ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ಕರ್ ಫರ್ನಾಂಡೀಸ್ ನಿಧನಕ್ಕೆ ಜಿಲ್ಲಾ ಕಾಂಗ್ರೆಸ್‍ನಿಂದ ಶ್ರದ್ಧಾಂಜಲಿ

Last Updated 15 ಸೆಪ್ಟೆಂಬರ್ 2021, 4:42 IST
ಅಕ್ಷರ ಗಾತ್ರ

ದಾವಣಗೆರೆ: ರಾಜ್ಯಸಭಾ ಸದಸ್ಯರಾದ ಆಸ್ಕರ್ ಫರ್ನಾಂಡೀಸ್ ಅವರ ನಿಧನಕ್ಕೆ ಜಿಲ್ಲಾ ಕಾಂಗ್ರೆಸ್‌ನಿಂದ ಮಂಗಳವಾರ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಕೆಪಿಸಿಸಿ ವಕ್ತಾರ ಡಿ.ಬಸವರಾಜ್, ‘ದೇಶ ಕಂಡ ಅಪರೂಪದ ರಾಜಕಾರಣಿಗಳಲ್ಲಿ ಆಸ್ಕರ್ ಫರ್ನಾಂಡೀಸ್ ಅವರು ಒಬ್ಬರು. ಸರಳ ಸಜ್ಜನಿಕೆಯ ಆಸ್ಕರ್ ಪಕ್ಷದ ಸಂಘಟನೆಗೆ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು’ ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಸೋಮ್ಲಾಪುರದ ಹನುಮಂತಪ್ಪ, ಕೆಪಿಸಿಸಿ ಸದಸ್ಯರಾದ ಜಿ,ಹಚ್, ಮರಿಯೋಜಿರಾವ್, ಕೆಪಿಸಿಸಿ ಸಂಯೋಜಕರಾದ ಕೆ.ಸಿ.ಲಿಂಗರಾಜ ಅನೆಕೊಂಡ, ರಾಜೀವ್‍ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ರಾಘವೇಂದ್ರ ಗೌಡ, ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಸಾಗರ್ ಎಲ್.ಎಚ್., ಜಿಲ್ಲಾ ಕಾರ್ಯದರ್ಶಿ ಎಸ್. ಮಲ್ಲಿಕಾರ್ಜುನ್, ಸೇವಾದಳದ ಜಬ್ಬಾರ್, ಹರೀಶ್ ಎಚ್., ಎಸ್ಸಿ ಘಟಕದ ರಂಗಸ್ವಾಮಿ ಅವರು ಒಡನಾಟವನ್ನು ಹಂಚಿಕೊಂಡರು

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್, ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಖಾಲಿದ್, ಕಿಸಾನ್ ಕಾಂಗ್ರೆಸ್ ಸುರೇಶ್ ಜಾಧವ್, ಆಟೊ ತಿಮ್ಮಣ್ಣ, ಸೈಯದ್ ಜಿಕ್ರಿಯಾ, ಮಹಮ್ಮದ್ ಬಾಷಾ, ಮಲ್ಲಿಕಾರ್ಜುನ್ ಇಂಗಳೇಶ್ವರ, ಸುಬಾನ್ ಸಾಬ್, ಶಶಿಧರ್ ಪಾಟೀಲ್, ಕೊಡಪಾನ ದಾದಾಪೀರ್ ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT