<p><strong>ದಾವಣಗೆರೆ:</strong> ಮಳೆಯಿಂದ ಮನೆಹಾನಿ, ನೀರು ನುಗ್ಗಿರುವುದು ಮುಂತಾದ ತೊಂದರೆಗಳು ಉಂಟಾದಾಗ ಅಧಿಕಾರಿಗಳು ಕೂಡಲೇ ಸ್ಪಂದಿಸಬೇಕು. ಸರ್ಕಾರ ಅನುದಾನ ಒದಗಿಸಿರುವುದರಿಂದ ತಕ್ಷಣ ಪರಿಹಾರವನ್ನು ವಿತರಿಸಬೇಕು. ನೀವು ಪರಿಹಾರ ನೀಡದೇ ಸರ್ಕಾರಕ್ಕೆ ಕೆಟ್ಟ ಹೆಸರು ತರಬೇಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ತಿಳಿಸಿದರು.</p>.<p>ಮಳೆಹಾನಿ ಕುರಿತಂತೆ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಆಗಸ್ಟ್ 15ರ ಒಳಗೆ ಎಲ್ಲರಿಗೂ ಪರಿಹಾರ ವಿತರಿಸಿ ಆಗಬೇಕು. ಯಾವುದೇ ಸಬೂಬು ಹೇಳಬಾರದು ಎಂದು ಎಚ್ಚರಿಸಿದರು.</p>.<p>ಆಗಸ್ಟ್ 8ರ ವರೆಗೆ ವಾಡಿಕೆ ಮಳೆಗಿಂತ ಶೇ 106 ರಷ್ಟು ಅಧಿಕ ಮಳೆಯಾಗಿದೆ. ಚನ್ನಗಿರಿ ತಾಲ್ಲೂಕಿನಲ್ಲಿ 381, ದಾವಣಗೆರೆ 175, ಹರಿಹರ 173, ಹೊನ್ನಾಳಿ 216, ಜಗಳೂರು 161 ಹಾಗೂ ನ್ಯಾಮತಿಯಲ್ಲಿ 205 ಮನೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.</p>.<p>ಮುಂಗಾರು ಪೂರ್ವ ಮಳೆಯಲ್ಲಿ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳು ಸೇರಿ 4813.90 ಹೆಕ್ಟೇರ್ ಹಾನಿಯಾಗಿದ್ದವು. ₹ 6.11 ಕೋಟಿ ಪರಿಹಾರವನ್ನು 11,032 ರೈತರಿಗೆ ನೀಡಲಾಗಿದೆ. ಜುಲೈ, ಆಗಸ್ಟ್ನಲ್ಲಿ 12,108.74 ಹೆಕ್ಟೇರ್ ಹಾನಿಯಾಗಿದೆ ಎಂದು ವಿವರಿಸಿದರು.</p>.<p>ಸಾರ್ವಜನಿಕ ಶಿಕ್ಷಣ ಇಲಾಖೆಯ 126 ಕೊಠಡಿಗಳಿಗೆ ಹಾನಿಯಾಗಿದೆ. ಅದರ ದುರಸ್ತಿಗೆ ಶಿಫಾರಸ್ಸು ಮಾಡಲಾಗಿದೆ. ಈ ವರ್ಷ ಹೊಸದಾಗಿ 140 ಕೊಠಡಿಗಳ ನಿರ್ಮಾಣಕ್ಕೆ ಸರ್ಕಾರದಿಂದ ಮಂಜೂರಾತಿ ನೀಡಲಾಗಿದೆ ಎಂದು ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಮಾಹಿತಿ ನೀಡಿದರು.</p>.<p>ಕಚೇರಿಯಲ್ಲಿ ಕುಳಿತು ಅಂದಾಜು ಮಾಡದೇ ಜಿಲ್ಲೆಯಲ್ಲಿ ಪ್ರವಾಸ ಮಾಡಿ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಸಚಿವರಿ ಸೂಚನೆ ನೀಡಿದರು.</p>.<p>ಬೆಸ್ಕಾಂ, ಮೀನುಗಾರಿಕೆ ಸಹಿತ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಗೆ ಬಾರದೆ ಇರುವುದನ್ನು ಕಂಡು ಬೇಸರಗೊಂಡ ಸಚಿವರು, ‘ಗೈರಾದವರಿಗೆ ನೋಟಿಸ್ ನೀಡಿ’ ಎಂದು ಜಿಲ್ಲಾಧಿಕಾರಿಗೆ ತಿಳಿಸಿದರು.</p>.<p>ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 13ರಿಂದ 15ರ ವರೆಗೆ ಪ್ರತಿ ಮನೆಯಲ್ಲಿಯು ರಾಷ್ಟ್ರಧ್ವಜವನ್ನು ಹಾರಿಸಲಾಗುತ್ತದೆ. ಈ ವೇಳೆ ಧ್ವಜ ಸಂಹಿತೆಯಂತೆ ಹಾರಿಸಲು ಮತ್ತು ಇಳಿಸಿಲು ಕ್ರಮ ಕೈಗೊಳ್ಳಬೇಕು. ಎಲ್ಲೂ ಅಪವಾದ ಬಾರದಂತೆ ನಿಯಮ ಪಾಲಿಸಬೇಕು ಎಂದು ಎಚ್ಚರಿಕೆ ನೀಡಿದರು.</p>.<p>ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಹೆಚ್ಚುವರಿ ಜಿಲ್ಲಾಧಿಕಾರಿ ಲೋಕೇಶ್, ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಆರ್.ಬಿ. ಬಸರಗಿ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಮಳೆಯಿಂದ ಮನೆಹಾನಿ, ನೀರು ನುಗ್ಗಿರುವುದು ಮುಂತಾದ ತೊಂದರೆಗಳು ಉಂಟಾದಾಗ ಅಧಿಕಾರಿಗಳು ಕೂಡಲೇ ಸ್ಪಂದಿಸಬೇಕು. ಸರ್ಕಾರ ಅನುದಾನ ಒದಗಿಸಿರುವುದರಿಂದ ತಕ್ಷಣ ಪರಿಹಾರವನ್ನು ವಿತರಿಸಬೇಕು. ನೀವು ಪರಿಹಾರ ನೀಡದೇ ಸರ್ಕಾರಕ್ಕೆ ಕೆಟ್ಟ ಹೆಸರು ತರಬೇಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ತಿಳಿಸಿದರು.</p>.<p>ಮಳೆಹಾನಿ ಕುರಿತಂತೆ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಆಗಸ್ಟ್ 15ರ ಒಳಗೆ ಎಲ್ಲರಿಗೂ ಪರಿಹಾರ ವಿತರಿಸಿ ಆಗಬೇಕು. ಯಾವುದೇ ಸಬೂಬು ಹೇಳಬಾರದು ಎಂದು ಎಚ್ಚರಿಸಿದರು.</p>.<p>ಆಗಸ್ಟ್ 8ರ ವರೆಗೆ ವಾಡಿಕೆ ಮಳೆಗಿಂತ ಶೇ 106 ರಷ್ಟು ಅಧಿಕ ಮಳೆಯಾಗಿದೆ. ಚನ್ನಗಿರಿ ತಾಲ್ಲೂಕಿನಲ್ಲಿ 381, ದಾವಣಗೆರೆ 175, ಹರಿಹರ 173, ಹೊನ್ನಾಳಿ 216, ಜಗಳೂರು 161 ಹಾಗೂ ನ್ಯಾಮತಿಯಲ್ಲಿ 205 ಮನೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.</p>.<p>ಮುಂಗಾರು ಪೂರ್ವ ಮಳೆಯಲ್ಲಿ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳು ಸೇರಿ 4813.90 ಹೆಕ್ಟೇರ್ ಹಾನಿಯಾಗಿದ್ದವು. ₹ 6.11 ಕೋಟಿ ಪರಿಹಾರವನ್ನು 11,032 ರೈತರಿಗೆ ನೀಡಲಾಗಿದೆ. ಜುಲೈ, ಆಗಸ್ಟ್ನಲ್ಲಿ 12,108.74 ಹೆಕ್ಟೇರ್ ಹಾನಿಯಾಗಿದೆ ಎಂದು ವಿವರಿಸಿದರು.</p>.<p>ಸಾರ್ವಜನಿಕ ಶಿಕ್ಷಣ ಇಲಾಖೆಯ 126 ಕೊಠಡಿಗಳಿಗೆ ಹಾನಿಯಾಗಿದೆ. ಅದರ ದುರಸ್ತಿಗೆ ಶಿಫಾರಸ್ಸು ಮಾಡಲಾಗಿದೆ. ಈ ವರ್ಷ ಹೊಸದಾಗಿ 140 ಕೊಠಡಿಗಳ ನಿರ್ಮಾಣಕ್ಕೆ ಸರ್ಕಾರದಿಂದ ಮಂಜೂರಾತಿ ನೀಡಲಾಗಿದೆ ಎಂದು ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಮಾಹಿತಿ ನೀಡಿದರು.</p>.<p>ಕಚೇರಿಯಲ್ಲಿ ಕುಳಿತು ಅಂದಾಜು ಮಾಡದೇ ಜಿಲ್ಲೆಯಲ್ಲಿ ಪ್ರವಾಸ ಮಾಡಿ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಸಚಿವರಿ ಸೂಚನೆ ನೀಡಿದರು.</p>.<p>ಬೆಸ್ಕಾಂ, ಮೀನುಗಾರಿಕೆ ಸಹಿತ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಗೆ ಬಾರದೆ ಇರುವುದನ್ನು ಕಂಡು ಬೇಸರಗೊಂಡ ಸಚಿವರು, ‘ಗೈರಾದವರಿಗೆ ನೋಟಿಸ್ ನೀಡಿ’ ಎಂದು ಜಿಲ್ಲಾಧಿಕಾರಿಗೆ ತಿಳಿಸಿದರು.</p>.<p>ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 13ರಿಂದ 15ರ ವರೆಗೆ ಪ್ರತಿ ಮನೆಯಲ್ಲಿಯು ರಾಷ್ಟ್ರಧ್ವಜವನ್ನು ಹಾರಿಸಲಾಗುತ್ತದೆ. ಈ ವೇಳೆ ಧ್ವಜ ಸಂಹಿತೆಯಂತೆ ಹಾರಿಸಲು ಮತ್ತು ಇಳಿಸಿಲು ಕ್ರಮ ಕೈಗೊಳ್ಳಬೇಕು. ಎಲ್ಲೂ ಅಪವಾದ ಬಾರದಂತೆ ನಿಯಮ ಪಾಲಿಸಬೇಕು ಎಂದು ಎಚ್ಚರಿಕೆ ನೀಡಿದರು.</p>.<p>ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಹೆಚ್ಚುವರಿ ಜಿಲ್ಲಾಧಿಕಾರಿ ಲೋಕೇಶ್, ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಆರ್.ಬಿ. ಬಸರಗಿ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>