<p><strong>ಹೊನ್ನಾಳಿ:</strong> ರಂಗಭೂಮಿ ಚಟುವಟಿಕೆಗಳು ನಿಂತ ನೀರಾಗಬಾರದು. ಒಂದು ಪೀಳಿಗೆಯಿಂದ ಇನ್ನೊಂದು ಪೀಳಿಗೆಗೆ ಸಾಗಿದಾಗ ಮಾತ್ರ ಅದು ಉಳಿದು ಬೆಳೆಯಲು ಸಾಧ್ಯ. ಹೊಸ ಹೊಸ ಆವಿಷ್ಕಾರಗಳು ನಡೆಯಲು ಸಹಕಾರಿಯಾಗುತ್ತದೆ ಎಂದು ಹಿರಿಯ ರಂಗಕರ್ಮಿ ಸಿದ್ದರಾಜು ಹೇಳಿದರು.</p>.<p>ಪಟ್ಟಣದ ಕನಕದಾಸ ರಂಗಮಂದಿರದಲ್ಲಿ ಹೊನ್ನಾಳಿಯ ಅಭಿವ್ಯಕ್ತಿ ಕಲಾತಂಡದ 45ನೇ ವರ್ಷಾಚರಣೆ ಅಂಗವಾಗಿ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲ್ಲೂಕಿನ ಸಿರಿಗೇರಿ ಧಾತ್ರಿ ರಂಗಸಂಸ್ಥೆ ಕಲಾವಿದರಿಂದ ಮಂಗಳವಾರ ಆರಂಭವಾದ ಮೂರು ದಿನಗಳ ನಾಟಕೋತ್ಸವ ಕಾರ್ಯಕ್ರಮಕ್ಕೆ ಡೋಲು ಬಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.</p>.<p>ಇತ್ತೀಚಿನ ದಿನಗಳಲ್ಲಿ ಸಿನಿಮಾ, ಟಿ.ವಿ. ಮೊಬೈಲ್ಗಳಿಂದಾಗಿ ಹಾಗೂ ಆಧುನಿಕ ಜೀವನ ಶೈಲಿ ಪ್ರಭಾವಗಳಿಂದ ರಂಗಭೂಮಿ ಚಟುವಟಿಕೆಗಳು ಕ್ಷೀಣಿಸುತ್ತಿವೆ. ಅದಾಗ್ಯೂ ಸಾಣೆಹಳ್ಳಿಯ ಶಿವಸಂಚಾರ, ಹೆಗ್ಗೋಡು ನೀನಾಸಂ, ಧಾತ್ರಿ ರಂಗ ಸಂಸ್ಥೆ, ರಂಗಾಯಣಗಳಂತ ಕೆಲವು ಸಂಸ್ಥೆಗಳ ಮೂಲಕ ರಂಗಭೂಮಿ ಚಟುವಟಿಕೆಗಳು ಮುಂದುವರಿಯುತ್ತಿವೆ ಎಂದರು.</p>.<p>45 ವರ್ಷಗಳಿಂದಲೂ ಅಭಿವ್ಯಕ್ತಿ ಕಲಾ ತಂಡ ಉಳಿದುಕೊಂಡು ಬರುತ್ತಿದೆ ಎಂದರೆ ಅದಕ್ಕೆ ಸ್ಥಳೀಯ ಕಲಾಭಿಮಾನಿಗಳು, ಕಲಾವಿದರ ಸಹಕಾರ ಕಾರಣ ಎಂದು ಅಭಿವ್ಯಕ್ತಿ ಕಲಾತಂಡದ ಸಂಸ್ಥಾಪಕ, ರಂಗಕರ್ಮಿ ಪ್ರೇಂಕುಮಾರ ಬಂಡಿಗಡಿ ಹೇಳಿದರು. </p>.<p>ಕಲಾತಂಡದ ಸತ್ತಿಗೆ ಲೋಕೇಶ್, ಮಲ್ಲಿಕಾರ್ಜುನ ಸ್ವಾಮಿ, ಸತ್ಯನಾರಾಯಣರಾವ್, ಪಟ್ಟಣ ಶೆಟ್ಟಿ ಪರಮೇಶ್ ಅವಿನಾಶ್ ಟೈಲರ್ ಬಸವರಾಜ್, ಕತ್ತಿಗೆ ನಾಗರಾಜ್, ಬೆನಕಪ್ಪ, ಯುವಶಕ್ತಿ ಒಕ್ಕೂಟದ ಚಿನ್ನಪ್ಪ ಮೇದಾರ, ಕೆ.ವಿ.ಚನ್ನಪ್ಪ ಮುಂತಾದವರು ಇದ್ದರು.</p>.<p>ನಾಟಕೋತ್ಸವ ಉದ್ಘಾಟನೆ ಕಾರ್ಯಕ್ರಮದ ನಂತರ ಶ್ರೀಕೃಷ್ಣ ಸಂಧಾನ ನಗೆ ನಾಟಕ ಪ್ರದರ್ಶಿಸಲಾಯಿತು. ಗುರುವಾರ ಸರಸತಿಯಾಲೊಲ್ಲೆ ನಾಟಕ ಪ್ರದರ್ಶನಗೊಳ್ಳಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ:</strong> ರಂಗಭೂಮಿ ಚಟುವಟಿಕೆಗಳು ನಿಂತ ನೀರಾಗಬಾರದು. ಒಂದು ಪೀಳಿಗೆಯಿಂದ ಇನ್ನೊಂದು ಪೀಳಿಗೆಗೆ ಸಾಗಿದಾಗ ಮಾತ್ರ ಅದು ಉಳಿದು ಬೆಳೆಯಲು ಸಾಧ್ಯ. ಹೊಸ ಹೊಸ ಆವಿಷ್ಕಾರಗಳು ನಡೆಯಲು ಸಹಕಾರಿಯಾಗುತ್ತದೆ ಎಂದು ಹಿರಿಯ ರಂಗಕರ್ಮಿ ಸಿದ್ದರಾಜು ಹೇಳಿದರು.</p>.<p>ಪಟ್ಟಣದ ಕನಕದಾಸ ರಂಗಮಂದಿರದಲ್ಲಿ ಹೊನ್ನಾಳಿಯ ಅಭಿವ್ಯಕ್ತಿ ಕಲಾತಂಡದ 45ನೇ ವರ್ಷಾಚರಣೆ ಅಂಗವಾಗಿ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲ್ಲೂಕಿನ ಸಿರಿಗೇರಿ ಧಾತ್ರಿ ರಂಗಸಂಸ್ಥೆ ಕಲಾವಿದರಿಂದ ಮಂಗಳವಾರ ಆರಂಭವಾದ ಮೂರು ದಿನಗಳ ನಾಟಕೋತ್ಸವ ಕಾರ್ಯಕ್ರಮಕ್ಕೆ ಡೋಲು ಬಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.</p>.<p>ಇತ್ತೀಚಿನ ದಿನಗಳಲ್ಲಿ ಸಿನಿಮಾ, ಟಿ.ವಿ. ಮೊಬೈಲ್ಗಳಿಂದಾಗಿ ಹಾಗೂ ಆಧುನಿಕ ಜೀವನ ಶೈಲಿ ಪ್ರಭಾವಗಳಿಂದ ರಂಗಭೂಮಿ ಚಟುವಟಿಕೆಗಳು ಕ್ಷೀಣಿಸುತ್ತಿವೆ. ಅದಾಗ್ಯೂ ಸಾಣೆಹಳ್ಳಿಯ ಶಿವಸಂಚಾರ, ಹೆಗ್ಗೋಡು ನೀನಾಸಂ, ಧಾತ್ರಿ ರಂಗ ಸಂಸ್ಥೆ, ರಂಗಾಯಣಗಳಂತ ಕೆಲವು ಸಂಸ್ಥೆಗಳ ಮೂಲಕ ರಂಗಭೂಮಿ ಚಟುವಟಿಕೆಗಳು ಮುಂದುವರಿಯುತ್ತಿವೆ ಎಂದರು.</p>.<p>45 ವರ್ಷಗಳಿಂದಲೂ ಅಭಿವ್ಯಕ್ತಿ ಕಲಾ ತಂಡ ಉಳಿದುಕೊಂಡು ಬರುತ್ತಿದೆ ಎಂದರೆ ಅದಕ್ಕೆ ಸ್ಥಳೀಯ ಕಲಾಭಿಮಾನಿಗಳು, ಕಲಾವಿದರ ಸಹಕಾರ ಕಾರಣ ಎಂದು ಅಭಿವ್ಯಕ್ತಿ ಕಲಾತಂಡದ ಸಂಸ್ಥಾಪಕ, ರಂಗಕರ್ಮಿ ಪ್ರೇಂಕುಮಾರ ಬಂಡಿಗಡಿ ಹೇಳಿದರು. </p>.<p>ಕಲಾತಂಡದ ಸತ್ತಿಗೆ ಲೋಕೇಶ್, ಮಲ್ಲಿಕಾರ್ಜುನ ಸ್ವಾಮಿ, ಸತ್ಯನಾರಾಯಣರಾವ್, ಪಟ್ಟಣ ಶೆಟ್ಟಿ ಪರಮೇಶ್ ಅವಿನಾಶ್ ಟೈಲರ್ ಬಸವರಾಜ್, ಕತ್ತಿಗೆ ನಾಗರಾಜ್, ಬೆನಕಪ್ಪ, ಯುವಶಕ್ತಿ ಒಕ್ಕೂಟದ ಚಿನ್ನಪ್ಪ ಮೇದಾರ, ಕೆ.ವಿ.ಚನ್ನಪ್ಪ ಮುಂತಾದವರು ಇದ್ದರು.</p>.<p>ನಾಟಕೋತ್ಸವ ಉದ್ಘಾಟನೆ ಕಾರ್ಯಕ್ರಮದ ನಂತರ ಶ್ರೀಕೃಷ್ಣ ಸಂಧಾನ ನಗೆ ನಾಟಕ ಪ್ರದರ್ಶಿಸಲಾಯಿತು. ಗುರುವಾರ ಸರಸತಿಯಾಲೊಲ್ಲೆ ನಾಟಕ ಪ್ರದರ್ಶನಗೊಳ್ಳಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>