ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೊಡ್ಡಬಳ್ಳಾಪುರ ನಗರಸಭೆ ಜೆಡಿಎಸ್ ಬೆಂಬಲ ಖಚಿತ: ಸಚಿವ ಆರ್.ಅಶೋಕ್ ಹೇಳಿಕೆ

Last Updated 19 ಸೆಪ್ಟೆಂಬರ್ 2021, 4:59 IST
ಅಕ್ಷರ ಗಾತ್ರ

ದಾವಣಗೆರೆ: ಕಲ್ಬುರ್ಗಿ ಮಹಾ ನಗರಪಾಲಿಕೆ ಮೇಯರ್ ಹಾಗೂ ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷರ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಜೊತೆ ಮಾತು ಕತೆ ನಡೆಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

ದಾವಣಗೆರೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ‘ದೊಡ್ಡಬಳ್ಳಾಪುರ ನಗರಸಭೆಗೆ ಜೆಡಿಎಸ್ ಬೆಂಬಲ ಪಕ್ಕಾ ಆಗಿದೆ. ಕಲ್ಬುರ್ಗಿಯಲ್ಲಿ ಬೆಂಬಲ ನೀಡುವ ಸಂಬಂಧ ಸೋಮವಾರ ಇನ್ನೊಮ್ಮೆ ಚರ್ಚೆ ಮಾಡುತ್ತೇನೆ. ಜನಬೆಂಬಲ ಬಿಜೆಪಿಗೆ ಇರುವುದರಿಂದ ಜೆಡಿಎಸ್‌ ಬೆಂಬಲ ನೀಡುವ ವಿಶ್ವಾಸವಿದೆ. ಮೇಯರ್ ಸ್ಥಾನ ಯಾರಿಗೆ ಎಂಬುದರ ಬಗ್ಗೆ ಚರ್ಚೆ ಆಗಿಲ್ಲ’ ಎಂದು ಹೇಳಿದರು.

‘ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಸುವ ಸಂಬಂಧ ಮಸೂದೆ ಪಾಸ್ ಆಗಿದೆ. ಆಗುಹೋಗು ನೋಡಿಕೊಂಡು ಚುನಾವಣೆ ನಡೆಸುತ್ತೇವೆ’ ಎಂದು‍ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಇದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಪಸ್ಥಿತಿಯಲ್ಲಿ ನಡೆಯುವ ಮೊದಲ ಕಾರ್ಯಕಾರಿಣಿ. ಹೊಸ ರೂಪ, ಹೊಸ ವರ್ಚಸ್ಸು ಇದೆ. ಬೊಮ್ಮಾಯಿ ಹಾಗೂ ಪಕ್ಷವನ್ನು ಬೆಳೆಸುವ ದೃಷ್ಟಿಯಿಂದ ಈ ಕಾರ್ಯಕಾರಿಣಿ ವಿಶೇಷತೆ ಹೊಂದಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT