<p><strong>ದಾವಣಗೆರೆ: ‘</strong>ಅಧಿಕಾರ ಹಸ್ತಾಂತರ ವಿಚಾರದಲ್ಲಿ ಡಿ.ಕೆ. ಶಿವಕುಮಾರ್ ಅವರಿಗೆ ಹಿನ್ನಡೆಯಾಗುತ್ತಿಲ್ಲ. ಬದಲಿಗೆ, ಅವರಿಗೆ ಪೂರಕವಾದ ವಾತಾವರಣವೇ ಇದೆ. ಹೈಕಮಾಂಡ್ ತೀರ್ಮಾನ ಮಾಡಿದರೆ ಎಲ್ಲವೂ ಬಗೆಹರಿಯಲಿದೆ’ ಎಂದು ಚನ್ನಗಿರಿಯ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜು ಹೇಳಿದರು. </p>.<p>ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಧಿಕಾರ ಹಸ್ತಾಂತರದ ಗೊಂದಲದ ಬಗ್ಗೆ ಎಲ್ಲರೂ ನಮ್ಮನ್ನು ಪ್ರಶ್ನೆ ಮಾಡುತ್ತಿದ್ದಾರೆ. ಅಧಿಕಾರ ಹಂಚಿಕೆಯ ಗೊಂದಲವನ್ನು ಹೈಕಮಾಂಡ್ ತಕ್ಷಣವೇ ಬಗೆಹರಿಸಬೇಕು. ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ಬದ್ಧ’ ಎಂದರು.</p>.<p>‘ಶೀಘ್ರವೇ ನಿರ್ಧಾರ ಕೈಗೊಳ್ಳದಿದ್ದರೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದು ಕಷ್ಟ’ ಎಂಬ ಶಾಸಕ ಬಾಲಕೃಷ್ಣ ಅವರ ಹೇಳಿಕೆಯಲ್ಲಿ ಅರ್ಥವಿದೆ. ‘ಬಿಜೆಪಿ ಆಡಳಿತದ ಅವಧಿಯಲ್ಲಿನ ಕುರ್ಚಿ ಕಿತ್ತಾಟದಿಂದ ಬೇಸತ್ತ ಜನ ಕಾಂಗ್ರೆಸ್ ಕಡೆ ಒಲವು ತೋರಿದ್ದರು ಎಂಬುದನ್ನು ನಾವು ಮರೆಯಬಾರದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: ‘</strong>ಅಧಿಕಾರ ಹಸ್ತಾಂತರ ವಿಚಾರದಲ್ಲಿ ಡಿ.ಕೆ. ಶಿವಕುಮಾರ್ ಅವರಿಗೆ ಹಿನ್ನಡೆಯಾಗುತ್ತಿಲ್ಲ. ಬದಲಿಗೆ, ಅವರಿಗೆ ಪೂರಕವಾದ ವಾತಾವರಣವೇ ಇದೆ. ಹೈಕಮಾಂಡ್ ತೀರ್ಮಾನ ಮಾಡಿದರೆ ಎಲ್ಲವೂ ಬಗೆಹರಿಯಲಿದೆ’ ಎಂದು ಚನ್ನಗಿರಿಯ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜು ಹೇಳಿದರು. </p>.<p>ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಧಿಕಾರ ಹಸ್ತಾಂತರದ ಗೊಂದಲದ ಬಗ್ಗೆ ಎಲ್ಲರೂ ನಮ್ಮನ್ನು ಪ್ರಶ್ನೆ ಮಾಡುತ್ತಿದ್ದಾರೆ. ಅಧಿಕಾರ ಹಂಚಿಕೆಯ ಗೊಂದಲವನ್ನು ಹೈಕಮಾಂಡ್ ತಕ್ಷಣವೇ ಬಗೆಹರಿಸಬೇಕು. ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ಬದ್ಧ’ ಎಂದರು.</p>.<p>‘ಶೀಘ್ರವೇ ನಿರ್ಧಾರ ಕೈಗೊಳ್ಳದಿದ್ದರೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದು ಕಷ್ಟ’ ಎಂಬ ಶಾಸಕ ಬಾಲಕೃಷ್ಣ ಅವರ ಹೇಳಿಕೆಯಲ್ಲಿ ಅರ್ಥವಿದೆ. ‘ಬಿಜೆಪಿ ಆಡಳಿತದ ಅವಧಿಯಲ್ಲಿನ ಕುರ್ಚಿ ಕಿತ್ತಾಟದಿಂದ ಬೇಸತ್ತ ಜನ ಕಾಂಗ್ರೆಸ್ ಕಡೆ ಒಲವು ತೋರಿದ್ದರು ಎಂಬುದನ್ನು ನಾವು ಮರೆಯಬಾರದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>