<p><strong>ಸಂತೇಬೆನ್ನೂರು</strong>: ಸಮೀಪದ ಸೋಮಲಾಪುರ ಗ್ರಾಮದಲ್ಲಿ ಶುಕ್ರವಾರ ವಿವಾಹಿತ ಮಹಿಳೆ ಅಂತ್ಯಕ್ರಿಯೆ ನಡೆಸಲು ಬಿಡದೆ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. </p>.<p>ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ನಿಯಂತ್ರಿಸಿ ಮನವೊಲಿಸಿದ ನಂತರ ಅಂತ್ಯಕ್ರಿಯೆ ನಡೆದಿದೆ.</p>.<p>ಘಟನೆ ವಿವರ: ಸೋಮಲಾಪುರ ಗ್ರಾಮದ ಶಿವು ಹಾಗೂ ದಾವಣಗೆರೆ ತಾಲ್ಲೂಕು ಅಣಜಿ ಗ್ರಾಮದ ವಿದ್ಯಾ ಅವರ ವಿವಾಹವು 6 ತಿಂಗಳ ಹಿಂದೆ ನಡೆದಿತ್ತು. ಶಿವು ಬೆಂಗಳೂರಿನಲ್ಲಿ ಪೊಲೀಸ್ ವೃತ್ತಿಯಲ್ಲಿದ್ದರು. ಜೂನ್ 30 ರಂದು ಪತ್ನಿ ವಿದ್ಯಾ ಕಾಣೆಯಾಗಿರುವ ಬಗ್ಗೆ ಬೆಂಗಳೂರಿನ ಶಂಕರಪುರಂ ಪೊಲೀಸ್ ಠಾಣೆಯಲ್ಲಿ ಶಿವು ದೂರು ದಾಖಲಿಸಿದ್ದರು. </p>.<p>ಅಂದೇ ಅರಸೀಕೆರೆ ರೈಲ್ವೇ ಹಳಿಯ ಮೇಲೆ ತೀವ್ರ ಗಾಯಗೊಂಡು ಬಿದ್ದಿದ್ದ ವಿದ್ಯಾ ಅವರು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟಿದ್ದರು. </p>.<p>‘ಇದು ಅಸಹಜ ಸಾವು. ಶಿವು ಹಾಗೂ ಅವರ ಕುಟುಂಬದವರು ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಮಾಡಿದ್ದಾರೆ’ ಎಂದು ಮೃತಳ ಪೋಷಕರು ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪತಿಯ ಸ್ವಗ್ರಾಮ ಸೋಮಲಾಪುರಕ್ಕೆ ವಿದ್ಯಾ ಅವರ ಶವವನ್ನು ಅಂತ್ಯಕ್ರಿಯೆಗೆ ತರಲಾಗಿತ್ತು.</p>.<p>ಅಣಜಿ ಗ್ರಾಮದಿಂದ ಬಂದಿದ್ದ ಮೃತಳ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಅಂತ್ಯಕ್ರಿಯೆ ನಡೆಸದಂತೆ ತಡೆದು ವಿದ್ಯಾಳ ಸಾವಿಗೆ ನ್ಯಾಯ ಕೊಡಿಸುವಂತೆ ಪ್ರತಿಭಟನೆ ನಡೆಸಿದರು. </p>.<p>ಆರೋಪಿ ಶಿವು ಹಾಗೂ ಕುಟುಂಬದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪರಿಸ್ಥಿತಿ ಅರಿತ ಸಂತೇಬೆನ್ನೂರು ಎಸ್ಐ ಜಗದೀಶ್ ಈಗಾಗಲೇ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮನವೊಲಿಸಿದರು. ಅಂತ್ಯಕ್ರಿಯೆ ನಡೆಸಲು ಅನುವು ಮಾಡಿಕೊಟ್ಟರು. </p>.<p>ಸಂತೇಬೆನ್ನೂರು ಹಾಗೂ ಬಸವಾಪಟ್ಟಣ ಪೊಲೀಸ್ ಸಿಬ್ಬಂದಿ ಬಿಗಿ ಬಂದೋಬಸ್ತ್ ಕಲ್ಪಿಸಿದ್ದರು. ಬಸವಾಪಟ್ಟಣ ಎಸ್ಐ ಇಮ್ತಿಯಾಜ್, ಕ್ರೈಂ ಎಸ್ಐಗಳಾದ ಚನ್ನವೀರಪ್ಪ, ರೂಪ್ಲಿಬಾಯಿ, ಭಾರತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂತೇಬೆನ್ನೂರು</strong>: ಸಮೀಪದ ಸೋಮಲಾಪುರ ಗ್ರಾಮದಲ್ಲಿ ಶುಕ್ರವಾರ ವಿವಾಹಿತ ಮಹಿಳೆ ಅಂತ್ಯಕ್ರಿಯೆ ನಡೆಸಲು ಬಿಡದೆ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. </p>.<p>ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ನಿಯಂತ್ರಿಸಿ ಮನವೊಲಿಸಿದ ನಂತರ ಅಂತ್ಯಕ್ರಿಯೆ ನಡೆದಿದೆ.</p>.<p>ಘಟನೆ ವಿವರ: ಸೋಮಲಾಪುರ ಗ್ರಾಮದ ಶಿವು ಹಾಗೂ ದಾವಣಗೆರೆ ತಾಲ್ಲೂಕು ಅಣಜಿ ಗ್ರಾಮದ ವಿದ್ಯಾ ಅವರ ವಿವಾಹವು 6 ತಿಂಗಳ ಹಿಂದೆ ನಡೆದಿತ್ತು. ಶಿವು ಬೆಂಗಳೂರಿನಲ್ಲಿ ಪೊಲೀಸ್ ವೃತ್ತಿಯಲ್ಲಿದ್ದರು. ಜೂನ್ 30 ರಂದು ಪತ್ನಿ ವಿದ್ಯಾ ಕಾಣೆಯಾಗಿರುವ ಬಗ್ಗೆ ಬೆಂಗಳೂರಿನ ಶಂಕರಪುರಂ ಪೊಲೀಸ್ ಠಾಣೆಯಲ್ಲಿ ಶಿವು ದೂರು ದಾಖಲಿಸಿದ್ದರು. </p>.<p>ಅಂದೇ ಅರಸೀಕೆರೆ ರೈಲ್ವೇ ಹಳಿಯ ಮೇಲೆ ತೀವ್ರ ಗಾಯಗೊಂಡು ಬಿದ್ದಿದ್ದ ವಿದ್ಯಾ ಅವರು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟಿದ್ದರು. </p>.<p>‘ಇದು ಅಸಹಜ ಸಾವು. ಶಿವು ಹಾಗೂ ಅವರ ಕುಟುಂಬದವರು ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಮಾಡಿದ್ದಾರೆ’ ಎಂದು ಮೃತಳ ಪೋಷಕರು ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪತಿಯ ಸ್ವಗ್ರಾಮ ಸೋಮಲಾಪುರಕ್ಕೆ ವಿದ್ಯಾ ಅವರ ಶವವನ್ನು ಅಂತ್ಯಕ್ರಿಯೆಗೆ ತರಲಾಗಿತ್ತು.</p>.<p>ಅಣಜಿ ಗ್ರಾಮದಿಂದ ಬಂದಿದ್ದ ಮೃತಳ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಅಂತ್ಯಕ್ರಿಯೆ ನಡೆಸದಂತೆ ತಡೆದು ವಿದ್ಯಾಳ ಸಾವಿಗೆ ನ್ಯಾಯ ಕೊಡಿಸುವಂತೆ ಪ್ರತಿಭಟನೆ ನಡೆಸಿದರು. </p>.<p>ಆರೋಪಿ ಶಿವು ಹಾಗೂ ಕುಟುಂಬದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪರಿಸ್ಥಿತಿ ಅರಿತ ಸಂತೇಬೆನ್ನೂರು ಎಸ್ಐ ಜಗದೀಶ್ ಈಗಾಗಲೇ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮನವೊಲಿಸಿದರು. ಅಂತ್ಯಕ್ರಿಯೆ ನಡೆಸಲು ಅನುವು ಮಾಡಿಕೊಟ್ಟರು. </p>.<p>ಸಂತೇಬೆನ್ನೂರು ಹಾಗೂ ಬಸವಾಪಟ್ಟಣ ಪೊಲೀಸ್ ಸಿಬ್ಬಂದಿ ಬಿಗಿ ಬಂದೋಬಸ್ತ್ ಕಲ್ಪಿಸಿದ್ದರು. ಬಸವಾಪಟ್ಟಣ ಎಸ್ಐ ಇಮ್ತಿಯಾಜ್, ಕ್ರೈಂ ಎಸ್ಐಗಳಾದ ಚನ್ನವೀರಪ್ಪ, ರೂಪ್ಲಿಬಾಯಿ, ಭಾರತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>