<p><strong>ದಾವಣಗೆರೆ:</strong> ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ 150ನೇ ಜನ್ಮ ದಿನ ಹಾಗೂ ರಾಷ್ಟ್ರೀಯ ಏಕತಾ ದಿನಾಚರಣೆಯ ಅಂಗವಾಗಿ ದಾವಣಗೆರೆ ವಿಶ್ವವಿದ್ಯಾಲಯದ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ‘ಏಕತಾ ನಡಿಗೆ’ಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ (ಎನ್ಎಸ್ಎಸ್) ವಿದ್ಯಾರ್ಥಿಗಳು ಹೆಜ್ಜೆಹಾಕಿದರು.</p>.<p>ವಿಶ್ವವಿದ್ಯಾಲಯದ ಶಿವಗಂಗೋತ್ರಿ ಆವರಣದ ಅತಿಥಿಗೃಹದಿಂದ ಆರಂಭವಾದ ನಡಿಗೆ ಮಾನವಿಕ ನಿಕಾಯದ ಕಟ್ಟಡದವರೆಗೆ ನಡೆಯಿತು. ದೇಶಭಕ್ತಿ ಹಾಗೂ ಸರ್ದಾರ್ ವಲ್ಲಭಬಾಯಿ ಪರವಾದ ಘೋಷಣೆಗಳು ಮೊಳಗಿದವು. ನಾಯಕತ್ವ ತರಬೇತಿ ಶಿಬಿರದ ವಿಶೇಷ ಉಪನ್ಯಾಸಕ್ಕೂ ಮುನ್ನ ಏಕತಾ ನಡಿಗೆ ನಡೆಯಿತು.</p>.<p>‘ದೇಶದ ಮೊದಲ ಗೃಹ ಸಚಿವರಾಗಿದ್ದ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ‘ಏಕತಾ ನಡಿಗೆ’ ನಡೆಸಲಾಗಿದೆ’ ಎಂದು ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಅಶೋಕ ಕುಮಾರ ಪಾಳೇದ ಮಾಹಿತಿ ನೀಡಿದರು.</p>.<p>‘ಮಹಾತ್ಮ ಗಾಂಧೀಜಿಯವರ ಗ್ರಾಮಾಭಿವೃದ್ಧಿ ಪರಿಕಲ್ಪನೆಯ ಆಧಾರದ ಮೇರೆಗೆ ರೂಪುಗೊಂಡ ರಾಷ್ಟ್ರೀಯ ಸೇವಾ ಯೋಜನೆ ಉತ್ತಮ ನಾಗರಿಕರನ್ನು ರೂಪಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ನೂರಕ್ಕೂ ಹೆಚ್ಚು ಕಾರ್ಯಗಳೊಂದಿಗೆ ನಾಯಕತ್ವ ಗುಣ ಬೆಳೆಸುವ ಪ್ರಯತ್ನದಲ್ಲಿದೆ’ ಎಂದು ಅಭಿಪ್ರಾಯಪಟ್ಟರು.</p>.<p>‘ವಿದ್ಯಾರ್ಥಿಗಳನ್ನು ಪರಿಪೂರ್ಣ ನಾಗರಿಕರನ್ನಾಗಿ ಮಾಡಲು ಸೇವಾ ಯೋಜನೆ ಉತ್ತಮ ತಾಣ. ಪಠ್ಯೇತರ ಚಟುವಟಿಕೆಗಳಿಗೆ ಇದೊಂದು ವಿಸ್ತೃತ ವೇದಿಕೆ. ಸೇವಾ ಮನೋಭಾವ, ದೇಶಾಭಿಮಾನ, ಸಾಮಾಜಿಕ ಕಳಕಳಿ, ಪರಿಸರ ಕಾಳಜಿಯನ್ನು ಮೂಡಿಸುತ್ತದೆ’ ಎಂದರು.</p>.<p>‘ಪ್ರಜಾವಾಣಿ’ ಬ್ಯೂರೋ ಮುಖ್ಯಸ್ಥ ಸಿದ್ದಯ್ಯ ಹಿರೇಮಠ, ‘ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡ ಎಲ್ಲರೂ ನಾಯಕರಾಗಿ ಬೆಳೆಯಲು ಸಾಧ್ಯವಾಗಲಿಲ್ಲ. ಮಹಾತ್ಮ ಗಾಂಧೀಜಿ, ಸರ್ದಾರ್ ವಲ್ಲಭಬಾಯಿ ಪಟೇಲ್ ಸೇರಿ ಕೆಲವರು ಮಾತ್ರ ನಾಯಕರಾಗಿ ರೂಪುಗೊಂಡರು. ಭಾರತದ ಒಕ್ಕೂಟ ವ್ಯವಸ್ಥೆ ಬಲಪಡಿಸಿದ ಪಟೇಲ್ ಅವರ ಕಾರ್ಯ ಅವಿಸ್ಮರಣೀಯ’ ಎಂದರು.</p>.<p>‘ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ವಿದ್ಯಾರ್ಥಿಗಳು ಸಮೂಹ ಮಾಧ್ಯಮದ ಒಡನಾಟ ಬೆಳೆಸಿಕೊಳ್ಳಬೇಕು. ಪತ್ರಿಕೆ, ನಿಯತಕಾಲಿಕೆಗಳನ್ನು ಅಧ್ಯಯನ ಮಾಡಿ ಪ್ರಚಲಿತ ವಿದ್ಯಮಾನಗಳನ್ನು ತಿಳಿದುಕೊಳ್ಳಬೇಕು. ಸಾಮಾಜಿಕ ಜಾಲತಾಣಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಮೊಬೈಲ್ ಫೋನ್ ಬಳಕೆ ಕೂಡ ಅಧ್ಯಯನಕ್ಕೆ ಪೂರಕವಾಗಿರಬೇಕು’ ಎಂದು ಸಲಹೆ ನೀಡಿದರು.</p>.<p>ರಾಷ್ಟ್ರೀಯ ಸೇವಾ ಯೋಜನೆಯ ಜಿಲ್ಲಾ ನೋಡೆಲ್ ಅಧಿಕಾರಿ ಎಚ್.ಆರ್. ತಿಪ್ಪೇಸ್ವಾಮಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ 150ನೇ ಜನ್ಮ ದಿನ ಹಾಗೂ ರಾಷ್ಟ್ರೀಯ ಏಕತಾ ದಿನಾಚರಣೆಯ ಅಂಗವಾಗಿ ದಾವಣಗೆರೆ ವಿಶ್ವವಿದ್ಯಾಲಯದ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ‘ಏಕತಾ ನಡಿಗೆ’ಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ (ಎನ್ಎಸ್ಎಸ್) ವಿದ್ಯಾರ್ಥಿಗಳು ಹೆಜ್ಜೆಹಾಕಿದರು.</p>.<p>ವಿಶ್ವವಿದ್ಯಾಲಯದ ಶಿವಗಂಗೋತ್ರಿ ಆವರಣದ ಅತಿಥಿಗೃಹದಿಂದ ಆರಂಭವಾದ ನಡಿಗೆ ಮಾನವಿಕ ನಿಕಾಯದ ಕಟ್ಟಡದವರೆಗೆ ನಡೆಯಿತು. ದೇಶಭಕ್ತಿ ಹಾಗೂ ಸರ್ದಾರ್ ವಲ್ಲಭಬಾಯಿ ಪರವಾದ ಘೋಷಣೆಗಳು ಮೊಳಗಿದವು. ನಾಯಕತ್ವ ತರಬೇತಿ ಶಿಬಿರದ ವಿಶೇಷ ಉಪನ್ಯಾಸಕ್ಕೂ ಮುನ್ನ ಏಕತಾ ನಡಿಗೆ ನಡೆಯಿತು.</p>.<p>‘ದೇಶದ ಮೊದಲ ಗೃಹ ಸಚಿವರಾಗಿದ್ದ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ‘ಏಕತಾ ನಡಿಗೆ’ ನಡೆಸಲಾಗಿದೆ’ ಎಂದು ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಅಶೋಕ ಕುಮಾರ ಪಾಳೇದ ಮಾಹಿತಿ ನೀಡಿದರು.</p>.<p>‘ಮಹಾತ್ಮ ಗಾಂಧೀಜಿಯವರ ಗ್ರಾಮಾಭಿವೃದ್ಧಿ ಪರಿಕಲ್ಪನೆಯ ಆಧಾರದ ಮೇರೆಗೆ ರೂಪುಗೊಂಡ ರಾಷ್ಟ್ರೀಯ ಸೇವಾ ಯೋಜನೆ ಉತ್ತಮ ನಾಗರಿಕರನ್ನು ರೂಪಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ನೂರಕ್ಕೂ ಹೆಚ್ಚು ಕಾರ್ಯಗಳೊಂದಿಗೆ ನಾಯಕತ್ವ ಗುಣ ಬೆಳೆಸುವ ಪ್ರಯತ್ನದಲ್ಲಿದೆ’ ಎಂದು ಅಭಿಪ್ರಾಯಪಟ್ಟರು.</p>.<p>‘ವಿದ್ಯಾರ್ಥಿಗಳನ್ನು ಪರಿಪೂರ್ಣ ನಾಗರಿಕರನ್ನಾಗಿ ಮಾಡಲು ಸೇವಾ ಯೋಜನೆ ಉತ್ತಮ ತಾಣ. ಪಠ್ಯೇತರ ಚಟುವಟಿಕೆಗಳಿಗೆ ಇದೊಂದು ವಿಸ್ತೃತ ವೇದಿಕೆ. ಸೇವಾ ಮನೋಭಾವ, ದೇಶಾಭಿಮಾನ, ಸಾಮಾಜಿಕ ಕಳಕಳಿ, ಪರಿಸರ ಕಾಳಜಿಯನ್ನು ಮೂಡಿಸುತ್ತದೆ’ ಎಂದರು.</p>.<p>‘ಪ್ರಜಾವಾಣಿ’ ಬ್ಯೂರೋ ಮುಖ್ಯಸ್ಥ ಸಿದ್ದಯ್ಯ ಹಿರೇಮಠ, ‘ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡ ಎಲ್ಲರೂ ನಾಯಕರಾಗಿ ಬೆಳೆಯಲು ಸಾಧ್ಯವಾಗಲಿಲ್ಲ. ಮಹಾತ್ಮ ಗಾಂಧೀಜಿ, ಸರ್ದಾರ್ ವಲ್ಲಭಬಾಯಿ ಪಟೇಲ್ ಸೇರಿ ಕೆಲವರು ಮಾತ್ರ ನಾಯಕರಾಗಿ ರೂಪುಗೊಂಡರು. ಭಾರತದ ಒಕ್ಕೂಟ ವ್ಯವಸ್ಥೆ ಬಲಪಡಿಸಿದ ಪಟೇಲ್ ಅವರ ಕಾರ್ಯ ಅವಿಸ್ಮರಣೀಯ’ ಎಂದರು.</p>.<p>‘ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ವಿದ್ಯಾರ್ಥಿಗಳು ಸಮೂಹ ಮಾಧ್ಯಮದ ಒಡನಾಟ ಬೆಳೆಸಿಕೊಳ್ಳಬೇಕು. ಪತ್ರಿಕೆ, ನಿಯತಕಾಲಿಕೆಗಳನ್ನು ಅಧ್ಯಯನ ಮಾಡಿ ಪ್ರಚಲಿತ ವಿದ್ಯಮಾನಗಳನ್ನು ತಿಳಿದುಕೊಳ್ಳಬೇಕು. ಸಾಮಾಜಿಕ ಜಾಲತಾಣಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಮೊಬೈಲ್ ಫೋನ್ ಬಳಕೆ ಕೂಡ ಅಧ್ಯಯನಕ್ಕೆ ಪೂರಕವಾಗಿರಬೇಕು’ ಎಂದು ಸಲಹೆ ನೀಡಿದರು.</p>.<p>ರಾಷ್ಟ್ರೀಯ ಸೇವಾ ಯೋಜನೆಯ ಜಿಲ್ಲಾ ನೋಡೆಲ್ ಅಧಿಕಾರಿ ಎಚ್.ಆರ್. ತಿಪ್ಪೇಸ್ವಾಮಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>