ಡಯಟ್ ಉಪನಿರ್ದೇಶಕ ಎಚ್.ಕೆ.ಲಿಂಗರಾಜ್, ‘ಕಲೆ, ಸಾಹಿತ್ಯ, ಸಂಗೀತ ಹಾಗೂ ಸಂಸ್ಕೃತಿ ಭಾರತದ ಮೂಲ ಬೇರುಗಳು. ಇವುಗಳಿಂದಾಗಿಯೇ ಭಾರತ ದೇಶ ಉನ್ನತ ಸ್ಥಾನಕ್ಕೆ ಬೆಳೆದಿದೆ. ದಾವಣಗೆರೆಗೆ ಹಿಂದೆ ‘ಕರ್ನಾಟಕದ ಮ್ಯಾಂಚೆಸ್ಟರ್’ ಎಂಬ ಖ್ಯಾತಿ ಪಡೆದಿತ್ತು. ಆದರೆ ಈಗ ಅವೆಲ್ಲಾ ನಶಿಸಿಹೋಗಿವೆ. ಇದಕ್ಕೆ ಪರ್ಯಾಯವಾಗಿ ಗುಣಾತ್ಮಕ ಶಿಕ್ಷಣ ನೀಡುವ ಸಂಸ್ಥೆಗಳು ಬೆಳೆದಿದ್ದು, ‘ಕೇಂಬ್ರಿಡ್ಜ್ ಆಫ್ ಕರ್ನಾಟಕ’ ಎಂಬ ಹೆಸರಿನಿಂದಲೂ ಕರೆಯಬಹುದು’ ಎಂದು ಹೇಳಿದರು.