<p><strong>ಕಡರನಾಯ್ಕನಹಳ್ಳಿ</strong>: ‘ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಯಾರಿಗೂ ಕಡಿಮೆ ಇಲ್ಲ. ಅವರ ವಿದ್ಯಾಭ್ಯಾಸಕ್ಕೆ ಅಗತ್ಯ ನೆರವು, ಪ್ರೋತ್ಸಾಹ ನೀಡಿದರೆ ಉತ್ತಮ ಸಾಧನೆ ಮಾಡುತ್ತಾರೆ’ ಎಂದು ಡಿವೈಎಸ್ಪಿ ಪ್ರಕಾಶ್ ಹೇಳಿದರು. </p>.<p>ಸಮೀಪದ ಜಿಟಿ ಕಟ್ಟಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. </p>.<p>‘ಗ್ರಾಮದ ಪೋಷಕರು ಸರ್ಕಾರಿ ಶಾಲೆ ಎಂಬ ಅಸಡ್ಡೆ ತೋರದೆ, ಮಾದರಿ ಶಾಲೆಯನ್ನಾಗಿ ರೂಪಿಸಿರುವುದು ಶ್ಲಾಘನೀಯ’ ಎಂದರು. </p>.<p>‘ಸರ್ಕಾರಿ ಶಾಲೆಗಳಲ್ಲಿ ಕಲಿತವರು ಮಹಾನ್ ಸಾಧನೆ ಮಾಡಿದ್ದಾರೆ. ಈ ಶಾಲೆಯನ್ನು ಉನ್ನತೀಕರಿಸಿದ ಶಾಲೆಯನ್ನಾಗಿಸುವ ಜವಾಬ್ದಾರಿ ಗ್ರಾಮಸ್ಥರ ಮೇಲಿದೆ’ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಚ್. ಚಂದ್ರಪ್ಪ ಹೇಳಿದರು. </p>.<p>ಇಸಿಒ ಶಿವಮೂರ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನಿವೃತ್ತ ಶಿಕ್ಷಕ ಮಹಾರುದ್ರಪ್ಪ, ಎನ್ಪಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದಪ್ಪ ಸಂಘಣ್ಣನವರ್ ಮಾತನಾಡಿದರು. ಶೈಲಾ ರಾಣಿ, ಉಡೇದ ವಾರ್ಷಿಕ ವರದಿ ವಾಚಿಸಿದರು.</p>.<p>ಮುಖ್ಯೋಪಾಧ್ಯಾಯ ಎಚ್.ಆರ್. ಶಾಂತರಾಜ್ ಸ್ವಾಗತಿಸಿದರು. ಜಾನಪದ ನೃತ್ಯ, ಕೋಲಾಟ, ಕಿರುನಾಟಕ ಸೇರಿದಂತೆ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. </p>.<p>ಎಸ್ಡಿಎಂಸಿ ಅಧ್ಯಕ್ಷ ಬಿ. ಗಿರೀಶ್ ಅಧ್ಯಕ್ಷತೆ ವಹಿಸಿದ್ದರು. ಸಿಆರ್ಪಿ ಮಲ್ಲೇಶಪ್ಪ, ಪತ್ರಕರ್ತ ಜಿಗಳಿ ಪ್ರಕಾಶ್, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಎಸ್ಡಿಎಂಸಿ ಪದಾಧಿಕಾರಿಗಳು, ಗ್ರಾಮಸ್ಥರು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಡರನಾಯ್ಕನಹಳ್ಳಿ</strong>: ‘ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಯಾರಿಗೂ ಕಡಿಮೆ ಇಲ್ಲ. ಅವರ ವಿದ್ಯಾಭ್ಯಾಸಕ್ಕೆ ಅಗತ್ಯ ನೆರವು, ಪ್ರೋತ್ಸಾಹ ನೀಡಿದರೆ ಉತ್ತಮ ಸಾಧನೆ ಮಾಡುತ್ತಾರೆ’ ಎಂದು ಡಿವೈಎಸ್ಪಿ ಪ್ರಕಾಶ್ ಹೇಳಿದರು. </p>.<p>ಸಮೀಪದ ಜಿಟಿ ಕಟ್ಟಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. </p>.<p>‘ಗ್ರಾಮದ ಪೋಷಕರು ಸರ್ಕಾರಿ ಶಾಲೆ ಎಂಬ ಅಸಡ್ಡೆ ತೋರದೆ, ಮಾದರಿ ಶಾಲೆಯನ್ನಾಗಿ ರೂಪಿಸಿರುವುದು ಶ್ಲಾಘನೀಯ’ ಎಂದರು. </p>.<p>‘ಸರ್ಕಾರಿ ಶಾಲೆಗಳಲ್ಲಿ ಕಲಿತವರು ಮಹಾನ್ ಸಾಧನೆ ಮಾಡಿದ್ದಾರೆ. ಈ ಶಾಲೆಯನ್ನು ಉನ್ನತೀಕರಿಸಿದ ಶಾಲೆಯನ್ನಾಗಿಸುವ ಜವಾಬ್ದಾರಿ ಗ್ರಾಮಸ್ಥರ ಮೇಲಿದೆ’ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಚ್. ಚಂದ್ರಪ್ಪ ಹೇಳಿದರು. </p>.<p>ಇಸಿಒ ಶಿವಮೂರ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನಿವೃತ್ತ ಶಿಕ್ಷಕ ಮಹಾರುದ್ರಪ್ಪ, ಎನ್ಪಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದಪ್ಪ ಸಂಘಣ್ಣನವರ್ ಮಾತನಾಡಿದರು. ಶೈಲಾ ರಾಣಿ, ಉಡೇದ ವಾರ್ಷಿಕ ವರದಿ ವಾಚಿಸಿದರು.</p>.<p>ಮುಖ್ಯೋಪಾಧ್ಯಾಯ ಎಚ್.ಆರ್. ಶಾಂತರಾಜ್ ಸ್ವಾಗತಿಸಿದರು. ಜಾನಪದ ನೃತ್ಯ, ಕೋಲಾಟ, ಕಿರುನಾಟಕ ಸೇರಿದಂತೆ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. </p>.<p>ಎಸ್ಡಿಎಂಸಿ ಅಧ್ಯಕ್ಷ ಬಿ. ಗಿರೀಶ್ ಅಧ್ಯಕ್ಷತೆ ವಹಿಸಿದ್ದರು. ಸಿಆರ್ಪಿ ಮಲ್ಲೇಶಪ್ಪ, ಪತ್ರಕರ್ತ ಜಿಗಳಿ ಪ್ರಕಾಶ್, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಎಸ್ಡಿಎಂಸಿ ಪದಾಧಿಕಾರಿಗಳು, ಗ್ರಾಮಸ್ಥರು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>