<p><strong>ದಾವಣಗೆರೆ: </strong>ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವವರು ದೇಹವನ್ನು ಅತಿಯಾಗಿ ಬಳಲಿಸಬಾರದು. ಆರೋಗ್ಯ ಕಾಯ್ದುಕೊಳ್ಳಬೇಕು ಎಂದು ಶಾಸಕ ಎಸ್.ಎ.ರವೀಂದ್ರನಾಥ್ ಸಲಹೆ ನೀಡಿದರು.</p>.<p>ರಾಜ್ಯ ವೇಟ್ ಲಿಫ್ಟರ್ಸ್ ಅಸೋಸಿಯೇಷನ್, ಜಿಲ್ಲಾ ವೇಟ್ ಲಿಫ್ಟಿಂಗ್ ಅಸೋಸಿಯೇಷನ್ ಹಾಗೂ ನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ನಗರದ ಗುಂಡಿ ಮಹದೇವಪ್ಪ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿರುವ ರಾಜ್ಯಮಟ್ಟದ ವೇಟ್ ಲಿಫ್ಟಿಂಗ್ ಸ್ಪರ್ಧೆಯನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ದೇಹದಲ್ಲಿ ನಿಶ್ಯಕ್ತಿ ಕಾಣಿಸಿಕೊಂಡ ನಂತರವೂ ಗೆಲ್ಲಬೇಕೆಂಬ ಹಠದಿಂದ ವೇಟ್ ಲಿಫ್ಟಿಂಗ್ನಲ್ಲಿ ತೊಡಗಬಾರದು. ನಟ ಪುನೀತ್ ರಾಜ್ಕುಮಾರ್ ಅವರಿಗೆ ಆದ ಪರಿಸ್ಥಿತಿಯನ್ನು ಕ್ರೀಡಾಪಟುಗಳು ತಂದುಕೊಳ್ಳಬಾರದು ಎಂದು ಕಿವಿಮಾತು ಹೇಳಿದರು.</p>.<p>ರಕ್ತದೊತ್ತಡ,ಸಕ್ಕರೆ ಮಟ್ಟ ಹಾಗೂ ಹೃದಯದ ಆರೋಗ್ಯದ ಬಗ್ಗೆ ನಿಯಮಿತವಾಗಿ ತಪಾಸಣೆಗೆ ಮಾಡಿದರು.</p>.<p>ಮೇಯರ್ ಎಸ್.ಟಿ.ವೀರೇಶ್, ‘ಕೊವಿಡ್ ಎರಡನೇ ಅಲೆಯಲ್ಲಿ ಸ್ತಬ್ಧವಾಗಿದ್ದ ಕ್ರೀಡಾ ವಲಯ ಈಗ ಮತ್ತೆ ಚಟುವಟಿಕೆಯಿಂದ ಕೂಡಿದೆ.ವೇಟ್ ಲಿಫ್ಟಿಂಗ್ಗೆ ಪಾಲಿಕೆ ವತಿಯಿಂದ ₹ 2ಲಕ್ಷ ನೀಡಲಾಗಿದೆ.ಶೀಘ್ರದಲ್ಲೇ ಮಹಿಳೆಯರಿಗಾಗಿ ಪಾಲಿಕೆಯಿಂದ ಪ್ರತ್ಯೇಕ ಜಿಮ್ ತೆರೆಯಲಾಗುವುದು’ ಎಂದು ತಿಳಿಸಿದರು</p>.<p>ಭಾರತೀಯ ವೇಟ್ ಲಿಫ್ಟಿಂಗ್ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಎಸ್.ಎಚ್.ಆನಂದ ಗೌಡ, ‘ಈ ಕ್ರೀಡಾಕೂಟದಲ್ಲಿ 260ಕ್ಕೂ ಹೆಚ್ಚು ಕ್ರೀಡಾಪಟುಗಳು ಪಾಲ್ಗೊಂಡಿದ್ದಾರೆ. ಪ್ರತಿಭೆಗಳನ್ನು ಆರಂಭದಲ್ಲೇ ಗುರುತಿಸಿ ಪ್ರೋತ್ಸಾಹ – ತರಬೇತಿ ನೀಡಲು ಇಂತಹ ಕ್ರೀಡಾಕೂಟಗಳು ನೆರವಾಗುತ್ತವೆ.ದಾವಣಗೆರೆಯಲ್ಲಿ ವೇಟ್ ಲಿಫ್ಟಿಂಗ್ಗೆ ನೆರವಾಗಲು ಸೌಲಭ್ಯಗಳನ್ನು ಕಲ್ಪಿಸಲಾಗುವುದು’ ಎಂದು ಭರವಸೆ ನೀಡಿದರು.</p>.<p>ಪಾಲಿಕೆ ಸದಸ್ಯ ಚಮನ್ ಸಾಬ್ ಹಾಗೂ ಬಿಜೆಪಿ ಮುಖಂಡ ಅನಿತ್ ಸಿದ್ದೇಶ್ವರ ಮಾತನಾಡಿದರು. ಜಿಲ್ಲಾ ವೇಟ್ ಲಿಫ್ಟಿಂಗ್ ಅಸೋಸಿಯೇಷನ್ ಅಧ್ಯಕ್ಷ ಕೆ.ಎಂ.ಸುರೇಶ್ ಅಧ್ಯಕ್ಷತೆ ವಹಿಸಿದ್ದರು. ಚಿತ್ರನಟ ಪುನೀತ್ ರಾಜ್ಕುಮಾರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.</p>.<p>ವೇದಿಕೆ ಮೇಲೆ ಪಾಲಿಕೆ ಸದಸ್ಯ ಕೆ.ಎಂ.ವೀರೇಶ್ ಪೈಲ್ವಾನ್,ಶಾಂತಕುಮಾರ ಸೋಗಿ,ಜಯಮ್ಮ,ಗೋಣೆಪ್ಪ,ವೀಣಾ ನಂಜಪ್ಪ,ಗೌರಮ್ಮ ಗಿರೀಶ್, ಬಿಜೆಪಿ ಮುಖಂಡರಾದ ಎಂ.ಆನಂದ್,ಶ್ರೀನಿವಾಸ್,ಮುರುಗೇಶಪ್ಪ,ಆನಂದ್,ಶಿವಕುಮಾರ್ ದಾಸಕರಿಯಪ್ಪ,ಎಲ್.ಎಂ.ಕಲ್ಲೇಶ್,ಗಣೇಶ್ ರಾವ್,ಸುರೇಶ್ ಗಂಡಗಾಳೆ ಅವರೂ ಇದ್ದರು. ಎಚ್.ಬಸವರಾಜ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವವರು ದೇಹವನ್ನು ಅತಿಯಾಗಿ ಬಳಲಿಸಬಾರದು. ಆರೋಗ್ಯ ಕಾಯ್ದುಕೊಳ್ಳಬೇಕು ಎಂದು ಶಾಸಕ ಎಸ್.ಎ.ರವೀಂದ್ರನಾಥ್ ಸಲಹೆ ನೀಡಿದರು.</p>.<p>ರಾಜ್ಯ ವೇಟ್ ಲಿಫ್ಟರ್ಸ್ ಅಸೋಸಿಯೇಷನ್, ಜಿಲ್ಲಾ ವೇಟ್ ಲಿಫ್ಟಿಂಗ್ ಅಸೋಸಿಯೇಷನ್ ಹಾಗೂ ನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ನಗರದ ಗುಂಡಿ ಮಹದೇವಪ್ಪ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿರುವ ರಾಜ್ಯಮಟ್ಟದ ವೇಟ್ ಲಿಫ್ಟಿಂಗ್ ಸ್ಪರ್ಧೆಯನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ದೇಹದಲ್ಲಿ ನಿಶ್ಯಕ್ತಿ ಕಾಣಿಸಿಕೊಂಡ ನಂತರವೂ ಗೆಲ್ಲಬೇಕೆಂಬ ಹಠದಿಂದ ವೇಟ್ ಲಿಫ್ಟಿಂಗ್ನಲ್ಲಿ ತೊಡಗಬಾರದು. ನಟ ಪುನೀತ್ ರಾಜ್ಕುಮಾರ್ ಅವರಿಗೆ ಆದ ಪರಿಸ್ಥಿತಿಯನ್ನು ಕ್ರೀಡಾಪಟುಗಳು ತಂದುಕೊಳ್ಳಬಾರದು ಎಂದು ಕಿವಿಮಾತು ಹೇಳಿದರು.</p>.<p>ರಕ್ತದೊತ್ತಡ,ಸಕ್ಕರೆ ಮಟ್ಟ ಹಾಗೂ ಹೃದಯದ ಆರೋಗ್ಯದ ಬಗ್ಗೆ ನಿಯಮಿತವಾಗಿ ತಪಾಸಣೆಗೆ ಮಾಡಿದರು.</p>.<p>ಮೇಯರ್ ಎಸ್.ಟಿ.ವೀರೇಶ್, ‘ಕೊವಿಡ್ ಎರಡನೇ ಅಲೆಯಲ್ಲಿ ಸ್ತಬ್ಧವಾಗಿದ್ದ ಕ್ರೀಡಾ ವಲಯ ಈಗ ಮತ್ತೆ ಚಟುವಟಿಕೆಯಿಂದ ಕೂಡಿದೆ.ವೇಟ್ ಲಿಫ್ಟಿಂಗ್ಗೆ ಪಾಲಿಕೆ ವತಿಯಿಂದ ₹ 2ಲಕ್ಷ ನೀಡಲಾಗಿದೆ.ಶೀಘ್ರದಲ್ಲೇ ಮಹಿಳೆಯರಿಗಾಗಿ ಪಾಲಿಕೆಯಿಂದ ಪ್ರತ್ಯೇಕ ಜಿಮ್ ತೆರೆಯಲಾಗುವುದು’ ಎಂದು ತಿಳಿಸಿದರು</p>.<p>ಭಾರತೀಯ ವೇಟ್ ಲಿಫ್ಟಿಂಗ್ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಎಸ್.ಎಚ್.ಆನಂದ ಗೌಡ, ‘ಈ ಕ್ರೀಡಾಕೂಟದಲ್ಲಿ 260ಕ್ಕೂ ಹೆಚ್ಚು ಕ್ರೀಡಾಪಟುಗಳು ಪಾಲ್ಗೊಂಡಿದ್ದಾರೆ. ಪ್ರತಿಭೆಗಳನ್ನು ಆರಂಭದಲ್ಲೇ ಗುರುತಿಸಿ ಪ್ರೋತ್ಸಾಹ – ತರಬೇತಿ ನೀಡಲು ಇಂತಹ ಕ್ರೀಡಾಕೂಟಗಳು ನೆರವಾಗುತ್ತವೆ.ದಾವಣಗೆರೆಯಲ್ಲಿ ವೇಟ್ ಲಿಫ್ಟಿಂಗ್ಗೆ ನೆರವಾಗಲು ಸೌಲಭ್ಯಗಳನ್ನು ಕಲ್ಪಿಸಲಾಗುವುದು’ ಎಂದು ಭರವಸೆ ನೀಡಿದರು.</p>.<p>ಪಾಲಿಕೆ ಸದಸ್ಯ ಚಮನ್ ಸಾಬ್ ಹಾಗೂ ಬಿಜೆಪಿ ಮುಖಂಡ ಅನಿತ್ ಸಿದ್ದೇಶ್ವರ ಮಾತನಾಡಿದರು. ಜಿಲ್ಲಾ ವೇಟ್ ಲಿಫ್ಟಿಂಗ್ ಅಸೋಸಿಯೇಷನ್ ಅಧ್ಯಕ್ಷ ಕೆ.ಎಂ.ಸುರೇಶ್ ಅಧ್ಯಕ್ಷತೆ ವಹಿಸಿದ್ದರು. ಚಿತ್ರನಟ ಪುನೀತ್ ರಾಜ್ಕುಮಾರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.</p>.<p>ವೇದಿಕೆ ಮೇಲೆ ಪಾಲಿಕೆ ಸದಸ್ಯ ಕೆ.ಎಂ.ವೀರೇಶ್ ಪೈಲ್ವಾನ್,ಶಾಂತಕುಮಾರ ಸೋಗಿ,ಜಯಮ್ಮ,ಗೋಣೆಪ್ಪ,ವೀಣಾ ನಂಜಪ್ಪ,ಗೌರಮ್ಮ ಗಿರೀಶ್, ಬಿಜೆಪಿ ಮುಖಂಡರಾದ ಎಂ.ಆನಂದ್,ಶ್ರೀನಿವಾಸ್,ಮುರುಗೇಶಪ್ಪ,ಆನಂದ್,ಶಿವಕುಮಾರ್ ದಾಸಕರಿಯಪ್ಪ,ಎಲ್.ಎಂ.ಕಲ್ಲೇಶ್,ಗಣೇಶ್ ರಾವ್,ಸುರೇಶ್ ಗಂಡಗಾಳೆ ಅವರೂ ಇದ್ದರು. ಎಚ್.ಬಸವರಾಜ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>