‘ಎನ್ಡಿಎ’, ‘ಇಂಡಿಯಾ’ ಮೈತ್ರಿ ಕೂಟಗಳು ಅಬ್ಬರದ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದು, ಇವರು ಯಾರೂ ದೇಶದ ಜನರ ಬದುಕಿನ ಸಮಸ್ಯೆಗಳ ಕುರಿತು ಮಾತನಾಡುತ್ತಿಲ್ಲ. ಅಧಿಕಾರಕ್ಕಾಗಿ ಚುನಾವಣೆ ನಡೆಸುತ್ತಿದ್ದಾರೆ. ಬಿಜೆಪಿ ಸೋಲಿಸಲು ಕಾಂಗ್ರೆಸ್ ನೇತೃತ್ವದಲ್ಲಿ ಇಂಡಿಯಾ ಒಕ್ಕೂಟ ರಚನೆಯಾಗಿದ್ದು, ಎಡ ಪಕ್ಷಗಳಾದ ಸಿಪಿಐ, ಸಿಪಿಐಎಂ ಕೂಡ ಈ ಒಕ್ಕೂಟ ಸೇರಿವೆ. ಆದರೆ, ಬಹುಕಾಲ ದೇಶವನ್ನಾಳಿದ ಕಾಂಗ್ರೆಸ್ ತುರ್ತು ಪರಿಸ್ಥಿತಿ ಹೇರುವ ಮೂಲಕ ಜನರ ಪ್ರಜಾತಾಂತ್ರಿಕ ಹಕ್ಕುಗಳನ್ನು ಕಸಿದಿದೆ. ಅಂದಿನ ಕಾಂಗ್ರೆಸ್ಸಿನ ನೀತಿಗಳನ್ನೇ ಇಂದು ಬಿಜೆಪಿಯು ಮುಂದುವರಿಸುತ್ತಿದೆ’ ಎಂದು ಆರೋಪಿಸಿದರು.