<p><strong>ದಾವಣಗೆರೆ</strong>: ಕೋವಿಡ್ ಎರಡನೇ ಅಲೆ ಹರಡುವುದನ್ನು ಪರಿಣಾಮಕಾರಿಯಾಗಿ ತಡೆಯುವ ನಿಟ್ಟಿನಲ್ಲಿ ಜಿಲ್ಲೆಯ 45 ವರ್ಷ ದಾಟಿದ ಎಲ್ಲ ವಕೀಲರಿಗೆ ಏ. 15ರಿಂದ 3 ದಿನಗಳ ಕಾಲ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಕೆ.ಬಿ.ಗೀತಾ ಹೇಳಿದರು.</p>.<p>ಜಿಲ್ಲಾ ನ್ಯಾಯಾಲಯ, ಜಿಲ್ಲಾ ವಕೀಲರ ಸಂಘ, ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಗುರುವಾರ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಏರ್ಪಡಿಸಿದ ಲಸಿಕಾ ಉತ್ಸವ ಅಭಿಯಾನದಲ್ಲಿ ಅವರು ಮಾತನಾಡಿದರು.</p>.<p>ನ್ಯಾಯಾಲಯದ ಸಿಬ್ಬಂದಿ ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ಲಸಿಕೆ ಪಡೆದಿದ್ದಾರೆ. ಲಸಿಕೆ ಪಡೆಯದ ಸಿಬ್ಬಂದಿ, ವಕೀಲರು ಲಸಿಕೆ ಹಾಕಿಸಿಕೊಳ್ಳಬೇಕು ಎಂದು ತಿಳಿಸಿದರು.</p>.<p>ಡಿಎಚ್ಒ ಡಾ. ನಾಗರಾಜ್, ‘3 ದಿನಗಳ ಅಭಿಯಾನದಲ್ಲಿ ಪ್ರತಿದಿನ 100 ಜನರಂತೆ ಒಟ್ಟು 300 ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಕೋವ್ಯಾಕ್ಸಿನ್ ಲಸಿಕೆ ತೆಗೆದುಕೊಂಡವರಿಗೆ 2ನೇ ಡೋಸ್ 4 ವಾರದ ಬಳಿಕ ಹಾಕಲಾಗುತ್ತದೆ. ಕೋವಿಶೀಲ್ಡ್ ಲಸಿಕೆ ಹಾಕಿಸಿಕೊಂಡವರಿಗೆ ಮೊದಲ ಡೋಸ್ ಪಡೆದ 6 ವಾರದ ನಂತರ 2ನೇ ಡೋಸ್ ನೀಡಲಾಗುತ್ತದೆ’ ಎಂದು ಮಾಹಿತಿ ನೀಡಿದರು. ವಕೀಲರ ಸಂಘದ ಮಾಜಿ ಅಧ್ಯಕ್ಷ ಎನ್.ಟಿ.ಮಂಜುನಾಥ್, ವಕೀಲರಾದ ಅನ್ನಪೂರ್ಣಮ್ಮ, ಎಸ್.ಆರ್.ಚಂದ್ರಶೇಖರ್, ರಮೇಶ್, ಸಿಬ್ಬಂದಿ ಲಸಿಕೆ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ಕೋವಿಡ್ ಎರಡನೇ ಅಲೆ ಹರಡುವುದನ್ನು ಪರಿಣಾಮಕಾರಿಯಾಗಿ ತಡೆಯುವ ನಿಟ್ಟಿನಲ್ಲಿ ಜಿಲ್ಲೆಯ 45 ವರ್ಷ ದಾಟಿದ ಎಲ್ಲ ವಕೀಲರಿಗೆ ಏ. 15ರಿಂದ 3 ದಿನಗಳ ಕಾಲ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಕೆ.ಬಿ.ಗೀತಾ ಹೇಳಿದರು.</p>.<p>ಜಿಲ್ಲಾ ನ್ಯಾಯಾಲಯ, ಜಿಲ್ಲಾ ವಕೀಲರ ಸಂಘ, ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಗುರುವಾರ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಏರ್ಪಡಿಸಿದ ಲಸಿಕಾ ಉತ್ಸವ ಅಭಿಯಾನದಲ್ಲಿ ಅವರು ಮಾತನಾಡಿದರು.</p>.<p>ನ್ಯಾಯಾಲಯದ ಸಿಬ್ಬಂದಿ ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ಲಸಿಕೆ ಪಡೆದಿದ್ದಾರೆ. ಲಸಿಕೆ ಪಡೆಯದ ಸಿಬ್ಬಂದಿ, ವಕೀಲರು ಲಸಿಕೆ ಹಾಕಿಸಿಕೊಳ್ಳಬೇಕು ಎಂದು ತಿಳಿಸಿದರು.</p>.<p>ಡಿಎಚ್ಒ ಡಾ. ನಾಗರಾಜ್, ‘3 ದಿನಗಳ ಅಭಿಯಾನದಲ್ಲಿ ಪ್ರತಿದಿನ 100 ಜನರಂತೆ ಒಟ್ಟು 300 ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಕೋವ್ಯಾಕ್ಸಿನ್ ಲಸಿಕೆ ತೆಗೆದುಕೊಂಡವರಿಗೆ 2ನೇ ಡೋಸ್ 4 ವಾರದ ಬಳಿಕ ಹಾಕಲಾಗುತ್ತದೆ. ಕೋವಿಶೀಲ್ಡ್ ಲಸಿಕೆ ಹಾಕಿಸಿಕೊಂಡವರಿಗೆ ಮೊದಲ ಡೋಸ್ ಪಡೆದ 6 ವಾರದ ನಂತರ 2ನೇ ಡೋಸ್ ನೀಡಲಾಗುತ್ತದೆ’ ಎಂದು ಮಾಹಿತಿ ನೀಡಿದರು. ವಕೀಲರ ಸಂಘದ ಮಾಜಿ ಅಧ್ಯಕ್ಷ ಎನ್.ಟಿ.ಮಂಜುನಾಥ್, ವಕೀಲರಾದ ಅನ್ನಪೂರ್ಣಮ್ಮ, ಎಸ್.ಆರ್.ಚಂದ್ರಶೇಖರ್, ರಮೇಶ್, ಸಿಬ್ಬಂದಿ ಲಸಿಕೆ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>