ಹೊನ್ನಾಳಿ: ತಾಲ್ಲೂಕಿನ ಅರಬಗಟ್ಟೆ ಗ್ರಾಮದ ಇಂದಿರಾಗಾಂಧಿ ವಸತಿ ಶಾಲಾ ಆವರಣ ಹಾಗೂ ತುಂಗಾ ಮೇಲ್ದಂಡೆ ಯೋಜನೆಯ ಮುಖ್ಯನಾಲೆಯ ಆಸು ಪಾಸಿನ ಜಮೀನುಗಳ ವ್ಯಾಪ್ತಿಯಲ್ಲಿ ಈಚೆಗೆ ಕಾಣಿಸಿಕೊಂಡಿದ್ದ ಚಿರತೆ ಮತ್ತು ಅದರ ಎರಡು ಮರಿಗಳು, ತಾಲ್ಲೂಕಿನ ಎಚ್. ಕಡದಕಟ್ಟೆ, ಮಾರಿಕೊಪ್ಪ ಮತ್ತಿತರ ಗ್ರಾಮಗಳ ಜಮೀನುಗಳಲ್ಲಿ ಮಂಗಳವಾರ ಮತ್ತೆ ಕಾಣಿಸಿಕೊಳ್ಳುವ ಮೂಲಕ ಜನರಲ್ಲಿ ಆತಂಕ ಉಂಟು ಮಾಡಿವೆ.