ರಾಜ್ಯದ ಅಧಿಕಾರಿಗಳು, ಜನಪ್ರತಿನಿಧಿಗಳು, ಶಿಕ್ಷಕರು ಸೇರಿದಂತೆ ಎಲ್ಲರೂ ಕೇವಲ 10 ವರ್ಷ ಪ್ರಾಮಾಣಿಕತೆ, ಸೇವಾ ಬದ್ಧತೆ, ಕರ್ತವ್ಯ ನಿಷ್ಠೆ, ನೈತಿಕ ಪ್ರಜ್ಞೆ, ಸಾಮಾಜಿಕ ಕಳಕಳಿ ಮತ್ತು ಅಭಿವೃದ್ಧಿ ಪರಚಿಂತನೆಯಿಂದ ಕೆಲಸ ಮಾಡಿದರೆ ಇಡೀ ಜಗತ್ತಿಗೆ ಮಾದರಿಯಾಗುವಂತೆ ರಾಜ್ಯವನ್ನು ಪರಿವರ್ತಿಸಬಹುದು. ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದಾಗಿ ಇರುವ ಎಲ್ಲ ರೀತಿಯ ಸಂಪನ್ಮೂಲಗಳನ್ನು ಬಳಕೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ ಎಂದು ವಿಷಾದಿಸಿದರು.