<p><strong>ದಾವಣಗೆರೆ:</strong>ಹಿಂದೂಗಳ ಅಂಗಡಿಗಳಲ್ಲಿ ಮುಸ್ಲಿಮರು ಬಟ್ಟೆಗಳನ್ನು ಖರೀದಿ ಮಾಡಬಾರದು ಎಂದು ಮಸೀದಿಯಲ್ಲಿ ಆದೇಶಿಸಲಾಗಿದೆ ಎಂಬುದು ಸತ್ಯಕ್ಕೆ ದೂರವಾದ ಸಂಗತಿ. ಯಾವ ಮಸೀದಿಯಲ್ಲೂ ಈ ರೀತಿ ಆದೇಶ ಮಾಡಿಲ್ಲ ಎಂದು ಮುಸ್ಲಿಂ ಸಮಾಜದ ಮುಖಂಡರು ಸ್ಪಷ್ಟಪಡಿಸಿದ್ದಾರೆ.</p>.<p>‘ಯುಗಾದಿ, ಬಸವ ಜಯಂತಿ, ಗುಡ್ಫ್ರೈಡೆ, ಮಹಾವೀರ ಜಯಂತಿ ಹಬ್ಬಗಳನ್ನು ಎಲ್ಲರೂ ಸರಳವಾಗಿ ಆಚರಿಸಿದ್ದು, ನಾವೂ ರಂಜಾನ್ ಹಬ್ಬವನ್ನು ಯಾವುದೇ ವಸ್ತುಗಳನ್ನು ಖರೀದಿಸದೆ ಸರಳವಾಗಿ ಆಚರಿಸಬೇಕು ಎಂದು ಮಾತ್ರ ಕರೆ ನೀಡಿದ್ದೇವೆ’ ಎಂದು ಅಂಜುಮನ್ ಸಮಿತಿ ಮಾಜಿ ಅಧ್ಯಕ್ಷ ಸೈಯದ್ ಸೈಫುಲ್ಲಾ ಹೇಳಿದರು.</p>.<p>‘ತಿಂಗಳುಗಟ್ಟಲೆ ಲಾಕ್ಡೌನ್ ಸಮಯದಲ್ಲಿ ಸಂಕಷ್ಟದಲ್ಲಿರುವ ಹಿಂದೂ-ಮುಸ್ಲಿಂ ಬಾಂಧವರಿಗೆ ದಾವಣಗೆರೆಯ ಮುಸ್ಲಿಂ ಸಮುದಾಯದವರು ಸತತವಾಗಿ ಅಗತ್ಯ ವಸ್ತುಗಳನ್ನು ಪೂರೈಸುತ್ತಾ ಕಷ್ಟಗಳಿಗೆ ಸ್ಪಂದಿಸುತ್ತಾ ಬಾಂಧವ್ಯ ಕಾಪಾಡಿಕೊಂಡು ಬಂದಿದ್ದಾರೆ’ ಎಂದು ಅಂಜುಮನ್ ಮಾಜಿ ಕಾರ್ಯದರ್ಶಿ ರಜ್ವಿ ಖಾನ್ ಹೇಳಿದರು.</p>.<p>‘ಈಗಾಗಲೇ ಕೊರೊನಾ ವೇಳೆ ಸಮಾಜ ಅನೇಕ ಸುದ್ದಿಗಳಿಂದ ಅಪ ಪ್ರಚಾರಗಳಿಂದ ನೋವುಂಡಿದೆ. ಇಂತಹ ವೇಳೆ ಮತ್ತೆ ಕೆಲವರು ಈ ರೀತಿ ಸುಳ್ಳು ಸುದ್ದಿ ಹಬ್ಬಿಸುತ್ತಿರುವುದು ಖಂಡನೀಯ’ ಎಂದು ಮಾಜಿ ಸದಸ್ಯ ಅನೀಸ್ಪಾಷಾ ಹೇಳಿದರು.</p>.<p>‘ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಈ ರೀತಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಇತ್ತೀಚೆಗೆ ಕೆಲ ಮಾಧ್ಯಮಗಳಲ್ಲೂ ಇಂತಹ ವರದಿಗಳಾಗಿವೆ. ಯಾವುದೇ ವಿಷಯವನ್ನು ಕೂಲಂಕಷವಾಗಿ ಚರ್ಚಿಸದೆ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಾನೂನು ಹೋರಾಟವನ್ನೂ ನಡೆಸುವುದಾಗಿ ಅವರು ಎಚ್ಚರಿಸಿದ್ದಾರೆ.</p>.<p>ವಕ್ಫ್ ಬೋರ್ಡ್ ಅಧ್ಯಕ್ಷ ಸಿರಾಜ್, ಪಾಲಿಕೆ ಸದಸ್ಯರಾದ ಸೈಯದ್ ಚಾರ್ಲಿ, ಕಬೀರ್ ಖಾನ್, ಮುಸ್ಲಿಂ ಹಾಸ್ಟೆಲ್ ಅಧ್ಯಕ್ಷ ಭಾಷಾ, ರಿಯಾಜ್, ಕೋಳಿ ಇಬ್ರಾಹಿಂ, ಖಾಸಿ ಸಾಬ್ ಪತ್ರಿಕಾಗೋಷ್ಠಿಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong>ಹಿಂದೂಗಳ ಅಂಗಡಿಗಳಲ್ಲಿ ಮುಸ್ಲಿಮರು ಬಟ್ಟೆಗಳನ್ನು ಖರೀದಿ ಮಾಡಬಾರದು ಎಂದು ಮಸೀದಿಯಲ್ಲಿ ಆದೇಶಿಸಲಾಗಿದೆ ಎಂಬುದು ಸತ್ಯಕ್ಕೆ ದೂರವಾದ ಸಂಗತಿ. ಯಾವ ಮಸೀದಿಯಲ್ಲೂ ಈ ರೀತಿ ಆದೇಶ ಮಾಡಿಲ್ಲ ಎಂದು ಮುಸ್ಲಿಂ ಸಮಾಜದ ಮುಖಂಡರು ಸ್ಪಷ್ಟಪಡಿಸಿದ್ದಾರೆ.</p>.<p>‘ಯುಗಾದಿ, ಬಸವ ಜಯಂತಿ, ಗುಡ್ಫ್ರೈಡೆ, ಮಹಾವೀರ ಜಯಂತಿ ಹಬ್ಬಗಳನ್ನು ಎಲ್ಲರೂ ಸರಳವಾಗಿ ಆಚರಿಸಿದ್ದು, ನಾವೂ ರಂಜಾನ್ ಹಬ್ಬವನ್ನು ಯಾವುದೇ ವಸ್ತುಗಳನ್ನು ಖರೀದಿಸದೆ ಸರಳವಾಗಿ ಆಚರಿಸಬೇಕು ಎಂದು ಮಾತ್ರ ಕರೆ ನೀಡಿದ್ದೇವೆ’ ಎಂದು ಅಂಜುಮನ್ ಸಮಿತಿ ಮಾಜಿ ಅಧ್ಯಕ್ಷ ಸೈಯದ್ ಸೈಫುಲ್ಲಾ ಹೇಳಿದರು.</p>.<p>‘ತಿಂಗಳುಗಟ್ಟಲೆ ಲಾಕ್ಡೌನ್ ಸಮಯದಲ್ಲಿ ಸಂಕಷ್ಟದಲ್ಲಿರುವ ಹಿಂದೂ-ಮುಸ್ಲಿಂ ಬಾಂಧವರಿಗೆ ದಾವಣಗೆರೆಯ ಮುಸ್ಲಿಂ ಸಮುದಾಯದವರು ಸತತವಾಗಿ ಅಗತ್ಯ ವಸ್ತುಗಳನ್ನು ಪೂರೈಸುತ್ತಾ ಕಷ್ಟಗಳಿಗೆ ಸ್ಪಂದಿಸುತ್ತಾ ಬಾಂಧವ್ಯ ಕಾಪಾಡಿಕೊಂಡು ಬಂದಿದ್ದಾರೆ’ ಎಂದು ಅಂಜುಮನ್ ಮಾಜಿ ಕಾರ್ಯದರ್ಶಿ ರಜ್ವಿ ಖಾನ್ ಹೇಳಿದರು.</p>.<p>‘ಈಗಾಗಲೇ ಕೊರೊನಾ ವೇಳೆ ಸಮಾಜ ಅನೇಕ ಸುದ್ದಿಗಳಿಂದ ಅಪ ಪ್ರಚಾರಗಳಿಂದ ನೋವುಂಡಿದೆ. ಇಂತಹ ವೇಳೆ ಮತ್ತೆ ಕೆಲವರು ಈ ರೀತಿ ಸುಳ್ಳು ಸುದ್ದಿ ಹಬ್ಬಿಸುತ್ತಿರುವುದು ಖಂಡನೀಯ’ ಎಂದು ಮಾಜಿ ಸದಸ್ಯ ಅನೀಸ್ಪಾಷಾ ಹೇಳಿದರು.</p>.<p>‘ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಈ ರೀತಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಇತ್ತೀಚೆಗೆ ಕೆಲ ಮಾಧ್ಯಮಗಳಲ್ಲೂ ಇಂತಹ ವರದಿಗಳಾಗಿವೆ. ಯಾವುದೇ ವಿಷಯವನ್ನು ಕೂಲಂಕಷವಾಗಿ ಚರ್ಚಿಸದೆ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಾನೂನು ಹೋರಾಟವನ್ನೂ ನಡೆಸುವುದಾಗಿ ಅವರು ಎಚ್ಚರಿಸಿದ್ದಾರೆ.</p>.<p>ವಕ್ಫ್ ಬೋರ್ಡ್ ಅಧ್ಯಕ್ಷ ಸಿರಾಜ್, ಪಾಲಿಕೆ ಸದಸ್ಯರಾದ ಸೈಯದ್ ಚಾರ್ಲಿ, ಕಬೀರ್ ಖಾನ್, ಮುಸ್ಲಿಂ ಹಾಸ್ಟೆಲ್ ಅಧ್ಯಕ್ಷ ಭಾಷಾ, ರಿಯಾಜ್, ಕೋಳಿ ಇಬ್ರಾಹಿಂ, ಖಾಸಿ ಸಾಬ್ ಪತ್ರಿಕಾಗೋಷ್ಠಿಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>