<p><strong>ದಾವಣಗೆರೆ: </strong>ಕೆಲವು ಜಿಲ್ಲೆಗಳಿಗೆ 400–500 ಲೀಟರ್ ಆಮ್ಲಜನಕ ಮಾತ್ರ ಪೂರೈಕೆಯಾಗುತ್ತಿದೆ. ಇಲ್ಲಿ 6 ಸಾವಿರ ಲೀಟರ್ ಆಮ್ಲಜನಕ ಒಂದೇ ಆಸ್ಪತ್ರೆಗೆ ಪೂರೈಕೆಯಾಗುತ್ತಿದೆ. ನಿಜಕ್ಕೂ ಅದು ಎಲ್ಲಿ ಹೋಗುತ್ತಿದೆ’ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಪ್ರಶ್ನಿಸಿದ್ದಾರೆ.</p>.<p>ಜಿಲ್ಲಾ ಚಿಗಟೇರಿ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.</p>.<p>ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರು ಎಷ್ಟಿದ್ದಾರೆ ಎಂದು ಸಚಿವರು ಕೇಳಿದಾಗ, 300ಕ್ಕೂ ಅಧಿಕ ಮಂದಿ ಇರುವುದಾಗಿ ಅಧಿಕಾರಿಗಳು ತಿಳಿಸಿದರು. ‘ಎಲ್ಲರಿಗೂ ಆಮ್ಲಜನಕ ಕೊಡುತ್ತಿದ್ದೀರಾ? ಮತ್ತೆ ಹೇಗೆ ದಿನಕ್ಕೆ 6 ಸಾವಿರ ಲೀಟರ್ ಖಾಲಿಯಾಗುತ್ತಿದೆ? ಇಲ್ಲಿ ಏನೋ ನಡೆಯುತ್ತಿದೆ?’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>‘ಆಮ್ಲಜನಕ ನಿರ್ವಹಣೆಗಾಗಿ ಒಂದು ಸಮಿತಿ ಮಾಡಬೇಕು. ಯಾವ ರೋಗಿಗೆ ಎಷ್ಟು ಆಮ್ಲಜನಕ ನೀಡಲಾಗುತ್ತಿದೆ ಎಂಬ ಪಕ್ಕಾ ಮಾಹಿತಿ ನೀಡಬೇಕು ಎಂದು ಸೂಚನೆ ನೀಡಿದ್ದಾರೆ’ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಕೆಲವು ಜಿಲ್ಲೆಗಳಿಗೆ 400–500 ಲೀಟರ್ ಆಮ್ಲಜನಕ ಮಾತ್ರ ಪೂರೈಕೆಯಾಗುತ್ತಿದೆ. ಇಲ್ಲಿ 6 ಸಾವಿರ ಲೀಟರ್ ಆಮ್ಲಜನಕ ಒಂದೇ ಆಸ್ಪತ್ರೆಗೆ ಪೂರೈಕೆಯಾಗುತ್ತಿದೆ. ನಿಜಕ್ಕೂ ಅದು ಎಲ್ಲಿ ಹೋಗುತ್ತಿದೆ’ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಪ್ರಶ್ನಿಸಿದ್ದಾರೆ.</p>.<p>ಜಿಲ್ಲಾ ಚಿಗಟೇರಿ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.</p>.<p>ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರು ಎಷ್ಟಿದ್ದಾರೆ ಎಂದು ಸಚಿವರು ಕೇಳಿದಾಗ, 300ಕ್ಕೂ ಅಧಿಕ ಮಂದಿ ಇರುವುದಾಗಿ ಅಧಿಕಾರಿಗಳು ತಿಳಿಸಿದರು. ‘ಎಲ್ಲರಿಗೂ ಆಮ್ಲಜನಕ ಕೊಡುತ್ತಿದ್ದೀರಾ? ಮತ್ತೆ ಹೇಗೆ ದಿನಕ್ಕೆ 6 ಸಾವಿರ ಲೀಟರ್ ಖಾಲಿಯಾಗುತ್ತಿದೆ? ಇಲ್ಲಿ ಏನೋ ನಡೆಯುತ್ತಿದೆ?’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>‘ಆಮ್ಲಜನಕ ನಿರ್ವಹಣೆಗಾಗಿ ಒಂದು ಸಮಿತಿ ಮಾಡಬೇಕು. ಯಾವ ರೋಗಿಗೆ ಎಷ್ಟು ಆಮ್ಲಜನಕ ನೀಡಲಾಗುತ್ತಿದೆ ಎಂಬ ಪಕ್ಕಾ ಮಾಹಿತಿ ನೀಡಬೇಕು ಎಂದು ಸೂಚನೆ ನೀಡಿದ್ದಾರೆ’ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>