<p><strong>ದಾವಣಗೆರೆ: </strong>ಓಮೈಕ್ರಾನ್ ವೈರಸ್ ಸಂಬಂಧ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದ್ದು, ಜಿಲ್ಲೆಯಲ್ಲಿ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಜಾರಿಗೆ ತರುವ ನಿಮಿತ್ತ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಶುಕ್ರವಾರ ನಗರದ ಸಿ.ಜಿ. ಆಸ್ಪತ್ರೆಯಲ್ಲಿ ಸಿದ್ಧತೆಗಳನ್ನು ಪರಿಶೀಲಿಸಿದರು.</p>.<p>ಸಿ.ಜಿ.ಆಸ್ಪತ್ರೆಯಲ್ಲಿ ಬೆಡ್ಗಳ ಸಾಮರ್ಥ್ಯ, ವೆಂಟಿಲೇಟರ್ಗಳು, ಆಮ್ಲಜನಕ ಹಾಸಿಗೆ, ಆಮ್ಲಜನಕ ಘಟಕ ಹಾಗೂ ಮಾನವ ಸಂಪನ್ಮೂಲದ ಬಗೆಗೆ ಮಾಹಿತಿ ಪಡೆದರು.</p>.<p>‘ಎರಡೂ ಅಲೆಗಳನ್ನು ಯಶಸ್ವಿಯಾಗಿ ನಿಭಾಯಿಸಿರುವ ಅನುಭವ ಬಳಸಿಕೊಂಡು ಓಮೈಕ್ರಾನ್ ತಡೆಗಟ್ಟುವ ಬಗೆಗೆ ಎಲ್ಲಾ ಸಾಧ್ಯತೆಗಳನ್ನೂ ಬಳಸಿಕೊಳ್ಳಲಾಗುತ್ತದೆ. ಮಾಸ್ಕ್ ಧರಿಸುವುದನ್ನು ಮತ್ತಷ್ಟು ಕಡ್ಡಾಯಗೊಳಿಸುತ್ತಿದ್ದು, ಸರ್ಕಾರ ನಿಗದಿಗೊಳಿಸಿರುವಂತೆ ನಗರ ಪ್ರದೇಶಗಳಲ್ಲಿ ₹ 250 ತಾಲ್ಲೂಕು ಮಟ್ಟದಲ್ಲಿ ₹150 ದಂಡ ವಿಧಿಸಲು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗುವುದು. ಸಾರ್ವಜನಿಕ ಸ್ಥಳಗಳಲ್ಲಿ ಜನಜಂಗುಳಿ ನಿಯಂತ್ರಿಸುವುದು, ಶಾಲಾ ಕಾಲೇಜುಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿರ್ಬಂಧಿಸಲಾಗುವುದು’ ಎಂದು ಹೇಳಿದರು.</p>.<p>ಸಿ.ಜಿ.ಆಸ್ಪತ್ರೆಯ ಅಧೀಕ್ಷಕ ಡಾ. ಜಯಪ್ರಕಾಶ್ ಹಾಗೂ ವೈದ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಓಮೈಕ್ರಾನ್ ವೈರಸ್ ಸಂಬಂಧ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದ್ದು, ಜಿಲ್ಲೆಯಲ್ಲಿ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಜಾರಿಗೆ ತರುವ ನಿಮಿತ್ತ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಶುಕ್ರವಾರ ನಗರದ ಸಿ.ಜಿ. ಆಸ್ಪತ್ರೆಯಲ್ಲಿ ಸಿದ್ಧತೆಗಳನ್ನು ಪರಿಶೀಲಿಸಿದರು.</p>.<p>ಸಿ.ಜಿ.ಆಸ್ಪತ್ರೆಯಲ್ಲಿ ಬೆಡ್ಗಳ ಸಾಮರ್ಥ್ಯ, ವೆಂಟಿಲೇಟರ್ಗಳು, ಆಮ್ಲಜನಕ ಹಾಸಿಗೆ, ಆಮ್ಲಜನಕ ಘಟಕ ಹಾಗೂ ಮಾನವ ಸಂಪನ್ಮೂಲದ ಬಗೆಗೆ ಮಾಹಿತಿ ಪಡೆದರು.</p>.<p>‘ಎರಡೂ ಅಲೆಗಳನ್ನು ಯಶಸ್ವಿಯಾಗಿ ನಿಭಾಯಿಸಿರುವ ಅನುಭವ ಬಳಸಿಕೊಂಡು ಓಮೈಕ್ರಾನ್ ತಡೆಗಟ್ಟುವ ಬಗೆಗೆ ಎಲ್ಲಾ ಸಾಧ್ಯತೆಗಳನ್ನೂ ಬಳಸಿಕೊಳ್ಳಲಾಗುತ್ತದೆ. ಮಾಸ್ಕ್ ಧರಿಸುವುದನ್ನು ಮತ್ತಷ್ಟು ಕಡ್ಡಾಯಗೊಳಿಸುತ್ತಿದ್ದು, ಸರ್ಕಾರ ನಿಗದಿಗೊಳಿಸಿರುವಂತೆ ನಗರ ಪ್ರದೇಶಗಳಲ್ಲಿ ₹ 250 ತಾಲ್ಲೂಕು ಮಟ್ಟದಲ್ಲಿ ₹150 ದಂಡ ವಿಧಿಸಲು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗುವುದು. ಸಾರ್ವಜನಿಕ ಸ್ಥಳಗಳಲ್ಲಿ ಜನಜಂಗುಳಿ ನಿಯಂತ್ರಿಸುವುದು, ಶಾಲಾ ಕಾಲೇಜುಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿರ್ಬಂಧಿಸಲಾಗುವುದು’ ಎಂದು ಹೇಳಿದರು.</p>.<p>ಸಿ.ಜಿ.ಆಸ್ಪತ್ರೆಯ ಅಧೀಕ್ಷಕ ಡಾ. ಜಯಪ್ರಕಾಶ್ ಹಾಗೂ ವೈದ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>