12 ಸಾವಿರ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಲಾಗಿತ್ತು. 11 ಸಾವಿರ ಮಂದಿಗೆ ಕಳುಹಿಸಲಾಗಿತ್ತು. ಅದರಲ್ಲಿ ವಿಳಾಸ ಬದಲಾಗಿರುವ, ಸ್ವಷ್ಟವಿಲ್ಲದ ಸುಮಾರು 1 ಸಾವಿರದಷ್ಟು ಆಹ್ವಾನ ಪತ್ರಿಕೆಗಳು ವಾಪಸ್ಸಾಗಿವೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಸಮ್ಮೇಳನಾಧ್ಯಕ್ಷರು ಅಧ್ಯಕ್ಷೀಯ ನುಡಿಗಳನ್ನಾಡಲಿದ್ದಾರೆ. ಡಾ.ಎಂ.ಜಿ. ಈಶ್ವರಪ್ಪ, ಪ್ರೊ. ಭಿಕ್ಷಾವರ್ತಿಮಠ, ಬಿ.ಎನ್. ಮಲ್ಲೇಶ್, ಬಾ.ಮ. ಬಸವರಾಜಯ್ಯ, ಪ್ರೊ.ಸಿ.ನರಸಿಂಹಪ್ಪ ಅವರ ಅಧ್ಯಕ್ಷತೆಯಲ್ಲಿ ವಿವಿಧ ಗೋಷ್ಠಿಗಳು ನಡೆಯಲಿವೆ. ರವೀಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕೂಡ ಆಯ್ದ 6 ತಂಡಗಳು ಮಾತ್ರ ಭಾಗವಹಿಸಲಿವೆ ಎಂದು ಮಾಹಿತಿ ನೀಡಿದರು.