ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧೂಡಾದಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

Last Updated 3 ಜುಲೈ 2021, 16:35 IST
ಅಕ್ಷರ ಗಾತ್ರ

ದಾವಣಗೆರೆ: ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಗರದ ವಿವಿಧೆಡೆ ಅಭಿವೃದ್ಧಿ ಕಾಮಗಾರಿಗಳಿಗೆ ಶನಿವಾರ ಚಾಲನೆ ನೀಡಲಾಯಿತು.

ಸಂಸದ ಜಿ.ಎಂ.ಸಿದ್ದೇಶ್ವರ, ಶಾಸಕ ಎಸ್.ಎ. ರವೀಂದ್ರನಾಥ್, ಧೂಡಾ ಅಧ್ಯಕ್ಷ ರಾಜನಹಳ್ಳಿ‌ ಶಿವಕುಮಾರ್, ಧೂಡಾ ಸದಸ್ಯರಾದ ಸದಸ್ಯರಾದ ನಾಗರಾಜ ಎಂ. ರೋಖಡೆ, ಡಿ.ವಿ. ಜಯರುದ್ರಪ್ಪ, ಆರ್‌.ಎಲ್‌. ದೇವಿರಮ್ಮ, ಸೌಭಾಗ್ಯ ಮುಕುಂದ, ಬಿಜೆಪಿ ಮುಖಂಡ ಯಶವಂತರಾವ್‌ ಜಾಧವ್‌, ಗೋಣೆಪ್ಪ ಅವರು ಕಾಮಗಾರಿಗಳಿಗೆ ಚಾಲನೆ ನೀಡಿದರು.

ಎಸ್.ಎಂ. ಕೃಷ್ಣ ನಗರದಲ್ಲಿರುವ ಪಾರ್ಕ್ ಅಭಿವೃದ್ಧಿ, ಬಾಬೂ ಜಗಜೀವನ್ ರಾಂ ನಗರದ ಪಾರ್ಕ್ ಅಭಿವೃದ್ಧಿಯ ಉದ್ಘಾಟನೆ, ವೀರಮದಕರಿ ನಾಯಕ ವೃತ್ತದ (ಹೊಂಡದ ಸರ್ಕಲ್) ನೀರಿನ ಕಾರಂಜಿ, ಶಿವಾಜಿ ಸರ್ಕಲ್‌ನ ನೀರಿನ ಕಾರಂಜಿ, ಪಿಬಿ ರಸ್ತೆಯ ಸಂಗೊಳ್ಳಿ ರಾಯಣ್ಣ ವೃತ್ತದ ಅಭಿವೃದ್ಧಿಯ ಕಾಮಗಾರಿ ಹೀಗೆ ₹ 61 ಲಕ್ಷ ವೆಚ್ಚದ ಕಾಮಗಾರಿಗಳ ಉದ್ಘಾಟನೆ, ₹ 27 ಲಕ್ಷ ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.

ಧೂಡಾ ಆಯುಕ್ತ ಕುಮಾರಸ್ವಾಮಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT