<p><strong>ದಾವಣಗೆರೆ</strong>: ‘ಮಹಿಳಾ ಸ್ವಸಹಾಯ ಗುಂಪುಗಳಿಗೆ ಕೃಷಿಗೆ ನೆರವಾಗುವ ನಿಟ್ಟಿನಲ್ಲಿ ₹1,261 ಕೋಟಿ ವೆಚ್ಚದಲ್ಲಿ ಡ್ರೋನ್ಗಳನ್ನು ಒದಗಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು.</p>.<p>ಹರಿಹರ ತಾಲ್ಲೂಕಿನ ಎಳೆಹೊಳೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ‘ವಿಕಸಿತ ಭಾರತ ನಮ್ಮ ಸಂಕಲ್ಪ ಯಾತ್ರೆ’ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ನ್ಯಾನೋ ರಸಗೊಬ್ಬರ, ಕೀಟನಾಶಕಗಳ ಸಿಂಪಡಣೆ ಸೇರಿ ಕೃಷಿಯ ವಿವಿಧ ಉದ್ದೇಶಗಳಿಗಾಗಿ ರೈತರಿಗೆ ಬಾಡಿಗೆ ಒದಗಿಸಲು ಮಹಿಳಾ ಸ್ವಸಹಾಯ ಸಂಘಗಳಿಗೆ ಡ್ರೋನ್ ಒದಗಿಸಲಾಗಿದೆ. ಮಹಿಳಾ ಸ್ವಸಹಾಯ ಸಂಘಗಳ ಸಬಲೀಕರಣ ಮತ್ತು ಕೃಷಿ ಕ್ಷೇತ್ರದಲ್ಲಿ ಹೊಸ ತಂತ್ರಜ್ಞಾನ ಬಳಕೆಯೇ ಈ ಯೋಜನೆಯ ಉದ್ದೇಶವಾಗಿದೆ. ಡ್ರೋನ್ ಖರೀದಿಗೆ ಶೇ 80ರಷ್ಟು ಹಣವನ್ನು ಕೇಂದ್ರ ಸರ್ಕಾರ ನೀಡಲಿದೆ ಎಂದರು.</p>.<p>2022-23ರ ಕೇಂದ್ರ ಸರ್ಕಾರದ ಆರ್ಥಿಕ ಸಮೀಕ್ಷೆ ವರದಿಯ ಪ್ರಕಾರ ದೇಶದಲ್ಲಿ ಸುಮಾರು 1.20 ಕೋಟಿಗೂ ಹೆಚ್ಚು ಮಹಿಳಾ ಸ್ವಸಹಾಯ ಸಂಘಗಳಿದ್ದು, ಈ ಸ್ವಸಹಾಯ ಸಂಘಗಳನ್ನು ಸಬಲೀಕರಣ ಮಾಡುವುದರೊಂದಿಗೆ ಕೃಷಿ ವಲಯಕ್ಕೂ ತಂತ್ರಜ್ಞಾನ ಪ್ರಯೋಜನ ಒದಗಿಸಲು ಕೇಂದ್ರ ಸರ್ಕಾರ ಮಹತ್ವದ ಯೋಜನೆಯನ್ನು ಘೋಷಣೆ ಮಾಡಿದೆ’ ಎಂದು ಹೇಳಿದರು.</p>.<p>‘ದೇಶದಾದ್ಯಂತ ಸುಮಾರು 2000 ಪ್ರಚಾರದ ವಾಹನಗಳು, ಸುಮಾರು 1000 ಕೃಷಿ ವಿಜ್ಞಾನ ಕೇಂದ್ರಗಳು, ಸಾಮಾನ್ಯ ಸೇವಾ ಕೇಂದ್ರಗಳು, ನಬಾರ್ಡ್ ಹಾಗೂ ಬ್ಯಾಂಕ್ಗಳು ಈ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡಿವೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜನಪರ ಯೋಜನೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶ.<br>ನವೆಂಬರ್ 15ರಿಂದ ಪ್ರಾರಂಭವಾಗಿರುವ ಈ ಕಾರ್ಯಕ್ರಮ ಜನವರಿ 22ರವರೆಗೆ ದೇಶಾದ್ಯಂತ ನಡೆಯಲಿದೆ’ ಎಂದು ಹೇಳಿದರು.</p>.<p>‘ಸರ್ಕಾರದ ಯೋಜನೆಗಳು ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು. ಇದರಲ್ಲಿ ಸಾರ್ವಜನಿಕರೂ ಭಾಗಿಯಾಗಬೇಕು’ ಎಂದು ಹರಿಹರ ಶಾಸಕ ಬಿ.ಪಿ. ಹರೀಶ್ ತಿಳಿಸಿದರು.</p>.<p>ಡಿಸಿಸಿ ಬ್ಯಾಂಕ್ ನಿರ್ದೇಶಕ ಹೊಳೆಸಿರಿಗೆರೆ ಹಾಲೇಶಪ್ಪ, ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರಕಾಶ್, ಬಿಜೆಪಿ ಮುಖಂಡರಾದ ಚಂದ್ರಶೇಖರ್ ಪೂಜಾರ್, ತಾಲ್ಲೂಕು ಬಿ.ಜೆ.ಪಿ. ಅಧ್ಯಕ್ಷ ಹಿಂಡಸಘಟ್ಟೆ ಲಿಂಗರಾಜ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ‘ಮಹಿಳಾ ಸ್ವಸಹಾಯ ಗುಂಪುಗಳಿಗೆ ಕೃಷಿಗೆ ನೆರವಾಗುವ ನಿಟ್ಟಿನಲ್ಲಿ ₹1,261 ಕೋಟಿ ವೆಚ್ಚದಲ್ಲಿ ಡ್ರೋನ್ಗಳನ್ನು ಒದಗಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು.</p>.<p>ಹರಿಹರ ತಾಲ್ಲೂಕಿನ ಎಳೆಹೊಳೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ‘ವಿಕಸಿತ ಭಾರತ ನಮ್ಮ ಸಂಕಲ್ಪ ಯಾತ್ರೆ’ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ನ್ಯಾನೋ ರಸಗೊಬ್ಬರ, ಕೀಟನಾಶಕಗಳ ಸಿಂಪಡಣೆ ಸೇರಿ ಕೃಷಿಯ ವಿವಿಧ ಉದ್ದೇಶಗಳಿಗಾಗಿ ರೈತರಿಗೆ ಬಾಡಿಗೆ ಒದಗಿಸಲು ಮಹಿಳಾ ಸ್ವಸಹಾಯ ಸಂಘಗಳಿಗೆ ಡ್ರೋನ್ ಒದಗಿಸಲಾಗಿದೆ. ಮಹಿಳಾ ಸ್ವಸಹಾಯ ಸಂಘಗಳ ಸಬಲೀಕರಣ ಮತ್ತು ಕೃಷಿ ಕ್ಷೇತ್ರದಲ್ಲಿ ಹೊಸ ತಂತ್ರಜ್ಞಾನ ಬಳಕೆಯೇ ಈ ಯೋಜನೆಯ ಉದ್ದೇಶವಾಗಿದೆ. ಡ್ರೋನ್ ಖರೀದಿಗೆ ಶೇ 80ರಷ್ಟು ಹಣವನ್ನು ಕೇಂದ್ರ ಸರ್ಕಾರ ನೀಡಲಿದೆ ಎಂದರು.</p>.<p>2022-23ರ ಕೇಂದ್ರ ಸರ್ಕಾರದ ಆರ್ಥಿಕ ಸಮೀಕ್ಷೆ ವರದಿಯ ಪ್ರಕಾರ ದೇಶದಲ್ಲಿ ಸುಮಾರು 1.20 ಕೋಟಿಗೂ ಹೆಚ್ಚು ಮಹಿಳಾ ಸ್ವಸಹಾಯ ಸಂಘಗಳಿದ್ದು, ಈ ಸ್ವಸಹಾಯ ಸಂಘಗಳನ್ನು ಸಬಲೀಕರಣ ಮಾಡುವುದರೊಂದಿಗೆ ಕೃಷಿ ವಲಯಕ್ಕೂ ತಂತ್ರಜ್ಞಾನ ಪ್ರಯೋಜನ ಒದಗಿಸಲು ಕೇಂದ್ರ ಸರ್ಕಾರ ಮಹತ್ವದ ಯೋಜನೆಯನ್ನು ಘೋಷಣೆ ಮಾಡಿದೆ’ ಎಂದು ಹೇಳಿದರು.</p>.<p>‘ದೇಶದಾದ್ಯಂತ ಸುಮಾರು 2000 ಪ್ರಚಾರದ ವಾಹನಗಳು, ಸುಮಾರು 1000 ಕೃಷಿ ವಿಜ್ಞಾನ ಕೇಂದ್ರಗಳು, ಸಾಮಾನ್ಯ ಸೇವಾ ಕೇಂದ್ರಗಳು, ನಬಾರ್ಡ್ ಹಾಗೂ ಬ್ಯಾಂಕ್ಗಳು ಈ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡಿವೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜನಪರ ಯೋಜನೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶ.<br>ನವೆಂಬರ್ 15ರಿಂದ ಪ್ರಾರಂಭವಾಗಿರುವ ಈ ಕಾರ್ಯಕ್ರಮ ಜನವರಿ 22ರವರೆಗೆ ದೇಶಾದ್ಯಂತ ನಡೆಯಲಿದೆ’ ಎಂದು ಹೇಳಿದರು.</p>.<p>‘ಸರ್ಕಾರದ ಯೋಜನೆಗಳು ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು. ಇದರಲ್ಲಿ ಸಾರ್ವಜನಿಕರೂ ಭಾಗಿಯಾಗಬೇಕು’ ಎಂದು ಹರಿಹರ ಶಾಸಕ ಬಿ.ಪಿ. ಹರೀಶ್ ತಿಳಿಸಿದರು.</p>.<p>ಡಿಸಿಸಿ ಬ್ಯಾಂಕ್ ನಿರ್ದೇಶಕ ಹೊಳೆಸಿರಿಗೆರೆ ಹಾಲೇಶಪ್ಪ, ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರಕಾಶ್, ಬಿಜೆಪಿ ಮುಖಂಡರಾದ ಚಂದ್ರಶೇಖರ್ ಪೂಜಾರ್, ತಾಲ್ಲೂಕು ಬಿ.ಜೆ.ಪಿ. ಅಧ್ಯಕ್ಷ ಹಿಂಡಸಘಟ್ಟೆ ಲಿಂಗರಾಜ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>