ವಿಶ್ವ ಕುರುಡು ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ಹಾಗೂ ಸಮರ್ಥನಂ ಅಂಗವಿಕಲರ ಸಂಸ್ಥೆಯವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಜಿ.ಕೆ., ಸಮರ್ಥನಂ ಸಂಸ್ಥೆಯು ಅಂಗವಿಕಲರ ಶಿಕ್ಷಣ, ತರಬೇತಿ, ಕ್ರೀಡೆ, ಸಾಂಸ್ಕೃತಿಕ ರಂಗ ಹಾಗೂ ಪರಿಸರ ರಂಗದಲ್ಲಿ ಕೆಲಸ ಮಾಡುತ್ತದೆ. ದೇಶದ 7 ರಾಜ್ಯಗಳಲ್ಲಿ, ಕರ್ನಾಟಕದ 13 ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಅಮೆರಿಕ, ಯುಕೆಗಳಲ್ಲಿ ಸಂಸ್ಥೆಯನ್ನು ನೋಂದಾಯಿಸಲಾಗಿದೆ ಎಂದು ಮಾಹಿತಿ ನೀಡಿದರು.