<p><strong>ದಾವಣಗೆರೆ</strong>: ಜಿಲ್ಲಾ ಆಸ್ಪತ್ರೆಯನ್ನು ಉನ್ನತ ದರ್ಜೆಗೆ ಏರಿಸುವ ಚಿಂತನೆ ಇದೆ. ಈ ಕುರಿತು ಮುಖ್ಯಮಂತ್ರಿ ಜತೆ ಮಾತನಾಡಿದ್ದೇನೆ. ಅನುದಾನ ಬಿಡುಗಡೆ ಮಾಡುವಂತೆಯೂ ಪತ್ರ ಬರೆದಿದ್ದೇನೆ. ಶೀಘ್ರದಲ್ಲಿ ಈ ಕೆಲಸ ಆಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ತಿಳಿಸಿದರು.</p>.<p>ಮಂಗಳವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಕೊರೊನಾ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಸಾಕಷ್ಟು ಶ್ರಮ ಹಾಕಿ ಕೆಲಸ ಮಾಡುತ್ತಿದೆ. ಹಾಗಾಗಿ ಸೋಂಕಿತರಲ್ಲಿ ಈಗಾಗಲೇ 157 ಮಂದಿ ಬಿಡುಗಡೆಗೊಂಡಿದ್ದು, ಇನ್ನಷ್ಟು ಮಂದಿ ಬಿಡುಗಡೆಗೆ ಸಿದ್ಧಗೊಂಡಿದ್ದಾರೆ’ ಎಂದು ಹೇಳಿದರು.</p>.<p>ಜೂನ್ 12ರಂದು ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷಾ ಪ್ರಯೋಗಾಲಯವನ್ನು ಉದ್ಘಾಟಿಸಲಾಗುವುದು ಎಂದು ಮಾಹಿತಿ ನೀಡಿದರು.</p>.<p>ರಾಜ್ಯಸಭಾ ಟಿಕೆಟ್ ಹಂಚಿಕೆ ಮಾಡಿದ್ದು ಹೈಕಮಾಂಡ್ ನಿರ್ಧಾರ. ಅದಕ್ಕೆ ನಾವೆಲ್ಲರೂ ಬದ್ದವರಾಗಿದ್ದೇವೆ. ಪಕ್ಷದ ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸಿ ಟಿಕೆಟ್ ನೀಡಲಾಗಿದೆ. ಪ್ರಭಾಕರ ಕೋರೆ ಜತೆ ಮಾತನಾಡಿದ್ದೇನೆ. ಯಾರಿಗೂ ಯಾವುದೇ ಅಸಮಾಧಾನವಿಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಜಿಲ್ಲಾ ಆಸ್ಪತ್ರೆಯನ್ನು ಉನ್ನತ ದರ್ಜೆಗೆ ಏರಿಸುವ ಚಿಂತನೆ ಇದೆ. ಈ ಕುರಿತು ಮುಖ್ಯಮಂತ್ರಿ ಜತೆ ಮಾತನಾಡಿದ್ದೇನೆ. ಅನುದಾನ ಬಿಡುಗಡೆ ಮಾಡುವಂತೆಯೂ ಪತ್ರ ಬರೆದಿದ್ದೇನೆ. ಶೀಘ್ರದಲ್ಲಿ ಈ ಕೆಲಸ ಆಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ತಿಳಿಸಿದರು.</p>.<p>ಮಂಗಳವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಕೊರೊನಾ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಸಾಕಷ್ಟು ಶ್ರಮ ಹಾಕಿ ಕೆಲಸ ಮಾಡುತ್ತಿದೆ. ಹಾಗಾಗಿ ಸೋಂಕಿತರಲ್ಲಿ ಈಗಾಗಲೇ 157 ಮಂದಿ ಬಿಡುಗಡೆಗೊಂಡಿದ್ದು, ಇನ್ನಷ್ಟು ಮಂದಿ ಬಿಡುಗಡೆಗೆ ಸಿದ್ಧಗೊಂಡಿದ್ದಾರೆ’ ಎಂದು ಹೇಳಿದರು.</p>.<p>ಜೂನ್ 12ರಂದು ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷಾ ಪ್ರಯೋಗಾಲಯವನ್ನು ಉದ್ಘಾಟಿಸಲಾಗುವುದು ಎಂದು ಮಾಹಿತಿ ನೀಡಿದರು.</p>.<p>ರಾಜ್ಯಸಭಾ ಟಿಕೆಟ್ ಹಂಚಿಕೆ ಮಾಡಿದ್ದು ಹೈಕಮಾಂಡ್ ನಿರ್ಧಾರ. ಅದಕ್ಕೆ ನಾವೆಲ್ಲರೂ ಬದ್ದವರಾಗಿದ್ದೇವೆ. ಪಕ್ಷದ ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸಿ ಟಿಕೆಟ್ ನೀಡಲಾಗಿದೆ. ಪ್ರಭಾಕರ ಕೋರೆ ಜತೆ ಮಾತನಾಡಿದ್ದೇನೆ. ಯಾರಿಗೂ ಯಾವುದೇ ಅಸಮಾಧಾನವಿಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>