<p><strong>ಮಲೇಬೆನ್ನೂರು</strong>: ವರದಕ್ಷಿಣೆ ತರುವಂತೆ ಕಿರುಕುಳ ನೀಡಿ ಪತಿಯು ಪತ್ನಿಯನ್ನು ಕೊಲೆ ಮಾಡಿದ ಘಟನೆ ಸಮೀಪದ ಹರಳಹಳ್ಳಿ ಗ್ರಾಮದಲ್ಲಿ ಸೋಮವಾರ ತಡರಾತ್ರಿ ನಡೆದಿದೆ.</p>.<p>ಹಾಲಿವಾಣ ಗ್ರಾಮದ ನೇತ್ರಾವತಿ (26) ಕೊಲೆಯಾದ ಗೃಹಿಣಿ. 7 ವರ್ಷಗಳ ಹಿಂದೆ ಹರಳಹಳ್ಳಿ ಗ್ರಾಮದ ದೇವೇಂದ್ರಪ್ಪ ಅವರ ಜೊತೆ ಮದುವೆ ಆಗಿತ್ತು. ದಂಪತಿಗೆ ಪುತ್ರ ಹಾಗೂ ಪುತ್ರಿ ಇದ್ದಾರೆ.</p>.<p>ಕೌಟುಂಬಿಕ ಸಮಸ್ಯೆಯಿಂದ ಮನೆಯಲ್ಲಿ ನಿತ್ಯ ವಾಗ್ವಾದ, ಗಲಾಟೆ ನಡೆಯುತ್ತಿತ್ತು. ಸೋಮವಾರ ಗಲಾಟೆ ವಿಕೋಪಕ್ಕೆ ತಿರುಗಿ ಒಬ್ಬರ ಮೇಲೊಬ್ಬರು ಹಲ್ಲೆ ಮಾಡಿಕೊಂಡಿದ್ದರು. ಘಟನೆಯಿಂದ ಬೇಸತ್ತ ಪತಿ, ಪತ್ನಿಗೆ ಸೀರೆಯಿಂದ ಬಿಗಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.</p>.<p>ಘಟನೆಗೆ ಸಂಬಂಧಿಸಿ ಪತಿ ದೇವೇಂದ್ರಪ್ಪ, ಆತನ ತಾಯಿ ಗಂಗಮ್ಮ, ಅಣ್ಣ ಶಿವಪ್ಪ ಹಾಗೂ ಅವರ ಪತ್ನಿ ರೇಣುಕಮ್ಮ, ಸಹೋದರಿ ಶೈಲಾ ವಿರುದ್ಧ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು ಎಂದು ನೇತ್ರಾವತಿ ತವರು ಮನೆಯವರು ದೂರು ನೀಡಿದ್ದಾರೆ.</p>.<p>ಮಲೇಬೆನ್ನೂರು ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿ ಮಂಗಳವಾರ ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಲೇಬೆನ್ನೂರು</strong>: ವರದಕ್ಷಿಣೆ ತರುವಂತೆ ಕಿರುಕುಳ ನೀಡಿ ಪತಿಯು ಪತ್ನಿಯನ್ನು ಕೊಲೆ ಮಾಡಿದ ಘಟನೆ ಸಮೀಪದ ಹರಳಹಳ್ಳಿ ಗ್ರಾಮದಲ್ಲಿ ಸೋಮವಾರ ತಡರಾತ್ರಿ ನಡೆದಿದೆ.</p>.<p>ಹಾಲಿವಾಣ ಗ್ರಾಮದ ನೇತ್ರಾವತಿ (26) ಕೊಲೆಯಾದ ಗೃಹಿಣಿ. 7 ವರ್ಷಗಳ ಹಿಂದೆ ಹರಳಹಳ್ಳಿ ಗ್ರಾಮದ ದೇವೇಂದ್ರಪ್ಪ ಅವರ ಜೊತೆ ಮದುವೆ ಆಗಿತ್ತು. ದಂಪತಿಗೆ ಪುತ್ರ ಹಾಗೂ ಪುತ್ರಿ ಇದ್ದಾರೆ.</p>.<p>ಕೌಟುಂಬಿಕ ಸಮಸ್ಯೆಯಿಂದ ಮನೆಯಲ್ಲಿ ನಿತ್ಯ ವಾಗ್ವಾದ, ಗಲಾಟೆ ನಡೆಯುತ್ತಿತ್ತು. ಸೋಮವಾರ ಗಲಾಟೆ ವಿಕೋಪಕ್ಕೆ ತಿರುಗಿ ಒಬ್ಬರ ಮೇಲೊಬ್ಬರು ಹಲ್ಲೆ ಮಾಡಿಕೊಂಡಿದ್ದರು. ಘಟನೆಯಿಂದ ಬೇಸತ್ತ ಪತಿ, ಪತ್ನಿಗೆ ಸೀರೆಯಿಂದ ಬಿಗಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.</p>.<p>ಘಟನೆಗೆ ಸಂಬಂಧಿಸಿ ಪತಿ ದೇವೇಂದ್ರಪ್ಪ, ಆತನ ತಾಯಿ ಗಂಗಮ್ಮ, ಅಣ್ಣ ಶಿವಪ್ಪ ಹಾಗೂ ಅವರ ಪತ್ನಿ ರೇಣುಕಮ್ಮ, ಸಹೋದರಿ ಶೈಲಾ ವಿರುದ್ಧ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು ಎಂದು ನೇತ್ರಾವತಿ ತವರು ಮನೆಯವರು ದೂರು ನೀಡಿದ್ದಾರೆ.</p>.<p>ಮಲೇಬೆನ್ನೂರು ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿ ಮಂಗಳವಾರ ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>