಿ ನಿಂತಿದ್ದರು.</p>.<p>ಆಟೊದಲ್ಲಿ ಕಿಟ್ ತರುತ್ತಿದ್ದಂತೆ ಜನರು ಇದನ್ನು ತೆಗೆದುಕೊಳ್ಳಲು ಮುಗಿಬಿದ್ದರು. ಈ ವೇಳೆ ನೂಕು ನುಗ್ಗಲು ಉಂಟಾಯಿತು. ಬಳಿಕ ಜನರನ್ನು ಚದುರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಜಿಲ್ಲಾಡಳಿತದ ನೇತೃತ್ವದಲ್ಲಿ ಶುಕ್ರವಾರ ನಡೆದ ನಾಗರಿಕರಿಗೆ ಕೋಳಿ ಮೊಟ್ಟೆ ವಿತರಣೆ ಕಾರ್ಯಕ್ರಮಕ್ಕೆಶಾಸಕ ಶಾಮನೂರು ಶಿವಶಂಕರಪ್ಪ ಮತ್ತು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಚಾಲನೆ ನೀಡಿದರು.</p>.<p>ಎಸ್ಪಿಎಸ್ ನಗರ ಮತ್ತು ಜಾಲಿನಗರ, ಬೂದಾಳ್ ರಸ್ತೆಗಳಲ್ಲಿ ಸಾಂಕೇತಿಕವಾಗಿ ಕೋಳಿ ಮೊಟ್ಟೆಗಳನ್ನು ವಿತರಿಸಲಾಯಿತು.</p>.<p>ಕೊರೊನಾ ವೈರಸ್ ಭೀತಿಯಿಂದ ಜನರಿಗೆ ಪೌಷ್ಟಿಕಾಂಶದ ಕೊರತೆ ಆಗಬಾರದು ಎಂಬ ಸದುದ್ದೇಶದಿಂದ ಕೋಳಿ ಮೊಟ್ಟೆಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಜನರು ಇದರ ಸದುಪಯೋಗ ಪಡೆಯಬೇಕು ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು.</p>.<p>ಜಿಲ್ಲಾಡಳಿತದ ನೇತೃತ್ವದಲ್ಲಿ ಮಹಾನಗರ ಪಾಲಿಕೆ, ಪಶುಪಾಲನಾ ಮತ್ತು ವೈದ್ಯಕೀಯ ಇಲಾಖೆ ಹಾಗೂ ದಾವಣಗೆರೆ ಜಿಲ್ಲಾ ಕೋಳಿ ಸಾಕಾಣಿಕೆದಾರರ ಸಂಘದ ಸಹಕಾರದೊಂದಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.</p>.<p>ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಪಾಲಿಕೆ ವಿರೋಧ ಪಕ್ಷದ ನಾಯಕ ಎ.ನಾಗರಾಜ್, ಸದಸ್ಯರಾದ ಸುಧಾ ಇಟ್ಟಿಗುಡಿ, ವಿನಾಯಕ ಪೈಲ್ವಾನ್, ನಗರಸಭೆ ಮಾಜಿ ಉಪಾಧ್ಯಕ್ಷ ಎಸ್.ಎನ್. ಚಂದ್ರಪ್ಪ ಇದ್ದರು.</p>.<p class="Subhead"><strong>ಸಾಮಾಜಿಕ ಅಂತರ ಕಾಯ್ದುಕೊಳ್ಳದ ಜನ:</strong>ಮೊಟ್ಟೆ ವಿತರಣೆ ವೇಳೆ ಸಾಮಾಜಿಕ ಅಂತರ ಕಾಯದೆ ಜನರು ಮುಗಿಬಿದ್ದರು. ಬಳಿಕ ಸಾಂಕೇತಿಕವಾಗಿ ಮೊಟ್ಟೆ ವಿತರಿಸಿ, ಬೂದಾಳ್ ರಸ್ತೆಯ ಮನೆ, ಮನೆಗೆ ಹೋಗಿ ಮೊಟ್ಟೆ ಹಂಚಲಾಯಿತು.</p>.<p class="Subhead">ಹೋಟೆಲ್ ಉದ್ದಿಮೆದಾರರ ಸಂಘದಿಂದ ಆಹಾರದ ಕಿಟ್ ವಿತರಣೆ:</p>.<p>ದಾವಣಗೆರೆ ಹೋಟೆಲ್ ಉದ್ದಿಮೆದಾರರ ಸಂಘದಿಂದ ಇಲ್ಲಿನ ಪಿ.ಬಿ. ರಸ್ತೆಯ ಅಪೂರ್ವ ಹೋಟೆಲ್ ಬಳಿ ಆಹಾರದ ಕಿಟ್ ವಿತರಿಸಲಾಯಿತು. ಅಂತರ ಕಾಯ್ದುಕೊಳ್ಳದೆ ಜನರು ಸರತಿಯಲ್ಲಿ ನಿಂತಿದ್ದರು.</p>.<p>ಆಟೊದಲ್ಲಿ ಕಿಟ್ ತರುತ್ತಿದ್ದಂತೆ ಜನರು ಇದನ್ನು ತೆಗೆದುಕೊಳ್ಳಲು ಮುಗಿಬಿದ್ದರು. ಈ ವೇಳೆ ನೂಕು ನುಗ್ಗಲು ಉಂಟಾಯಿತು. ಬಳಿಕ ಜನರನ್ನು ಚದುರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>